Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಲ್ಪಾ ಶ್ರೀನಿವಾಸ್ ಚಿತ್ರಕ್ಕೆ ಚಾಲನೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಿಲ್ಪಾ ಶ್ರೀನಿವಾಸ್' ಚಿತ್ರಕ್ಕೆ ಶಿಲ್ಪಾ ಶ್ರೀನಿವಾಸ್ ಅವರೇ  ನಾಯಕ ಹೊಸಕೋಟೆಯ ಗಟ್ಟಿಗನಬ್ಬೆಯಲ್ಲಿ ಶಿಲ್ಪಾ ಶ್ರೀನಿವಾಸ್  ಚಿತ್ರಕ್ಕೆ ಚಾಲನೆ ನೀಡಿದರು.   

ನಮ್ಮ ಚಲನಚಿತ್ರೋದ್ಯಮ ಎಲ್ಲರಿಗೂ ಅವಕಾಶ ಕೊಡುತ್ತೆ. ನಿಜವಾಗಿ ಸಾಧನೆ ಮಾಡಬೇಕೆಂದು ಇಲ್ಲಿಗೆ ಬಂದವರು ಚಿತ್ರರಂಗವನ್ನು ತನ್ನ ತಾಯಿ ಎಂದು ಭಾವಿಸುತ್ತಾರೆ. ಕಲಾಮಾತೆ ಎಂದು ಆರಾಧಿಸುತ್ತಾರೆ.

ಇನ್ನು ಕೆಲವರು ಬರೀ ಶೋಕಿಗಾಗಿ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟು ತನ್ನ ಹಿರಿಯರು, ಅಪ್ಪ, ಅಮ್ಮ ಕಷ್ಟಪಟ್ಟು ಕೂಡಿಟ್ಟ  ಸಂಪಾದನೆಯ  ಹಣವನ್ನು ವ್ಯಯಿಸುತ್ತಾರೆ. ಕಲಾಮಾತೆಯನ್ನು ಹಗುರವಾಗಿ ನೋಡುತ್ತಾರೆ. ಇಂಥವರಿಂದಾಗಿ ಚಿತ್ರರಂಗ ಅಧೋಗತಿಗೆ ಇಳಿಯುತ್ತಿದೆ.

ಇದನ್ನು ಮಟ್ಟ ಹಾಕಲು ಕಲಾಮಾತೆಯ ನಿಜವಾದ ಆರಾದಕನೊಬ್ಬ  ಏನೆಲ್ಲಾ ಮಾಡುತ್ತಾನೆ, ಅಂಥವರಿಗೆ ಹೇಗೆ ಬದ್ದಿ ಕಲೊಸುತ್ತಾನೆ ಎಂಬ ಕಥಾಹಂದರ ಒಳಗೊಂಡ ಚಿತ್ರವೊಂದು ಇತ್ತೀಚೆಗೆ ಸೆಟ್ಟೇರಿದೆ. ಆ ಚಿತ್ರದ ಹೆಸರು 'ಶಿಲ್ಪಾ ಶ್ರೀನಿವಾಸ್.

ಇತ್ತೀಚೆಗೆ ಈ ಚಿತ್ರಕ್ಕೆ ಹೊಸಕೋಟೆಯ ಗಟ್ಟಿಗನಬ್ಬೆ ಯಲ್ಲಿ‌ ಚಾಲನೆ ದೊರೆಯಿತು.  ನಟ, ಸಂಕಲನಕಾರ ನಾಗೇಂದ್ರ ಅರಸ್ ಅವರು ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು.



   ಈ ಚಿತ್ರದಲ್ಲಿ ಹಿರಿಯ ನಿರ್ಮಾಪಕರೂ ವಿತರಕರೂ ಪ್ರಸ್ತುತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಉಪಾಧ್ಯಕ್ಷ ಶಿಲ್ಪಾ ಶ್ರೀನಿವಾಸ್ ಅವರು ವಿಶೇಷ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

  ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಮುಗಿಲ ಮಲ್ಲಿಗೆ ಸಿನಿಮಾದ ನಿರ್ದೇಶಕ ಆರ್ .ಕೆ. ಗಾಂಧಿ ಅವರು ಶಿಲ್ಪಾ ಶ್ರೀನಿವಾಸ್ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಲಿದ್ದಾರೆ.

ಅನಿರುದ್ಧ ಶಾಸ್ತ್ರಿಅವರ  ಸಂಗೀತ, ಪ್ರತಾಪ್ ಭಟ್ ಅವರ  ಸಾಹಿತ್ಯ, ಥ್ರಿಲ್ಲರ್ ಮಂಜು ಅವರ ಸಾಹಸ, ಪ್ರಮೋದ್ ಭಾರತೀಯ ಅವರ  ಛಾಯಾಗ್ರಹಣನಾಗೇಂದ್ರ ಅರಸ್ ಅವರ ಸಂಕಲನ, ಮೋಹನ್ ಕುಮಾರ್ ಅವರ ಪ್ರಸಾದನ, ಮಲ್ಲಿಕಾರ್ಜನ್ ಅವರ  ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಕಿಶೋರ್ ಕಾಸರಗೋಡು, ಸ್ವಾತಿ ಲಿಂಗರಾಜ್ಪ್ರಿಯಾಂಕ, ಮಾಸ್ಟರ್ ಮನ್ವಿತ್, ಮಾಸ್ಟರ್ ಅಬ್ಯಂತ್, ಶೋಭರಾಜ್, ನಾಗೇಂದ್ರ ಅರಸ್, ಕಿರಣ್ ಕುಮಾರ್ ಗಟ್ಟಿಗನಬ್ಬೆ, ಸಿ.ಟಿ. ಜಯರಾಮ್, ಹೋಸಕೋಟೆ ಶಿವಕುಮಾರ್, ಲೋಕೇಶ್, ಮಾಸ್ಟರ್ ಮನ್ವಿತ್, ಮಾಸ್ಟರ್ ಅಬ್ಯಂತ್ ಮೊದಲಾದವರು ಈ ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ.

ಹೊಸಕೋಟೆ, ಚಿಕ್ಕಬಳ್ಳಾಪುರ ಅಲ್ಲದೆ ಬೆಂಗಳೂರಿನ  ಗಾಂಧಿನಗರದಲ್ಲಿ  ಒಟ್ಟು ಎರಡು ಹಂತಗಳಲ್ಲಿ ಶಿಲ್ಪಾ ಶ್ರೀನಿವಾಸ್ ಚಿತ್ರದ  ಚಿತ್ರೀಕರಣ ನಡೆಯಲಿದೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ