LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಸಿರು ಲೋಕದ ಸಿರಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನನಗೆ ಪ್ರಕೃತಿ ತುಂಬಾ ಇಷ್ಟ. ಬೆಳಿಗ್ಗೆ ಪಕ್ಷಿಗಳ ಚಿಲಿಪಿಲಿ, ಹಸಿರು ಮರಗಳು, ಬಣ್ಣ ಬಣ್ಣದ ಹೂಗಳು ಮತ್ತು ತಂಪಾದ ಗಾಳಿ ನನಗೆ ತುಂಬಾ ಸಂತೋಷವನ್ನು ನೀಡುತ್ತವೆ. ಪ್ರಕೃತಿಯ ಸೌಂದರ್ಯ ಮನಸ್ಸಿಗೆ ನೆಮ್ಮದಿ ನೀಡುತ್ತದೆ. ಮರಗಳು ನಮಗೆ ಶುದ್ಧ ಗಾಳಿಯನ್ನು ನೀಡುತ್ತವೆ. ನದಿಗಳು, ಕೆರೆಗಳು ಮತ್ತು ಮಳೆಯ ನೀರು ನಮ್ಮ ಜೀವನಕ್ಕೆ ಆಧಾರವಾಗಿವೆ. ಹಣ್ಣುಗಳು, ತರಕಾರಿಗಳು, ಧಾನ್ಯಗಳು ಮತ್ತು ಔಷಧೀಯ ಸಸ್ಯಗಳು ಪ್ರಕೃತಿಯ ಅಮೂಲ್ಯ ಕೊಡುಗೆಗಳಾಗಿವೆ.

ಪ್ರಕೃತಿ ನಮಗೆ ಶುದ್ಧ ಗಾಳಿ, ನೀರು ಮತ್ತು ಆಹಾರವನ್ನು ನೀಡುತ್ತದೆ. ಆದ್ದರಿಂದ ನಾವು ಪ್ರಕೃತಿಯನ್ನು ಕಾಪಾಡುವುದು ನಮ್ಮ ಕರ್ತವ್ಯವಾಗಿದೆ. ನಾನೂ ಮರಗಳನ್ನು ನೆಡುತ್ತೇನೆ. ನೀರನ್ನು ವ್ಯರ್ಥ ಮಾಡದೆ ಮಿತವಾಗಿ ಬಳಸುತ್ತೇನೆ. ನನ್ನ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುತ್ತೇನೆ. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತೇನೆ. ಇತರರಿಗೂ ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸುತ್ತೇನೆ.

ಪ್ರಕೃತಿಯನ್ನು ಪ್ರೀತಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪ್ರಕೃತಿ ಚೆನ್ನಾಗಿದ್ದರೆ ನಮ್ಮ ಜೀವನವೂ ಆರೋಗ್ಯಕರ, ಸುಂದರ ಮತ್ತು ಸಂತೋಷಕರವಾಗಿರುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಪರಿಸರವನ್ನು ರಕ್ಷಿಸಿ, ಮುಂದಿನ ಪೀಳಿಗೆಗೆ ಹಸಿರು ಭೂಮಿಯನ್ನು ಉಳಿಸಬೇಕು.
ನೀತಿ: ಪ್ರಕೃತಿಯನ್ನು ರಕ್ಷಿಸಿದರೆ, ಪ್ರಕೃತಿ ನಮ್ಮನ್ನು ರಕ್ಷಿಸುತ್ತದೆ.
ನೀತಿ ಪಾಠ: ಜೀವಿತ, 8 ನೇ ತರಗತಿ , ಅನೇಕಮ್ ಶಾಲೆ, ಬೆಂಗಳೂರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST