Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಧಿಕ ಉಷ್ಣಾಂಶ:ನಿಂಬೆ ಶರಬತ್, ಮಜ್ಜಿಗೆ ಮತ್ತಿತರ ತಂಪು ಪಾನೀಯ ಸೇವಿಸಿ- ಜಿಲ್ಲಾಧಿಕಾರಿ

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು:
ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗಿದ್ದು
, ಇದರಿಂದ ಬಿಸಿ ಶಾಖದ ಅಲೆಯಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಸಲಹೆ ನೀಡಲಾಗಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ.

        ಸಾರ್ವಜನಿಕರು ರೇಡಿಯೋ, ಟಿ.ವಿ., ದಿನ ಪತ್ರಿಕೆಗಳಲ್ಲಿ ಬರುವ ಅತಿಯಾದ ಬಿಸಿಲಿನ ಕುರಿತು ಮುನ್ಸೂಚನೆಗಳನ್ನು ಪಡೆದುಕೊಳ್ಳಬೇಕು.  ಬಾಯಾರಿಕೆಯಲ್ಲದಿದ್ದರೂ ಸಾಕ? ಮತ್ತು ಸಾಧ್ಯವಾದ? ಹೆಚ್ಚಾಗಿ ನೀರನ್ನು ಕುಡಿಯಬೇಕು.  ಹಗುರವಾದ ತಿಳಿ ಬಣ್ಣದ ಸಡಿಲವಾದ ಮತ್ತು ರಂಧ್ರವುಳ್ಳ ಹತ್ತಿ ಬಟ್ಟೆಗಳನ್ನು ಧರಿಸಬೇಕು.  ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕ, ಟೋಪಿ, ಬೂಟು ಅಥವಾ ಚಪ್ಪಲಿಗಳನ್ನು ಬಳಸಬೇಕು.

        ಬಸ್ಸಿನಲ್ಲಿ ದೂರದ ಪ್ರಯಾಣವನ್ನು ರಾತ್ರಿ ವೇಳೆ ಮಾಡುವುದು ಉತ್ತಮ. ಒಂದು ವೇಳೆ ಪ್ರಯಾಣ ಮಾಡುವ ಸಂದರ್ಭ ಬಂದರೆ, ಪ್ರಯಾಣ ಮಾಡುವಾಗ ತಮ್ಮೊಂದಿಗೆ ನೀರನ್ನು ತೆಗೆದುಕೊಂಡು ಹೋಗಬೇಕು. 

        ಹೊರಗೆ ಕೆಲಸ ಮಾಡುತ್ತಿದ್ದರೆ ಟೋಪಿ ಅಥವಾ ಛತ್ರಿಯನ್ನು ಬಳಸಬೇಕು. ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಸಹ ಬಳಸಬೇಕು.  ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಶರಬತ್, ನಿಂಬೆ ಹಣ್ಣಿನ ಶರಬತ್, ಮಜ್ಜಿಗೆ ಇತ್ಯಾದಿಗಳನ್ನು ಬಳಸುವುದರಿಂದ ದೇಹವನ್ನು ಪುನಃ ತಂಪಾಗಿಡಲು ಸಹಾಯ ಮಾಡುತ್ತದೆ.

        ಪ್ರಾಣಿ/ಪಕ್ಷಿಗಳನ್ನು ನೆರಳಿನಲ್ಲಿರಿಸಿ ಅವುಗಳಿಗೆ ಕುಡಿಯಲು ಸಾಕ? ನೀರು ನೀಡಬೇಕು.  ಆದ? ಫ್ಯಾನುಗಳನ್ನು ಬಳಸಬೇಕು.  ಆಗಾಗ್ಗೆ ತಣ್ಣೀರಿನಲ್ಲಿ ಸ್ನಾನ ಮಾಡಬೇಕು. ಕೆಲಸದ ಸಮಯವನ್ನು ಆದ? ತಂಪಾದ ಸಮಯದಲ್ಲಿ ಮಾಡಬೇಕು.

        ಮಾಲೀಕರು ಕೆಲಸದ ಸ್ಥಳದಲ್ಲಿ ತಂಪಾದ ಕುಡಿಯುವ ನೀರನ್ನು ಒದಗಿಸಬೇಕು. ಕೆಲಸ ನಿರ್ವಹಿಸುವ ಗರ್ಭಿಣಿ ಮಹಿಳೆಯರು ಮತ್ತು ಅನಾರೋಗ್ಯದಲ್ಲಿರುವ ಕಾರ್ಮಿಕರಿಗೆ ಹೆಚ್ಚಿನ ಗಮನ ನೀಡಬೇಕು. ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಆನಾನಸ್, ಸೌತೆಕಾಯಿ, ಎಳನೀರನ್ನು ಹೆಚ್ಚಾಗಿ ಸೇವಿಸಬೇಕು.

        ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳು, ಗರ್ಭಿಣಿಯರು ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ಇತರೆ ಆರೋಗ್ಯ ಸಮಸ್ಯೆಗಳಿರುವವರು ಅದರಲ್ಲೂ ವಿಶೇ?ವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಹೆಚ್ಚು ಜಾಗರೂಕತೆ ವಹಿಸಬೇಕು.

         ಮಕ್ಕಳು ಹಾಗೂ ಸಾಕು ಪ್ರಾಣಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಿದ ವಾಹನಗಳ ಹತ್ತಿರ ಬಿಡಬಾರದು.  ಕಪ್ಪು ಬಟ್ಟೆ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸುವುದನ್ನು ತಪ್ಪಿಸಬೇಕು. ಹೊರಗಿನ ತಾಪಮಾನ ಹೆಚ್ಚಾದಾಗ ಶ್ರಮದಾಯಕ ಚಟುವಟಿಕೆಗಳನ್ನು ಹಾಗೂ ಮಧ್ಯಾಹ್ನ ೧೨ ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಬೇಕು.

        ಬಿಸಿಲಿನ ಸಮಯದಲ್ಲಿ ಅಡುಗೆ ಮಾಡಬಾರದು. ಅಡುಗೆ ಪ್ರದೇಶಗಳಲ್ಲಿ ಸಮರ್ಪಕವಾಗಿ ಗಾಳಿಯಾಡಲು ಬಾಗಿಲು ಮತ್ತು ಕಿಟಕಿಗಳನ್ನು ತೆರೆಯಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಹಾನಿಕಾರಕ ತಂಪು ಪಾನೀಯಗಳನ್ನು ಸೇವಿಸಬಾರದು.  ಇಂತಹ ಪಾನೀಯಗಳು ಹೊಟ್ಟೆ ನೋವನ್ನು ಉಂಟು ಮಾಡುತ್ತವೆ.

        ಹಾನಿಕಾರಕವಾದ ಆಹಾರ ಮತ್ತು ಹಳಸಿದ ಆಹಾರವನ್ನು ಸೇವಿಸಬಾರದು. ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ