LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ಶ್ರೀ ತಿಮ್ಮಪ್ಪ ದೊಡ್ಡ ದೇವರ ಜಾತ್ರಾ ಮಹೋತ್ಸವ

Advertisement
Advertisement

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲೂಕಿನ ಕಸಬಾ ಹೋಬಳಿಯ ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಶ್ರೀ ತಿಮ್ಮಪ್ಪ ದೊಡ್ಡ ದೇವರ ಜಾತ್ರಾ ಮಹೋತ್ಸವವು ದಿನಾಂಕ:
07-08-2026ರ ಶುಕ್ರವಾರದಿಂದ 08-08-2026ರ ಶನಿವಾರದವರೆಗೆ ವಿಜೃಂಭಣೆಯಿಂದ ನಡೆಯಲಿದೆ.

​ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕೆ 1948ನೇ ಪರಾಭವನಾಮ ಸಂವತ್ಸರದ ಆಷಾಢ ಬಹುಳ ನವಮಿ ಹಾಗೂ ದಶಮಿಯಂದು ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಜಾತ್ರಾ ಮಹೋತ್ಸವ ನಡೆಸಲು ಗುರು-ಹಿರಿಯರು ನಿಶ್ಚಯಿಸಿದ್ದಾರೆ.

​ಧಾರ್ಮಿಕ ಕಾರ್ಯಕ್ರಮಗಳ ವಿವರ:
​ದಿನಾಂಕ:
07-08-2026 ಶುಕ್ರವಾರ: ​ರಾತ್ರಿ 9.00 ರಿಂದ 10.00 ಗಂಟೆಗೆ: ಕಂಟಲೆ ಪೂಜೆ ಅದ್ಧೂರಿಯಾಗಿ ನಡೆಯಿತು.

​ದಿನಾಂಕ: 08-08-2026 (ಶನಿವಾರ): ​ಬೆಳಿಗ್ಗೆ 5.00 ರಿಂದ 6.00 ಗಂಟೆಗೆ: ಸ್ವಾಮಿ ಬಿಲ್ಲು ಗುಡಿಗೆ ತೆರಳುವುದು.

​ಬೆಳಿಗ್ಗೆ 8.00 ರಿಂದ 10.00 ಗಂಟೆಗೆ: ಭಕ್ತಾದಿಗಳಿಂದ ಹೆಜ್ಜೆ ನಮಸ್ಕಾರ, ಉಂಡೆ ಹಾಗೂ ಮಂಡೆ ಸೇವೆ. ​ಬೆಳಿಗ್ಗೆ 11.00 ಗಂಟೆಗೆ: 101 ದೊಡ್ಡ ಎಡೆ ಪೂಜೆ ಮತ್ತು ಭೂತನ ಸೇವೆ, ನಂತರ ತೀರ್ಥ ಪ್ರಸಾದ ವಿನಿಯೋಗ. ​ಮಧ್ಯಾಹ್ನ 2.00 ಗಂಟೆಯಿಂದ: ಭಕ್ತಾದಿಗಳಿಗೆ ಅನ್ನಸಂತರ್ಪಣೆ.

​ಈ ಮಹೋತ್ಸವದಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ತನು-ಮನ-ಧನಗಳಿಂದ ಸೇವೆ ಸಲ್ಲಿಸಿ ಶ್ರೀ ತಿಮ್ಮಪ್ಪ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ ಹಾಗೂ ಜಾತ್ರೆಯನ್ನು ಯಶಸ್ವಿಗೊಳಿಸಬೇಕಾಗಿ ಜಾತ್ರಾ ಸಮಿತಿಯ ಮುಖ್ಯಸ್ಥರು ಹಾಗೂ ಗ್ರಾಮಸ್ಥರು ಪ್ರಕಟಣೆಯಲ್ಲಿ ಕೋರಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಲ್ಲೆಯಲ್ಲಿ ಶೇ.90.17 ಗಣತಿ ನಮೂನೆಗಳ ಡಿಜಿಟಲೀಕರಣ ಪೂರ್ಣ-ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ಭದ್ರಾ ಹರಿವಿಗೆ ಆಗಸ್ಟ್ 17 ಗಡುವುರಾಗಿ,ಸಾವೆ ಹಾಗೂ ತೆಂಗು ರೈತರ ನೆರವಿಗೆ ಸೂಚನೆ-ಸಚಿವ ಟಿ.ರಘುಮೂರ್ತಿಪೊಲೀಸ್ ಭದ್ರತೆಯಲ್ಲಿ ರಾಜಕಾಲುವೆ ಒತ್ತುವರಿ ತೆರವುಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯಮಶೀಲತೆ ಅರಿವು ಕಾರ್ಯಕ್ರಮರಾಷ್ಟ್ರಮಟ್ಟದಲ್ಲಿ ಪ್ರಜ್ವಲಿಸಿದ ಗ್ರಾಮೀಣ ಪ್ರತಿಭೆಗಳು, 11 ಪದಕ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಬೀಜೋಪಚರಣ ಹಾಗೂ ರಸ ಗೊಬ್ಬರ ಕಲಬೆರಕೆ ಕುರಿತು ಜಾಗೃತಿ ಶಿಬಿರಜೋಗ ಜಲಪಾತಕ್ಕೆ ಕೆಎಸ್‍ಆರ್‍ಟಿಸಿ ವಿಶೇಷ ಪ್ಯಾಕೇಜ್ ಬಸ್ ಸೇವೆ: ಆ.9 ರಿಂದ ಪ್ರಾರಂಭಆಗಸ್ಟ್ 8ರಿಂದ ಹೊಸ ವಿದ್ಯುತ್ ಪ್ರಸರಣ ಮಾರ್ಗ ಚಾಲನೆ: ಕೆಪಿಟಿಸಿಎಲ್ ಎಚ್ಚರಿಕೆಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೆ ಮಂಗಳವಾರ ಆಯೋಜನೆ ಉಚಿತ ಗ್ಯಾಸ್ಟ್ರೋ ಶಿಬಿರ