Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತೀಯ ಸನಾತನ ಧರ್ಮ ರಕ್ಷಿಸಿದ ಶಂಕರಾಚಾರ್ಯರು

Advertisement

ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ: ಆದಿ ಶಂಕರಾಚಾರ್ಯರು ಸಾಂಸ್ಕೃತಿಕ ಆಧ್ಯಾತ್ಮಿಕ ಮತ್ತು ರಾಷ್ಟ್ರೀಯ ಏಕತೆಯನ್ನು ಉಂಟು ಮಾಡಿ  ಭದ್ರ ಬುನಾದಿ ಹಾಕಿ ಭಾರತೀಯ ಸನಾತನ ಧರ್ಮವನ್ನು ರಕ್ಷಿಸಿದವರು  ಎಂದು ಸಂಸ್ಕೃತಿ ಚಿಂತಕ,ಶ್ರೀ ಶಂಕರ ಅಭಿಯಾನಂ ಕರ್ನಾಟಕದ ಪ್ರಧಾನರಾದ ಸುರೇಶ್ ಎನ್ ಋಗ್ವೇದಿ ತಿಳಿಸಿದರು.
 

ಅವರು ನಗರದ ಜೈಹಿಂದ್ ಕಟ್ಟೆಯ ಋಗ್ವೇದಿ ಕುಟೀರದಲ್ಲಿ ನಡೆದ ವಿಶ್ವ ತತ್ವಜ್ಞಾನಿಗಳ ದಿನ ಹಾಗೂ ಶಂಕರ ಜಯಂತಿ ಅಂಗವಾಗಿ ಮಾತನಾಡುತ್ತಾ ಇಡೀ ಪ್ರಪಂಚಕ್ಕೆ ಅತ್ಯಂತ ಅಗತ್ಯವಾದ ಅದ್ವೈತ ಸಿದ್ದಾಂತವನ್ನು ನೀಡಿ ಮಾನವ ಎಲ್ಲಾ ಕ್ಷೇತ್ರದಲ್ಲೂ ಸಮಗ್ರವಾಗಿ ಅಭಿವೃದ್ಧಿ ಸಾಧಿಸುವ ದಿವ್ಯ ಚಿಂತನೆಗಳನ್ನು ನೀಡಿದ ಮಹಾವ್ಯಕ್ತಿ ಆದೇಶಂಕರರು ಭಾರತ ಮಾತ್ರವಲ್ಲದೆ ಇಡೀ ಜಗತ್ತಿಗೆ ಆದರ್ಶಪ್ರಾಯರು. ಅವರ ತತ್ವ ಸಿದ್ಧಾಂತಗಳ ಅನುಸರಣೆಯಿಂದ ಮಾನವ ಕಲ್ಯಾಣ ಸಾಧ್ಯವೆಂದು ತಿಳಿಸಿ,ಅದ್ವೈತ ಸಿದ್ದಾಂತದ ಅಹಂ ಬ್ರಹ್ಮಾಸ್ಮಿ ತತ್ವವು ವಿಶ್ವ ವ್ಯಾಪಕತೆಯನ್ನು ಹೊಂದಿದೆ ಎಂದು ತಿಳಿಸಿದರು.

 ಮೈಸೂರಿನ ಗಾನ ಚಂದ್ರ ಕಲಾಬಳಗ ಅಧ್ಯಕ್ಷರು ಹಾಗೂ ಗಾಯಕರು ಇಂಜಿನಿಯರ್ ಆದ ಸುಧೀಂದ್ರರವರು ಮಾತನಾಡಿ ಆದೇಶಂ ತತ್ವಗಳು ಮತ್ತು ಅವರ ಬೋಧನೆಗಳು ಅತ್ಯಂತ ಸರಳವಾಗಿದ್ದು ಸರ್ವರೂ ಅನುಸರಿಸಬಹುದಾದ ಚಿಂತನೆಯನ್ನು ನೀಡಿದ್ದಾರೆ ಭಾರತದ ನಾಲ್ಕು ದಿಕ್ಕುಗಳಲ್ಲೂ ಮಠಗಳನ್ನು ಸ್ಥಾಪಿಸಿ ಏಕತೆಯನ್ನು ಮೂಡಿಸಿದ ಆದಿಶಂಕರರ ಜಯಂತಿಯನ್ನು ಭಾರತ ಸರ್ಕಾರ ತತ್ವಜ್ಞಾನಿಗಳ ದಿನ ಎಂದು ಘೋಷಿಸಿರುವುದು ಬಹಳ ಸಂತೋಷವೆಂದು ತಿಳಿಸಿ ಋಗ್ವೇದಿ ಕುಟೀರ ದಲ್ಲಿ ಸಾವಿರಾರು ಕಾರ್ಯಕ್ರಮಗಳನ್ನು ಜೈಹಿಂದ್ ಪ್ರತಿಷ್ಠಾನದ ಮೂಲಕ ಆಚರಿಸುವ ಮೂಲಕ ಆದರ್ಶವಾದ ಕಾರ್ಯವನ್ನು ಮಾಡುತ್ತಿದೆ ಎಂದು ತಿಳಿಸಿದರು.
 

ಸುತೆಂದ್ರ ರವರನ್ನು ಆತ್ಮೀಯವಾಗಿ ಗೌರವಿಸಲಾಯಿತು . ಕಾರ್ಯಕ್ರಮದಲ್ಲಿ ಜೈ ಹಿಂದ್ ಪ್ರತಿಷ್ಠಾನದ ಕುಸುಮ ಋಗ್ವೇದಿ, ಶರಣ್ಯ, ಶ್ರಾವ್ಯ,ಕಾವ್ಯ ಪೂಜಾ ಲಕ್ಷ್ಮಿ, ಐಶ್ವರ್ಯ ಮುಂತಾದವರು ಇದ್ದರು

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಂಗಲ್ಯ, ಜನಿವಾರ ವಿವಾದ: ಕಾಂಗ್ರೆಸ್‌ಸರ್ಕಾರದ ವಿರುದ್ಧ ಅಶೋಕ್ ತೀವ್ರ ವಾಗ್ದಾಳಿಭಕ್ತಿಭಾವದ ಶ್ರೀ ರಾಮನವಮಿ ಆಚರಣೆ; ಆರ್. ಅಶೋಕ್ ಭಾಗಿದಾವಣಗೆರೆ ವಿಶ್ವವಿದ್ಯಾಲಯದ ಬಳಿ ಸುಸಜ್ಜಿತ ಬಸ್ ನಿಲ್ದಾಣ: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ನವೋದ್ಯಮ ಮತ್ತು ಕೈಗಾರಿಕಾ ಕ್ರಾಂತಿಯ ನಾಯಕತ್ವ: ಕರ್ನಾಟಕದ ಕಹಳೆಬಂಗಾಳದಲ್ಲಿ ಚುನಾವಣಾ ಹಿಂಸಾಚಾರ: ಬಿಜೆಪಿ ಅಭ್ಯರ್ಥಿಯ ಮೇಲೆ ಹಲ್ಲೆ;- ಸಿ.ಟಿ. ರವಿ ಆಕ್ರೋಶ"ಗ್ಯಾರಂಟಿ ಬೇಡ, ಜೀವಕ್ಕೆ ಗ್ಯಾರಂಟಿ ಕೊಡಿ": ನಿಖಿಲ್ ಕುಮಾರಸ್ವಾಮಿ ಆಗ್ರಹಶರಾವತಿ ಯೋಜನೆಗೆ ಕೇಂದ್ರದ ಅಸಹಕಾರ: ಸಿದ್ದರಾಮಯ್ಯ ತೀವ್ರ ಅಸಮಾಧಾನಗ್ರಾಮ ಪಂಚಾಯತ್ ಅನುದಾನ ಬಿಡುಗಡೆಗೆ ತಾರತಮ್ಯ: ಕೇಂದ್ರದ ವಿರುದ್ಧ ಸಿಎಂ ಆಕ್ರೋಶಕೇಂದ್ರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ: "ಕರ್ನಾಟಕಕ್ಕೆ ಸಿಗದ ಮೂಲಸೌಕರ್ಯ ನ್ಯಾಯ"ಬೆಂಗಳೂರು ಕೃಷಿ ತಂತ್ರಜ್ಞಾನದ ರಾಜಧಾನಿಯಾಗಲಿ: ಸಿಎಂ ಸಿದ್ದರಾಮಯ್ಯ ಆಶಯ