LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಸಿಎಂ ಸ್ಥಾನಕ್ಕೆ ದಿಢೀರ್ ರಾಜೀನಾಮೆ!

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ರಾಜಕಾರಣದಲ್ಲಿ ಹಠಾತ್ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕರ್ನಾಟಕ ರಾಜಕೀಯದಲ್ಲಿ ಹೊಸದೊಂದು ಸಂಚಲನ ಸೃಷ್ಟಿಯಾಗಿದೆ.

ರಾಜೀನಾಮೆ ನೀಡಿದ ತಕ್ಷಣವೇ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ತಮ್ಮ ನಿರ್ಧಾರದ ಹಿಂದಿನ ಕಾರಣಗಳನ್ನು ಬಿಚ್ಚಿಟ್ಟಿದ್ದಾರೆ.

ರಾಜೀನಾಮೆ ಪತ್ರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರ:
ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಅವರು, "ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಸದ್ಯ ನಗರದಲ್ಲಿ ಇಲ್ಲದ ಕಾರಣ, ನಾನು ನನ್ನ ರಾಜೀನಾಮೆ ಪತ್ರವನ್ನು ಅವರ ವಿಶೇಷ ಕಾರ್ಯದರ್ಶಿಗೆ ತಲುಪಿಸಿದ್ದೇನೆ. ಸಾಂವಿಧಾನಿಕ ನಿಯಮಾವಳಿಗಳ ಪ್ರಕಾರ ರಾಜ್ಯಪಾಲರು ಶೀಘ್ರದಲ್ಲೇ ನನ್ನ ರಾಜೀನಾಮೆಯನ್ನು ಅಂಗೀಕರಿಸಲಿದ್ದಾರೆ ಎಂಬ ವಿಶ್ವಾಸ ನನಗಿದೆ" ಎಂದು ಸ್ಪಷ್ಟಪಡಿಸಿದರು.

ಹೈಕಮಾಂಡ್ ಆದೇಶಕ್ಕೆ ತಲೆಬಾಗಿದ 'ಸಿದ್ದು':
"
ಹೈಕಮಾಂಡ್ ಸೂಚಿಸಿದ ತಕ್ಷಣ ನಾನು ರಾಜೀನಾಮೆ ನೀಡುತ್ತೇನೆ ಎಂದು ಈ ಹಿಂದೆಯೇ ಹಲವು ಬಾರಿ ಹೇಳಿದ್ದೆ. ಎರಡು ದಿನಗಳ ಹಿಂದೆಯಷ್ಟೇ ಹೈಕಮಾಂಡ್‌ನಿಂದ ನನಗೆ ನಿರ್ದೇಶನ ಬಂದಿತ್ತು. ಅದರಂತೆ ಇಂದು ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ" ಎಂದು ಸಿದ್ದರಾಮಯ್ಯ ತಿಳಿಸಿದರು. ಇದೇ ವೇಳೆ ತಮಗೆ ಎರಡು ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಜನರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸಿದರು.

ಸಾಧನೆಗಳ ಮೆಲುಕು: 'ನನ್ನ ಜೀವನ ತೆರೆದ ಪುಸ್ತಕ':
ತಮ್ಮ ಆಡಳಿತಾವಧಿಯ ಸಾಧನೆಗಳನ್ನು ಸ್ಮರಿಸಿದ ಸಿದ್ದರಾಮಯ್ಯ, "ನಾವು ನೀಡಿದ್ದ 550 ಭರವಸೆಗಳಲ್ಲಿ ಸುಮಾರು 300 ಭರವಸೆಗಳನ್ನು ಈಗಾಗಲೇ ಈಡೇರಿಸಿದ್ದೇವೆ. ಇದರೊಂದಿಗೆ ಐದು ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆ. ಜನರಿಗೆ ನೀಡಿದ ಯಾವುದೇ ಮಾತಿನಿಂದ ನಾನು ಹಿಂದೆ ಸರಿದಿಲ್ಲ" ಎಂದರು.

"ವಿರೋಧ ಪಕ್ಷಗಳು ನನ್ನ ವಿರುದ್ಧ ಹತ್ತಾರು ಸುಳ್ಳು ಕಥೆಗಳನ್ನು ಕಟ್ಟಿ ಅಪಪ್ರಚಾರ ಮಾಡಿದವು. ಆದರೆ ನಾನು ಎಂದಿಗೂ ಹಣದ ಹಿಂದೆ ಬಿದ್ದವನಲ್ಲ, ಅಕ್ರಮ ಆಸ್ತಿ ಗಳಿಸುವ ಹಪಾಹಪಿಯೂ ನನಗಿಲ್ಲ. ನನ್ನ ಇಡೀ ರಾಜಕೀಯ ಜೀವನ ಒಂದು ತೆರೆದ ಪುಸ್ತಕ."
ಸಿದ್ದರಾಮಯ್ಯ.

ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲ ಈಗ ಇಡೀ ರಾಜ್ಯಾದ್ಯಂತ ಮನೆಮಾಡಿದ್ದು, ಹೈಕಮಾಂಡ್ ಮುಂದಿನ ನಡೆ ಏನಿರಬಹುದು ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿವೆ.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ 3 ದಿನಗಳ ವಸತಿಯುಕ್ತ ಉಚಿತ ಸಾವಯವ ಕೃಷಿ ತರಬೇತಿ ಹಾಗೂ ಪ್ರವಾಸಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಕುಮಾರಸ್ವಾಮಿ, ಆರ್.ಅಶೋಕ್ ಚಾಲನೆ: ಪಾದಯಾತ್ರೆಯಲ್ಲಿ ಹಿರಿಯೂರು ಮುಖಂಡರು ಭಾಗಿಸರ್ಕಾರಿ ಶಾಲೆಗೆ ಭೂಮಿ ದಾನ ಅತ್ಯಂತ ಶ್ರೇಷ್ಠ ಕಾರ್ಯ-ಎನ್. ಶ್ರೀನಿವಾಸ್ ಚಿನ್ಮೂಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಡಾ.ಎಲ್.ಪಾಲಾಕ್ಷಯ್ಯಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ:ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಸಮರ: ಬೈರಮಂಗಲದಿಂದ ಬೆಂಗಳೂರಿಗೆ 'ಪಾದಯಾತ್ರೆ' ಆರಂಭ"ನನ್ನನ್ನು ಕೊಂಡುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ": ಹೆಚ್.ಡಿ. ಕೆ ವಾಗ್ದಾಳಿ ಖಾತೆ ಹಂಚಿಕೆ, ಸಂಪುಟ ಪುನಾರಚನೆ ಕಸರತ್ತು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಶಿವಕುಮಾರ್ಪೊಲೀಸರ ಮೆಗಾ ಆಪರೇಷನ್: 105 ಅಕ್ರಮ ಬಾಂಗ್ಲಾ ವಲಸಿಗರ ಬಂಧನ, ಗಡಿಪಾರಿಗೆ ಕ್ರಮಸಚಿವ ನಾಗೇಂದ್ರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ; ರೆಡ್ಡಿ ಬ್ರದರ್ಸ್‌ಗೆ ಈಶ್ವರ್ ಖಂಡ್ರೆ ತಿರುಗೇಟು