Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೌಡಿಶೀಟರ್‌ಗಳ ಪರೇಡ್ ನಡೆಸಿದ ಎಸ್ಪಿ

Advertisement
ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ದಾವಣಗೆರೆ ನಗರದ ಡಿಆರ್ ಮೈದಾನದಲ್ಲಿ ಎಸ್ಪಿ ಉಮಾ ಪ್ರಶಾಂತ್ ಅವರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರೌಡಿಶೀಟರ್‌ಗಳ ಪರೇಡ್ ನಡೆಸಿದರು.
ನಗರದ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯ
150ಕ್ಕೂ ಹೆಚ್ಚು ರೌಡಿಶೀಟರ್​ಗಳು ಪರೇಡ್​ನಲ್ಲಿದ್ದರು.

ರೌಡಿಶೀಟರ್​ಗಳು ಯಾವುದೇ ಕಾರಣಕ್ಕೂ ಜಿಲ್ಲೆಯ ಅಪರಾಧ ಕೃತ್ಯಗಳಲ್ಲಿ, ಅನಗತ್ಯ ವ್ಯವಹಾರಗಳಲ್ಲಿ ಭಾಗಿಯಾಗಬಾರದು ಎಂದು ಎಸ್ಪಿ ಎಚ್ಚರಿಕೆ ನೀಡಿದರು.
ಕೆಟ್ಟ ಅವತಾರಗಳಲ್ಲಿದ್ದ ರೌಡಿಶೀಟರ್​ಗಳಿಗೆ ಕೂದಲು ಕಟ್​ ಮಾಡಿಸಿಕೊಳ್ಳುವಂತೆ ಎಸ್ಪಿ ಖಡಕ್ ಸೂಚನೆ ನೀಡಿದರು.‌


ಕಾಂಗ್ರೆಸ್ ಪಕ್ಷದ 28ನೇ ವಾರ್ಡ್ ನಗರ ಪಾಲಿಕೆ ಸದಸ್ಯ ಜೆ.ಎನ್.ಶ್ರೀನಿವಾಸ್ ಅಲಿಯಾಸ್ ಮೋಟ್ ಬಳ್ಳು ಸೀನಾ ಕೂಡ ಈ ಪರೇಡ್​ನಲ್ಲಿ ಭಾಗವಹಿಸಿದ್ದರು. ನಿಮ್ಮ ಮೇಲೆ ಕೊಲೆ ಕೇಸ್ ಇದೆ. ಬುಳ್ ನಾಗ ವಿಚಾರವಾಗಿ ಹಲವು ಕೇಸ್​ಗಳಿವೆ. ಮತ್ತೆ ರೌಡಿಗಳನ್ನು ಕೂಡಿಸಿಕೊಂಡು ಏನಾದರೂ ಮಾಡಿದ್ರೆ ಮತ್ತೆ ಕೇಸ್ ಹಾಕುತ್ತೇವೆ ಎಂದು ನೇರವಾಗಿ ಕಾರ್ಪೋರೇಟರ್ ಸೇರಿದಂತೆ ಇತರೆ ರೌಡಿಗಳಿಗೆ ಎಸ್ಪಿ ಎಚ್ಚರಿಕೆ ನೀಡಿ ಬೆವರಿಳಿಸಿದರು.
ಸಮಾಜದಲ್ಲಿ ಒಳ್ಳೆಯ ವ್ಯಕ್ತಿಗಳಾಗಿ ಬದುಕಿ
, ಇಲ್ಲವಾದಲ್ಲಿ ಜೀವನಪೂರ್ತಿ ರೌಡಿಶೀಟರ್ ಕೇಸ್ ನಿಮ್ಮ ಮೇಲಿರುತ್ತದೆ. ಸಮಾಜಸೇವೆ ಮಾಡುವ ನೆಪದಲ್ಲಿ ಜನರನ್ನು ಹೆದರಿಸಿದರೆ ರೌಡಿಶೀಟರ್ ಕೇಸ್ ಹಾಕುತ್ತೇವೆ ಎಂದು ಉಮಾ ಪ್ರಶಾಂತ್ ಎಚ್ಚರಿಸಿದರು.‌

ರೌಡಿಶೀಟರ್​ಗಳ ಮೇಲೆ ನಿಗಾ ಇರಿಸಲು ಈ ಪರೇಡ್ ಮಾಡಿದ್ದೇವೆ. ಒಟ್ಟು 150 ರೌಡಿಶೀಟರ್​ಗಳು ಭಾಗಿಯಾಗಿದ್ದರು. ಅಪರಾಧದಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ್ದೇವೆ. ಕೆಲವರು ಈ ಕೆಲಸಗಳನ್ನು ಬಿಟ್ಟು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ. ಅಂತಹವರ ಕೇಸ್​ಗಳನ್ನು ಮುಚ್ಚುತ್ತೇವೆ. ಯಾರು ಅಪರಾಧ ಪ್ರಕರಣಗಳಲ್ಲಿ ಸಕ್ರಿಯರಾಗಿದ್ದಾರೋ, ಅವರನ್ನು ಎಚ್ಚರಿಸುವ ಕೆಲಸ ಮಾಡಿದ್ದೇವೆ. ಅನಧಿಕೃತ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ವಾರ್ನ್ ಮಾಡಿದ್ದೇವೆ. ಅಲ್ಲದೇ ಮತೀಯ ಗಲಭೆಗಳಲ್ಲಿ ಭಾಗಿಯಾದವರೂ ಕೂಡ ಪರೇಡ್​ಗೆ ಹಾಜರಾಗಿದ್ದರು. ನೈತಿಕ ಪೊಲೀಸ್​ಗಿರಿ ಮಾಡದಂತೆ ನಿಗಾ ವಹಿಸಿದ್ದೇವೆ ಎಂದು ಎಸ್ಪಿ ಉಮಾ ಪ್ರಶಾಂತ್ ಹೇಳಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ