LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭರಮಗಿರಿ ಕೆರೆ ಭಾಗದ ಸುತ್ತಮುತ್ತಲಿನ ಪ್ರದೇಶಗಳಿಗೆ ನೀರಿನ ಸಮಸ್ಯೆ ಪರಿಹಾರಕ್ಕೆ ₹1.25 ಕೋಟಿ ಅನುದಾನ ಕೋರಿ ಮನವಿಪತ್ರ ಸಲ್ಲಿಸಿದ ಸುಹಾಸ್ ಸುಧಾಕರ್

Advertisement
Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ತಾಲ್ಲೂಕಿನ ಕಸಬಾ ಹೋಬಳಿ, ವಾಣಿವಿಲಾಸಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭರಮಗಿರಿ ಕೆರೆ ಸುತ್ತಮುತ್ತ ಇರುವ ಕೊಳವೆಬಾವಿಗಳ ಪುನಶ್ಚೇತನ ಹಾಗೂ ವಿದ್ಯುದೀಕರಣ ಕಾಮಗಾರಿಗಾಗಿ ₹1.25 ಕೋಟಿ ಅನುದಾನ ಮಂಜೂರು ಮಾಡಬೇಕು ಎಂಬುದಾಗಿ ಮಾಜಿ ಸಚಿವ ಡಿ.ಸುಧಾಕರ್ ರವರ ಪುತ್ರ ಸುಹಾಸ್ ಸುಧಾಕರ್ ಮನವಿ ಮಾಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭರಮಗಿರಿ ಕೆರೆ ಭಾಗದ ಸುತ್ತ ಮುತ್ತಲಿನ ಪ್ರದೇಶಗಳಿಗೆ ನೀರಿನ ಸಮಸ್ಯೆ ಪರಿಹಾರಕ್ಕೆ ₹1.25 ಕೋಟಿ ಅನುದಾನ ನೀಡುವಂತೆ ಒತ್ತಾಯಿಸಿ, ಜಿಲ್ಲಾಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಿ, ನಂತರ ಅವರು ಮಾತನಾಡಿದರು.
ಈ ಕಾಮಗಾರಿ ಅನುಷ್ಠಾನಗೊಂಡರೆ ಸುತ್ತಮುತ್ತಲಿನ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗುವುದರ ಜೊತೆಗೆ ಜಾನುವಾರುಗಳಿಗೆ, ರೈತರಜಮೀನುಗಳಿಗೆ ಅನುಕೂಲವಾಗಿ ಅಂತರ್ಜಲ ಮಟ್ಟ ಹೆಚ್ಚಳವಾಗಲಿದೆ. ನಮ್ಮ ತಂದೆ ದಿವಂಗತ ಡಿ. ಸುಧಾಕರ್ ಅವರು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಮುಂದುವರಿಸಿ, ಕಾಮಗಾರಿಗೆ ಶೀಘ್ರ ಅನುಮೋದನೆ ನೀಡುವಂತೆ ಕೋರಿದ ಅವರು, ಜನಹಿತದ ಅಭಿವೃದ್ಧಿ ಕಾರ್ಯಗಳಿಗಾಗಿ ನಮ್ಮ ಪ್ರಯತ್ನ ನಿರಂತರವಾಗಿರುತ್ತದೆ ಎಂಬುದಾಗಿ ಅವರು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಆರ್.ನಾಗೇಂದ್ರ ನಾಯ್ಕ್, ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಕೃಷ್ಣಮೂರ್ತಿ, ಬರಮಗಿರಿ ಗ್ರಾಮಸ್ಥರಾದ ಮಹೇಶ್, ಲೋಕಣ್ಣ, ಕಾಂತರಾಜು, ವೀರಭದ್ರಪ್ಪ, ಶಿವಣ್ಣ, ಯೋಗೇಶ್, ಬಳಘಟ್ಟಗೋವಿಂದ, ರಘು, ತಳವಾರಟ್ಟಿಶಿವು, ಶ್ರೀನಿವಾಸ, ತಿಮ್ಮರಾಜು, ಹನುಮಂತಪ್ಪ, ಶಶಿಕುಮಾರ್ ಹಾಗೂ ಹಲವು ರೈತ ಮುಖಂಡರು ಉಪಸ್ಥಿತರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೆಲ್ಲುಗುದಿಗೆ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಭಕ್ತಿ ಭಾವದಿಂದ ನಡೆದ ನಾಗ ಪಂಚಮಿ ಆಚರಣೆಬ್ಯಾಂಕ್ ಸರ್ಕಲ್ ಫುಟ್ ಪಾತ್ ಒತ್ತುವರಿ:ಸ್ಥಳೀಯರ ಆಕ್ರೋಶಪೌರಕಾರ್ಮಿಕನ ಪುತ್ರನಿಗೆ ಒಲಿದ ಸಚಿವ ಸ್ಥಾನನರಕಸದೃಶ ಬದುಕು - ಚರಂಡಿ ನೀರೆಲ್ಲಾ ರಸ್ತೆಗೆ!, ಸ್ವಚ್ಛತೆ ಇಲ್ಲದ ಊರು, ರೋಗಗಳ ತವರು!ಆ.22 ರಾಜ್ಯ ಮಟ್ಟದ ಕನ್ನಡ ಕರೋಕೆ ಸ್ಪರ್ಧೆ, ಆ.23ರಂದು ಗಾಯನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆಪೋಷಕರ ಸಹಕಾರದಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ : ರೈತ ಮುಖಂಡ ಮಹೇಶ್ವರಪ್ಪಪರಿಸರ ಮತ್ತು ಆಧ್ಯಾತ್ಮದ ಸಮನ್ವಯದ 'ನಾಗರ ಪಂಚಮಿ':ಬೆಂಗಳೂರಿನಲ್ಲಿ ಏಷ್ಯಾದ ಅತಿ ದೊಡ್ಡ 'ಕ್ವಾಂಟಮ್ ಫೌಂಡ್ರಿ' ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆಕಾಂಗ್ರೆಸ್ ಗ್ಯಾರಂಟಿ ಹೆಸರಲ್ಲಿ ಕನ್ನಡಿಗರ ಜೇಬಿಗೆ ಕನ್ನ: ಜೆಡಿಎಸ್ ತೀವ್ರ ಆಕ್ರೋಶ