ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲೂಕು ರೇಷ್ಮೆ ಇಲಾಖೆಯ ರೇಷ್ಮೆ ವಿಸ್ತರಣಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದ ಬಿ. ಈಶ್ವರಪ್ಪ (54) ಅವರು ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಮೃತರು ಹೊಸದುರ್ಗ ತಾಲೂಕಿನ ನಾಗಯ್ಯನಹಟ್ಟಿ ಗ್ರಾಮದವರಾಗಿದ್ದು, ಕಳೆದ ಕೆಲವು ಸಮಯದಿಂದ ರೇಷ್ಮೆ ಇಲಾಖೆಯಲ್ಲಿ ದಕ್ಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ನಾಗಯ್ಯನಹಟ್ಟಿಯಲ್ಲಿ ಅಂತ್ಯಸಂಸ್ಕಾರ:
ಈಶ್ವರಪ್ಪನವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರವನ್ನು ಮಂಗಳವಾರ ಸಂಜೆಯೇ ಅವರ ಸ್ವಗ್ರಾಮವಾದ ಹೊಸದುರ್ಗ ತಾಲೂಕಿನ ನಾಗಯ್ಯನಹಟ್ಟಿಯಲ್ಲಿ ನೆರವೇರಿಸಲಾಯಿತು ಎಂದು ಮೃತರ ಕುಟುಂಬದ ಮೂಲಗಳು ತಿಳಿಸಿವೆ. ಅಧಿಕಾರಿಗಳ ನಿಧನಕ್ಕೆ ಇಲಾಖೆಯ ಸಿಬ್ಬಂದಿ ಹಾಗೂ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.



