Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಯಿ ಮಾಹಿತಿನಲ್ಲಿ ರೈತರ ಮೂಗಿಗೆ ತುಪ್ಪ ಸವರುವ ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೆಆರ್‌ಎಸ್‌ ಅಣೆಕಟ್ಟೆ ನಿರ್ಮಾಣವಾದ ನಂತರ 94 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಜೂನ್‌ ತಿಂಗಳಲ್ಲೇ ಡ್ಯಾಂ ಭರ್ತಿಯಾಗುತ್ತಿರುವುದು ಕಾವೇರಿ ಜಲನಯಯ ಪ್ರದೇಶದ ರೈತರಲ್ಲಿ ಸಂತಸ ಮೂಡಿಸಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು.

ಆದರೆ ದೇವರು ಕೊಟ್ಟರೂ ಪೂಜಾರಿ ಕೊಡಲಿಲ್ಲ ಎಂಬಂತೆ ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಿ ನಾಲೆಗಳಿಗೆ ನೀರು ಹರಿಸುತ್ತೇವೆ, ಕೆರೆ ತುಂಬಿಸುತ್ತೇವೆ ಎಂದು ಬಾಯಿ ಮಾಹಿತಿನಲ್ಲಿ ರೈತರ ಮೂಗಿಗೆ ತುಪ್ಪ ಸವರಿ, ಎಂದಿನಂತೆ I.N.D.I ಮಿತ್ರಕೂಟದ ಡಿಎಂಕೆ ಸರ್ಕಾರ ಹಾಗೂ ರಾಹುಲ್ ಗಾಂಧಿ ಅವರ ಪರಮಾಪ್ತ ಮಿತ್ರ ಸಿಎಂ ಸ್ಟಾಲಿನ್ ಅವರನ್ನು ಮೆಚ್ಚಿಸಲು ತಮಿಳುನಾಡಿಗೆ ಎಗ್ಗಿಲ್ಲದೆ ನೀರು ಹರಿಸುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ, ತಾವು ಬಾಗಿನ ಅರ್ಪಿಸಿ ನಾಲೆಗಳಿಗೆ ನೀರು ಬಿಡುತ್ತೇವೆ, ಕೆರೆಗಳನ್ನು ತುಂಬಿಸುತ್ತೇವೆ ಎಂದು ಘೋಷಣೆ ಮಾಡಿ ಅಧಿಕಾರಿಗಳಿಗೆ ಸೂಚನೆ ಕೊಟ್ಟು 5 ದಿನ ಕಳೆದಿದೆ. ಆದರೂ ಅಧಿಕಾರಿಗಳು ತಮ್ಮ ಮಾತಿಗೆ ಕ್ಯಾರೆ ಎನ್ನದೆ ತಮಿಳುನಾಡಿಗೆ ಎಗ್ಗಿಲ್ಲದೆ ಧಾರಾಳವಾಗಿ ಹರಿಬಿಡುತ್ತಿದ್ದಾರೆ.

ಅಧಿಕಾರಿಗಳು ತಮ್ಮ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಕೊಡುತ್ತಿಲ್ಲವೋ ಅಥವಾ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ ಅವರು ತಮ್ಮ ಇಲಾಖೆಯ ಅಧಿಕಾರಿಗಳಿಗೆ ತಮ್ಮ ಸೂಚನೆ ಧಿಕ್ಕರಿಸಿ ತಮಿಳುನಾಡಿಗೆ ನೀರು ಹರಿಸುವುದನ್ನು ಮುಂದುವರೆಸಲು ಸೂಚನೆ ಕೊಟ್ಟಿದ್ದಾರೋ? ಅಥವಾ ನಿಮ್ಮ ಹಾಗು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವೆ ನಡೆಯುತ್ತಿರುವ ಶೀತಲ ಸಮರ ಅಧಿಕಾರಿಗಳಲ್ಲಿ ಗೊಂದಲ ಉಂಟು ಮಾಡಿದೆಯೋ? ಎಂದು ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಉತ್ತಮ ಮಳೆಯಾಗಿರುವಾಗ ಅದನ್ನ ಬಳಿಸಿಕೊಂಡು, ನಾಲೆಗಳಿಗೆ ನೀರು ಹರಿಸಿ, ಕೆರೆ ತುಂಬಿಸಿ ಕರ್ನಾಟಕದ ರೈತರಿಗೆ ಅನುಕೂಲ ಮಾಡಿಕೊಡಬೇಕಾದ ರಾಜ್ಯ ಸರ್ಕಾರ ತಮಿಳುನಾಡಿಗೆ ಬೇಕಾಬಿಟ್ಟಿ ನೀರು ಹರಿಸುವುದು ನಾಡಿನ ಅನ್ನದಾತರಿಗೆ ಮಾಡುತ್ತಿರುವ ಮೋಸ, ನಯವಂಚನೆ.

ನಾವು ಸರ್ಕಾರಕ್ಕೆ 24 ಗಂಟೆ ಸಮಯ ಕೊಡುತ್ತೇವೆ. ನಾಳೆ ಸಂಜೆಯೊಳಗೆ ಕೆಆರ್ ಎಸ್ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಗಲೇ ಸೂಚನೆ ಕೊಟ್ಟಿರುವಂತೆ ನೀರನ್ನು ನಾಲೆಗಳಿಗೆ ಬಿಡಬೇಕು ಮತ್ತು ಕೆರೆಗಳನ್ನು ತುಂಬಿಸಲು ಬಳಸ ಬೇಕು. ಇಲ್ಲದಿದ್ದರೆ ನಾಳೆ ರಾತ್ರಿ ಕೆಆರ್ ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಅಶೋಕ್ ಎಚ್ಚರಿಕೆ ನೀಡಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ