Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏಕಪಕ್ಷೀಯ 2:1 ಮೀಸಲಾತಿ ರದ್ದುಪಡಿಸಿದ ಸುಪ್ರೀಂ ಕೋರ್ಟ್

Advertisement
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಭಾರತೀಯ ಸೇನೆಯಲ್ಲಿ
2:1 ಮೀಸಲಾತಿ ಅನುಪಾತದಲ್ಲಿ ಪುರುಷರಿಗೆ ಹುದ್ದೆಗಳನ್ನು ಮೀಸಲಿಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿ, ಏಕಪಕ್ಷೀಯ 2:1 ಮೀಸಲಾತಿ ರದ್ದುಪಡಿಸಿ ಆದೇಶಿಸಿದೆ.


ಸೇನೆಯಲ್ಲಿನ ಜಡ್ಜ್ ಅಡ್ವೊಕೇಟ್ ಜನರಲ್ (ಕಾನೂನು) ಹುದ್ದೆಗಳಿಗೆ ನಡೆದ ಪರೀಕ್ಷೆಗಳಲ್ಲಿ ಇಬ್ಬರು ಮಹಿಳಾ ಅಭ್ಯರ್ಥಿಗಳು ಕ್ರಮವಾಗಿ 4 ಮತ್ತು 5 ನೇ ರ‍್ಯಾಂಕ್ ಗಳಿಸಿದ್ದರು. ಆದರೂ ಅವರನ್ನು ಕರ್ತವ್ಯಕ್ಕೆ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಅವರು ನ್ಯಾಯ ಬೇಡಿಕೆಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಮನಮೋಹನ್ ಅವರಿದ್ದ ಪೀಠವು, ಮಹಿಳೆಯರ ಮೇಲೆ ನಿರ್ಬಂಧಗಳನ್ನು ಹೇರುವ ಮೂಲಕ ಖಾಲಿ ಹುದ್ದೆಗಳನ್ನು ಪುರುಷರಿಗೆ ಮೀಸಲಿಡಲಾಗದು ಎಂದು ಅಭಿಪ್ರಾಯಪಟ್ಟಿತು.

ಭಾರತೀಯ ಸೇನೆಯಲ್ಲಿ ನ್ಯಾಯಾಧೀಶ ಅಡ್ವೊಕೇಟ್ ಜನರಲ್ ಶಾಖೆಯ ಹುದ್ದೆಗಳಲ್ಲಿ ನೇಮಕಾತಿಗಳಿಗೆ ಅನುಸರಿಸಲಾದ 2:1 ಮೀಸಲಾತಿ ಅನುಪಾತ ನೀತಿ ತಪ್ಪಾಗಿದೆ ಎಂದು ಸುಪ್ರೀಂ ಕೋರ್ಟ್ ತೀರ್ಮಾನಿಸಿ ಅದನ್ನು ಜಾರಿಗೆ ತರಬಾರದು ಎಂದಿರುವ ಸುಪ್ರೀಂ ಕೋರ್ಟ್, ಮಹಿಳೆಯರ ಮೇಲೆ ನಿರ್ಬಂಧಗಳನ್ನು ಹೇರುವ ಮೂಲಕ ಖಾಲಿ ಹುದ್ದೆಗಳನ್ನು ಪುರುಷರಿಗೆ ಮೀಸಲಿಡಲಾಗದು ಎಂದಿದೆ.

ಪುರುಷರಿಗೆ 6 ಹುದ್ದೆ ಮತ್ತು ಮಹಿಳೆಯರಿಗೆ 3 ಹುದ್ದೆ ಅನುಪಾತವನ್ನು ಅನಿಯಂತ್ರಿತ ನಿರ್ಧಾರ ಎಂದಿರುವ ಸುಪ್ರೀಂ ಕೋರ್ಟ್ ಪೀಠವು, ಉನ್ನತ ಶ್ರೇಣಿಯ ಸೇನಾ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತು. ಲಿಂಗ ಸಮಾನತೆಯ ನಿಜವಾದ ಅರ್ಥವೆಂದರೆ ಪುರುಷರು ಮತ್ತು ಮಹಿಳೆಯರ ನಡುವೆ ಯಾವುದೇ ತಾರತಮ್ಯವಿಲ್ಲದೆ ಪ್ರತಿಭಾನ್ವಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು.

ಆದರೆ ಈ ರೀತಿಯಾಗಿ ಮಹಿಳೆಯರಿಗೆ ಸ್ಥಾನಗಳನ್ನು ನಿರ್ಬಂಧಿಸುವುದು ಸಮಾನತೆಯ ಹಕ್ಕನ್ನು ಉಲ್ಲಂಘಿಸಿದಂತಾಗಲಿದೆ. ಮಹಿಳೆಯರನ್ನು ನಿರ್ಬಂಧಿಸುವುದು ಮತ್ತು ಖಾಲಿ ಹುದ್ದೆಗಳನ್ನು ಪುರುಷರಿಗೆ ಮೀಸಲಿಡುವುದು ಸರಿಯಲ್ಲ. ಇಂತಹ ನೀತಿಗಳನ್ನು ಅನುಸರಿಸಿದರೆ ಯಾವುದೇ ದೇಶವೂ ಸುರಕ್ಷಿತವಾಗಿರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಇನ್ಮು ಮುಂದೆ ಸಮಾನ ರೀತಿಯಲ್ಲಿ ನೇಮಕಾತಿಗಳನ್ನು ಮಾಡುವಂತೆ ಕೇಂದ್ರಕ್ಕೆ ಆದೇಶಿಸಿರುವ ಸುಪ್ರೀಂ ಕೋರ್ಟ್, ಆಯ್ಕೆ ಪ್ರಕ್ರಿಯೆಯ ಭಾಗವಾಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಮೆರಿಟ್ ಪಟ್ಟಿ ಬಹಿರಂಗಪಡಿಸಬೇಕು ಎಂದು ಸೂಚಿಸಿತು.

ಪುರುಷ ಅಭ್ಯರ್ಥಿಗಳಿಗಿಂತ ಹೆಚ್ಚಿನ ಅರ್ಹತೆ ಹೊಂದಿದ್ದರೂ ಮಹಿಳಾ ಕೋಟಾದಲ್ಲಿ ಯಾವುದೇ ಖಾಲಿ ಹುದ್ದೆಗಳಿಲ್ಲದ ಕಾರಣ ತಮ್ಮನ್ನು ಆಯ್ಕೆ ಮಾಡಲಾಗಿಲ್ಲ ಎಂದು ನ್ಯಾಯಾಧೀಶ ಅಡ್ವೊಕೇಟ್ ಜನರಲ್ (ಕಾನೂನು) ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ಉತ್ತಮ ರ‍್ಯಾಂಕ್ ಗಳಿಸಿದ್ದ ಅಗ್ನರ್ ಕೌರ್ ಮತ್ತು ಅಸ್ತಾ ತ್ಯಾಗಿ ಎಂಬ ಇಬ್ಬರು ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿ, ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಈ ಹಿಂದೆ ಅವರ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯವು, ಸೇನೆಯಲ್ಲಿ ನ್ಯಾಯಾಧೀಶ ಅಡ್ವೊಕೇಟ್ ಜನರಲ್ (ಕಾನೂನು) ಶಾಖೆಯ ಹುದ್ದೆಗಳಲ್ಲಿ ಕಡಿಮೆ ಸಂಖ್ಯೆಯ ಮಹಿಳಾ ಅಧಿಕಾರಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್ ಜೊತೆಗೆ ತೀರ್ಪು ಕಾಯ್ದಿರಿಸಿತ್ತು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ