Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ- ಸಿದ್ದರಾಮಯ್ಯ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದ್ದು
, ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಗಾಯಗೊಂಡವರಿಗೆ ಚಿಕಿತ್ಸೆ ಜೊತೆಗೆ ಪರಿಹಾರ ನೀಡಲು ಸರ್ಕಾರದ ಚಿಂತನೆ-
ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ 8 ಜನರು ಸಾವು ಸಂಭವಿಸಿದ್ದು, ಅವರ ಶವಗಳನ್ನು ಹೊರತೆಗೆಯಲಾಗಿದ್ದು, ಉಳಿದಂತೆ 8 ಜನರನ್ನು ರಕ್ಷಣೆ ಮಾಡಲಾಗಿದೆ. ಅವರಲ್ಲಿ ಆರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದವರಿಗೆ  ಗಂಭೀರ ಗಾಯಗಳಾಗಿವೆ. ರಕ್ಷಣೆ ಮಾಡಿರುವವರು ಪ್ರಾಣಾಪಾಯದಿಂದ ಪಾರಾಗಿದ್ದು, ಅವರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸುತ್ತಿದೆ.

ಸಾವನ್ನಪ್ಪಿರುವ 8 ಜನರಿಗೆ ತಲಾ 2 ಲಕ್ಷ ಕಾರ್ಮಿಕ ಇಲಾಖೆಯಿಂದ , 3 ಲಕ್ಷ ಬಿಬಿಎಂಪಿಯಿಂದ , ಒಟ್ಟು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಣೆ ಮಾಡಲಾಗಿದೆ. ಇದು ರೆವಿನ್ಯೂ ಬಡಾವಣೆಯಾಗಿದ್ದು, ಈ ಕಟ್ಟಡವನ್ನು ಅನಧಿಕೃತವಾಗಿ ಪರವಾನಗಿ ಪಡೆಯದೇ ನಿರ್ಮಿಸಲಾಗಿದೆ.

ಅನಧಿಕೃತ ಕಾಮಗಾರಿ ಎಂದು ನೋಟೀಸು ನೀಡಲಾಗಿದ್ದರೂ, ನಿರ್ಮಾಣ ಮಾಡಿರುವುದರಿಂದ, ಸಂಬಂಧಪಟ್ಟ ಎಇಇ ಯನ್ನು ಅಮಾನತುಗೊಳಿಸಲಾಗಿದೆ.  ಈ ಪ್ರದೇಶದ ವ್ಯಾಪ್ತಿಗೆ ಬರುವ ವಿಭಾಗೀಯ ಅಧಿಕಾರಿಗೂ ಹಾಗೂ ಎಕ್ಸಿಕ್ಯೂಟಿವ್ ಇಂಜಿನಿಯರ್ ಅವರಿಗೂ ನೋಟೀಸು ಜಾರಿ ಮಾಡುವಂತೆ ಸೂಚನೆ ನೀಡಲಾಗಿದೆ. ಪ್ರಕರಣದಲ್ಲಿ ಗಾಯಗೊಂಡವರಿಗೆ ಚಿಕಿತ್ಸಾ ವೆಚ್ಚ ಭರಿಸುವ ಜೊತೆಗೆ ಪರಿಹಾರವನ್ನೂ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದರು.

ಅನಧಿಕೃತ ಕಾಮಗಾರಿ ಕೈಗೊಳ್ಳದಂತೆ ಜನರಲ್ಲಿ ಸಿಎಂ ಮನವಿ-
ಜನರು ಕಾನೂನಿನ ಪ್ರಕಾರ ಮನೆಗಳನ್ನು ನಿರ್ಮಿಸಬೇಕೇ ಹೊರತು ಕಾನೂನು ಬಾಹಿರವಾಗಿ ಮನೆಗಳನ್ನು ಕಟ್ಟಬಾರದೆಂದು ಜನರಲ್ಲಿ ಸಿಎಂ ಮನವಿ ಮಾಡಿದರು. ಕಾಮಗಾರಿ ನಿಲ್ಲಿಸುವಂತೆ ನೋಟೀಸು ನೀಡಿದ ನಂತರವೂ ಕಟ್ಟಡ ಮಾಲೀಕರು ಹಾಗೂ ಗುತ್ತಿಗೆದಾರರು ಕಾಮಗಾರಿಯನ್ನು ನಿಲ್ಲಿಸದ ಕಾರಣ , ಈ ದುರಾದೃಷ್ಟರ ಘಟನೆ ನಡೆದಿದೆ.

ಇಂತಹ ಘಟನೆಗಳು ಮರುಕಳಿಸದಿರಲು , ಸಾರ್ವಜನಿಕರು ಕಟ್ಟಡ ನಿರ್ಮಾಣಕ್ಕೆ ಮುಂಚಿತವಾಗಿ ಅನುಮತಿ ಪಡೆಯಬೇಕು ಮತ್ತು ಎಇಇ ನಿಂದ ಸೂಕ್ತ ಪರಿಶೀಲನೆಯಾಗಬೇಕು. ಇದರ ಜೊತೆಗೆ ಕಳಪೆ ಕಾಮಗಾರಿ ಮಾಡದೇ ಕಟ್ಟಡದ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಈ ಕಟ್ಟಡ ಕುಸಿತ ಕಳಪೆ ಕಾಮಗಾರಿಯಿಂದಾಗಿದೆಯೇ ಹೊರತು ಮಳೆಯ ಕಾರಣದಿಂದಲ್ಲ. 

ಇನ್ನು ಮುಂದೆ ಯಾವುದೇ ಕಾರಣಕ್ಕೂ ಅನಧಿಕೃತ ಕಟ್ಟಡಗಳಿಗೆ ಅನುಮತಿ ನೀಡಬಾರದು. ಒಂದು ವೇಳೆ ನಿರ್ಮಿಸಿದರೆ, ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು. ಇನ್ನುಮುಂದೆ ಇಂತಹ ಘಟನೆಗಳು ನಡೆಯದಂತೆ  ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.

ರಕ್ಷಣಾ ಕಾರ್ಯ ಕೈಗೊಳ್ಳಲಾಗಿದೆ-
ಸರ್ಕಾರ ಮಳೆ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡುತ್ತಿಲ್ಲ ಎಂದು ಪ್ರತಿಪಕ್ಷದವರ ಮಾತು ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಟೀಕೆಗಳನ್ನು ಮಾಡುವುದು ಸುಲಭ.  ಹಿಂದಿನ ಸರ್ಕಾರದ ಅವಧಿಯಲ್ಲೂ ಮಳೆ ಸಂಭವಿಸಿದ್ದು , ಪ್ರತಿಪಕ್ಷದ ನಾಯಕನಾಗಿ ನಾನು ದೋಣಿಯಲ್ಲಿ ಕುಳಿತು ಸ್ಥಳ ವೀಕ್ಷಣೆ ಮಾಡಿದ್ದೆ.

ನೂರಾರು ವರ್ಷಗಳಲ್ಲಿ ಯಲಹಂಕದಲ್ಲಿ ಒಂದೇ ದಿನ 170 ಮಿ.ಮೀ. ಮಳೆ ಬಿದ್ದಿದೆ. ಈ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಶಕ್ತಿ ಸರ್ಕಾರಕ್ಕೆ ಇರಬೇಕಾಗುತ್ತದೆ. ಆ ಭಾಗದಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ರಕ್ಷಣಾ ಕಾರ್ಯಗಳನ್ನು ಮಾಡಲಾಗುತ್ತಿದೆ. ಈ ವರ್ಷ ಮಳೆ ಜಾಸ್ತಿ ಆಗಿದ್ದು, ಇನ್ನೂ ಹೆಚ್ಚು ಮೂಲಸೌಕರ್ಯಗಳ ಅಭಿವೃದ್ಧಿ ಆಗಬೇಕಿದೆ. ರಾಜಕಾಲುವೆಗಳಲ್ಲಿ ಒತ್ತುವರಿ ಕ್ಲಿಯರ್ ಮಾಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವಿಪತ್ತುನಿರ್ವಹಣೆಗಾಗಿ 3 ಸಾವಿರ ಕೋಟಿರೂ.ಗಳ ಸಾಲವನ್ನು ಪಡೆದು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನಧಿಕೃತ ಕಟ್ಟಡಗಳ ಸಮೀಕ್ಷೆ ನಡೆಸಲಾಗಿದ್ದರ ವಸ್ತುಸ್ಥಿತಿ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಯಾವುದೇ ಸರ್ಕಾರವಿದ್ದರೂ , ಇಂತಹ ವಿಷಯಗಳು ಪ್ರಸ್ತುತವಾಗಿರುತ್ತವೆ. ಕೆಲವರು ಈ ಬಗ್ಗೆ ಕಾನೂನು ಮೊರೆ ಹೋಗಿದ್ದಾರೆ. ಈ ವಿಷಯದ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.

ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಗೆ ಸಂಬಂಧಿಸಿದಂತೆ , ಚನ್ನಪಟ್ಟಣ ಕ್ಷೇತ್ರಕ್ಕೆ ನಾಮಿನೇಷನ್  ಮಾಡಲು  ಸಿಪಿ ಯೋಗೇಶ್ವರ್, ಡಿಸಿಎಂನೊಂದಿಗೆ ಚನ್ನಪಟ್ಟಣಕ್ಕೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು ಎಂದರು.

 

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹುಲಿಗುಂದಿ ಸಿದ್ದೇಶ್ವರಸ್ವಾಮಿಗೆ ಶ್ರಾವಣ ಮಾಸದ ವಿಶೇಷ ಪೂಜೆಕಣಿವೆಮಾರಮ್ಮ ದೇವಸ್ಥಾನವನ್ನು ಮುಜರಾಯಿಗೆ ಸೇರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿಹಜ್ ಯಾತ್ರಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರಚಿಕ್ಕಮ್ಮನಹಟ್ಟಿ ಗ್ರಾಮದ ಯಶೋಧ ಕಣ್ಮರೆ: ಗುರುತು ಪತ್ತೆ ಮನವಿಗೌರಸಮುದ್ರ ಶ್ರೀ ಮಾರಮ್ಮ ಜಾತ್ರೆ: ಸೆ.14 ಮತ್ತು 15 ರಂದು ಮದ್ಯ ಮಾರಾಟ ನಿಷೇಧಸರ್ಕಾರಿ ಯೋಜನೆ ಹೆಸರಲ್ಲಿ ಖಾಸಗಿ ಫೈನಾನ್ಸ್ ವಂಚನೆ- ಎಂ.ಪಿ.ಪ್ರವೀಣ್ ಮನವಿಘಾಟಿ ಸುಬ್ರಮಣ್ಯದ ತೇರಿನ ಬೀದಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಶಿರವಾರ ಗ್ರಾಮದಲ್ಲಿ ಕೃಷಿ ಕೆಲಸದ ಅನುಭವ ಕಾರ್ಯಕ್ರಮಭದ್ರೆಗೆ ಗೋನೂರು ಕೆರೆ ಬಳಿ ಅದ್ದೂರಿ ಸ್ವಾಗತ, ಸಂಸದ, ಹಲವು ಮಠಾಧಿಪತಿಗಳು ಭಾಗಿಇಡಿ ದಾಳಿ: ಸತೀಶ್‌ ಜಾರಕಿಹೊಳಿ ಬೆಂಬಲಕ್ಕೆ ನಿಂತ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌