ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬಕ್ರೀದ್ ಸಂದರ್ಭದಲ್ಲಿ ಗೋಗಳ ಆಕ್ರಮ ಸಾಗಾಣಿಕೆ, ಹತ್ಯೆ ತಡೆಗಟ್ಟಲು ಕೋರಿ ಹಾಗೂ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ತುರ್ತು ಹಾಗೂ ಕಠಿಣ ಕ್ರಮ ಕೆಗೊಳ್ಳುವಂತೆ ಒತ್ತಾಯಿಸಿ ಬೆಂಗಳೂರು ಗ್ರಾಮಾಂತರ ಎಡಿಸಿ ಸೈಯಿದ್ ಆಯಿಷಾ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕರ್ನಾಟಕ ಶ್ರೀರಾಮ ಸೇನೆ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ಕುರಿತು ಶ್ರೀರಾಮ ಸೇನೆ ರಾಜ್ಯ ಧರ್ಮಪ್ರಚಾರಕ ಶ್ರೀನಿವಾಸ ಗುರೂಜಿ ಮಾತನಾಡಿ, ಗೋಮಾತೆಯ ರಕ್ಷಣೆ ಪ್ರತಿಯೊಬ್ಬ ಹಿಂದೂವಿನ ಕರ್ತವ್ಯ ಗೋ ಹಿಂಸಾ ಚಟುವಟಿಕೆಗಳನ್ನು ತಡೆಯುವಂತೆ ಸರ್ಕಾರ ಮತ್ತು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು ಬಕ್ರೀದ್ ಹಬ್ಬದ ಹಿನ್ನೆಲೆ ಜಾನುವಾರುಗಳ ಕಳ್ಳ ಸಾಗಾಣಿಕೆ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಸಾರ್ವಜನಿಕರಲ್ಲಿ ತೀವ್ರ ಆತಂಕ ಎದುರಾಗಿದೆ ಈ ಕುರಿತು ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರದ ತಾಲೂಕು ಅಧ್ಯಕ್ಷ ಮಲ್ಲೇಶ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಸಿಂಗಂ ಸುರೇಶ್ ಕವಿತಾ, ಸುಮಲತಾ, ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.



