Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎತ್ತಿನಹೊಳೆ ಯೋಜನೆಗೆ ಕೇಂದ್ರದ ಶಾಕ್

Advertisement
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಬಯಲು ಸೀಮೆಯ ಐದಾರು ಜಿಲ್ಲೆಗಳಿಗೆ ಕುಡಿಯುವ ನೀರು ಹರಿಸುವ ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರ ಶಾಕ್ ನೀಡಿದೆ. ಹಾಸನ ಜಿಲ್ಲೆಯ ಸಕಲೇಶಪುರ ಪರಿಸರದಿಂದ ಆರಂಭವಾಗುವ ಈ ಯೋಜನೆಗೆ ಅಗತ್ಯವಿದ್ದ ಹೆಚ್ಚುವರಿ
423 ಎಕರೆ ಅರಣ್ಯ ಭೂಮಿ ಬಳಕೆಗೆ ಕೇಂದ್ರ ಪರಿಸರ ಸಚಿವಾಲಯ ಅನುಮೋದನೆ ನಿರಾಕರಿಸಿದೆ. ಇದರಿಂದ, ಯೋಜನೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಎದುರಾಗಿದೆ.


ಹಾಸನ ಮತ್ತು ತುಮಕೂರು ಜಿಲ್ಲೆಗಳ ವ್ಯಾಪ್ತಿಯ 432 ಎಕರೆ ಅರಣ್ಯ ಭೂಮಿಯನ್ನು ಗುರುತ್ವಾಕರ್ಷಣೆ ಕಾಲುವೆ ನಿರ್ಮಾಣಕ್ಕೆ ಬಳಸುವ ನಿಟ್ಟಿನಲ್ಲಿ ಈ ವರ್ಷದ ಮಾರ್ಚ್‌ನಲ್ಲಿ ಕೇಂದ್ರಕ್ಕೆ ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಲ್ಲಿಸಿತ್ತು. ಕೇಂದ್ರ ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿಯ ಅಧೀನದಲ್ಲಿದ್ದ ಡಿಐಜಿಎಫ್ ಪ್ರಣಿತಾ ಪೌಲ್ ನೇತೃತ್ವದ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಿತ್ತು.


ಜೂನ್ 26ರಂದು ದೆಹಲಿಯಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಹೆಚ್ಚುವರಿ ಅರಣ್ಯ ಭೂಮಿ ಬಳಕೆ ಪ್ರಸ್ತಾವನೆ ಕುರಿತು ಚರ್ಚೆಯಾಗಿತ್ತು. ಅಂತಿಮವಾಗಿ ಕೇಂದ್ರ ಅರಣ್ಯ ಇಲಾಖೆಯು ಹೆಚ್ಚುವರಿ ಅರಣ್ಯ ಭೂಮಿ ಬಳಕೆಗೆ ಅನುಮತಿ ನೀಡಿಲ್ಲ.

ಯೋಜನೆಗೆ ಅರಣ್ಯ ಭೂಮಿ ಬಳಕೆಗೆ ಕೇಂದ್ರ ಪರಿಸರ ಸಚಿವಾಲಯದಿಂದ ಅನುಮೋದನೆ ಲಭ್ಯವಾಗುವ ಮೊದಲೇ ಅರಣ್ಯ ಭೂಮಿ ಬಳಸಲಾಗಿದೆ ಎಂದು ಡಿಐಜಿಎಫ್ ಪ್ರಣಿತಾ ಪೌಲ್ ನೇತೃತ್ವದ ಅಧಿಕಾರಿಗಳ ತಂಡ ಕೇಂದ್ರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ತಿಳಿಸಿತ್ತು.


ಅನುಮೋದನೆ ಲಭ್ಯವಾಗುವ ಮೊದಲೇ ಅರಣ್ಯ ಭೂಮಿ ಬಳಸಿ ಯೋಜನೆಯಲ್ಲಿ ಭಾಗಿಯಾದ ಸರ್ಕಾರಿ ಅಧಿಕಾರಿಗಳು ಅರಣ್ಯ ನಿಯಮ ಉಲ್ಲಂಘಿಸಿರುವುದಾಗಿ ಸಮಿತಿಯು ವರದಿ ಸಲ್ಲಿಸಿದ್ದು, ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂಬ ಶಿಫಾರಸು ಮಾಡಿದೆ. ಜೊತೆಗೆ, ಲೋಪಗಳನ್ನು ಸರಿಪಡಿಸಿ ಸಮಜಾಯಿಷಿ ನೀಡಿದ ಬಳಿಕ ಮಾತ್ರ ಮುಂದಿನ ಸಭೆಯಲ್ಲಿ ಪ್ರಸ್ತಾವನೆ ಪರಿಗಣನೆಗೆ ಒಳಪಡಬಹುದೆಂದು ಸೂಚಿಸಿದೆ.

ಎತ್ತಿನಹೊಳೆ ಯೋಜನೆಗೆ 2016 ರಲ್ಲೇ 13.93 ಹೆಕ್ಟೇರ್ ಅರಣ್ಯ ಭೂಮಿ ಬಳಕೆಗೆ ಕೇಂದ್ರವು ಅನುಮೋದನೆ ನೀಡಿದ್ದು, 33 ಷರತ್ತುಗಳನ್ನು ವಿಧಿಸಿತ್ತು. ಆದರೆ ಬಹುತೇಕ ಷರತ್ತುಗಳನ್ನು ಈವರೆಗೆ ಪಾಲನೆ ಮಾಡಲಾಗಿಲ್ಲ. ಕಾಮಗಾರಿ ವೇಳೆ ಭೂಕುಸಿತ, ಮಣ್ಣಿನ ಕೊರೆತ, ಮನೆಗಳ ಹಾನಿ ಮುಂತಾದ ಪರಿಸರ ಭೀತಿಗಳು ಉಂಟಾಗಿದ್ದು, ಯಾವುದೇ ಪರಿಹಾರ ವ್ಯವಸ್ಥೆ ಕಲ್ಪಿಸಲಾಗಿಲ್ಲ ಎಂಬ ತೀವ್ರ ಆಕ್ಷೇಪಗಳನ್ನು ಎನ್‌ಜಿಟಿ ಮೇಲ್ವಿಚಾರಣಾ ತಂಡವು 2019ರ ವರದಿಯಲ್ಲಿ ಉಲ್ಲೇಖಿಸಿತ್ತು.

ಎತ್ತಿನಹೊಳೆ ಯೋಜನೆ?
ಎತ್ತಿನಹೊಳೆ ನದಿಯಿಂದ ಸುಮಾರು 24 ಟಿಎಂಸಿ ನೀರನ್ನು ಬಯಲುಸೀಮೆಯ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂಗಳೂರು, ರಾಮನಗರ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ಹರಿಸುವ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದೆ. ಯೋಜನೆಯ ಮೊದಲ ಹಂತದ ಕಾಮಗಾರಿ 2024ರ ಸೆಪ್ಟೆಂಬರ್​​ನಲ್ಲಿ ಸಕಲೇಶಪುರದಲ್ಲಿ ಉದ್ಘಾಟನೆಯಾಗಿತ್ತು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ