Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಯಾಮರಣಕ್ಕೆ ಮಹತ್ವದ ಮತ್ತು ಮೊದಲ ಐತಿಹಾಸಿಕ ಆದೇಶ ನೀಡಿದ ಸುಪ್ರೀಂ ಕೋರ್ಟ್‌

Advertisement
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಒಂದು ದಶಕಕ್ಕೂ ಹೆಚ್ಚು ಕಾಲ ಕೋಮಾದಂತಹ ಸ್ಥಿತಿಯಲ್ಲಿದ್ದ 32 ವರ್ಷದ ವ್ಯಕ್ತಿಗೆ ಬುಧವಾರ ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ಮಹತ್ವದ ಮತ್ತು ಮೊದಲ ಐತಿಹಾಸಿಕ ಆದೇಶ ನೀಡಿದೆ.

ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದಿವಾಲಾ ಮತ್ತು ಕೆ.ವಿ.ವಿಶ್ವನಾಥನ್ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ.

ಹರಿಯಾಣದ ಹರೀಶ್ ರಾಣಾ(32) ಅವರು ಕಳೆದ 13 ವರ್ಷಗಳಿಂದ ಚಲಿಸಲು ಹಾಗೂ ಮಾತನಾಡಲು ಸಾಧ್ಯವಾಗದ ಸ್ಥಿತಿಯಲ್ಲಿದ್ದರು. 2013ರಲ್ಲಿ, ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದ ಹರೀಶ್ ಪೇಯಿಂಗ್ ಗೆಸ್ಟ್ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ದುರಂತ ಸಂಭವಿಸಿತ್ತು. ತಲೆಗೆ ಗಾಯಗಳಾಗಿ ಅಂದಿನಿಂದಲೂ ಸಂಪೂರ್ಣವಾಗಿ ಹಾಸಿಗೆ ಹಿಡಿದಿದ್ದ ಅವರು, ಶಸ್ತ್ರಚಿಕಿತ್ಸೆಯ ಮೂಲಕ ಅಳವಡಿಸಿದ್ದ ಪಿಇಜಿ ಟ್ಯೂಬ್‌ಗಳ ಮೂಲಕ ನೀಡಲಾಗುವ ಕ್ಲಿನಿಕಲಿ ಅಡ್ಮಿನಿಸ್ಟರಿಡ್ ನ್ಯೂಟ್ರಿಷನ್ (ಸಿಎಎನ್) ನೆರವಿನಿಂದ ಮಾತ್ರ ಜೀವಂತವಾಗಿದ್ದರು.

ಹರೀಶ್​ ಅವರ ಜೀವ ಉಳಿಸುವ ಚಿಕಿತ್ಸೆಯನ್ನು ಕುಟುಂಬಸ್ಥರು ನಿಲ್ಲಿಸುವ ದಯಾಮರಣಕ್ಕೆ ಕೋರಿ ಸುಪ್ರೀಂಕೋರ್ಟ್​ ಮೊರೆ ಹೋಗಿದ್ದರು. ಜನವರಿ 15ರಂದು ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್ ಆದೇಶ ಕಾಯ್ದಿರಿಸಿತ್ತು.

ಹರೀಶ್ ಅವರ ಕುಟುಂಬದ ಪರವಾಗಿ ಹಾಜರಾದ ವಕೀಲೆ ರಶ್ಮಿ ನಂದಕುಮಾರ್ ಅವರು ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ವಾದ ಮಂಡಿಸಿದ್ದರು.

ಹರೀಶ್​ ಅವರು ಮಿದುಳಿನ ಗಾಯದಿಂದಾಗಿ ಶೇ.100ರಷ್ಟು ಕ್ವಾಡ್ರಿಪ್ಲೆಜಿಯಾದಿಂದ ಇಂತಹ ದಯನೀಯ ಸ್ಥಿತಿಗೆ ತಲುಪಿದ್ದರು. ಕಳೆದ 13 ವರ್ಷಗಳಲ್ಲಿ ಅವರ ಸ್ಥಿತಿ ಸುಧಾರಿಸಿಲ್ಲ ಎಂದು ವೈದ್ಯಕೀಯ ವರದಿಗಳು ತಿಳಿಸಿವೆ ಎಂದು ನ್ಯಾಯಪೀಠವು ಹೇಳಿತು.

ಅರ್ಜಿದಾರರು ಅಪಾರ ನೋವು ಹಾಗೂ ಸಂಕಟದ ಜೀವನ ನಡೆಸುತ್ತಿದ್ದಾರೆ. ತಮ್ಮ ದುಃಖ ವ್ಯಕ್ತಪಡಿಸುವ ಸಾಮರ್ಥ್ಯವೂ ಕೂಡ ಅವರಿಗಿಲ್ಲ. ಪೋಷಕರು ಮತ್ತು ಒಡಹುಟ್ಟಿದವರು ಅವರಿಗೆ ಬೆಂಬಲದ ಅಚಲ ಸ್ತಂಭಗಳಾಗಿ ನಿಂತಿರುವುದಕ್ಕೆ ನಾವು ಅಪಾರ ಗೌರವ ನೀಡುತ್ತೇವೆ. ಅವರನ್ನು ನೋಡಿಕೊಳ್ಳಲು ಸಂಪೂರ್ಣ ಸಮರ್ಪಣೆಯೊಂದಿಗೆ ತಮ್ಮಿಂದಾಗುವ ಎಲ್ಲಾ ಪ್ರಯತ್ನ ಮಾಡಿದ್ದಾರೆ. ಪ್ರತಿಕೂಲ ಸ್ಥಿತಿಯಲ್ಲಿ ಅವರು ತೋರಿದ ಅಪಾರ ಪ್ರೀತಿ, ಸಹಿಷ್ಣುತೆ ಮತ್ತು ದಯೆಗೆ ನಾವು ನಮ್ಮ ಆಳವಾದ ಕೃತಜ್ಞತೆ ಸಲ್ಲಿಸುತ್ತೇವೆ. ಈ ಪ್ರಕರಣವು ಪ್ರೀತಿ ಶಾಶ್ವತ ಎಂಬುದನ್ನು ಸಾಬೀತುಪಡಿಸಿದೆ ಎಂದು ಪೀಠವು ಅಭಿಪ್ರಾಯ ವ್ಯಕ್ತಪಡಿಸಿದೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಜನವರಿ 13ರಂದು, ವೈಯಕ್ತಿಕವಾಗಿ ಹರೀಶ್ ಅವರ ಪೋಷಕರು ಮತ್ತು ಅವರ ಕಿರಿಯ ಸಹೋದರನನ್ನು ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ, ಹರೀಶ್​ ಇನ್ನುಮುಂದೆ ಬಳಲುವುದು ಬೇಡವೆಂದು ತಾವು ಬಯಸಿರುವುದಾಗಿ ಕುಟುಂಬವು ನ್ಯಾಯಮೂರ್ತಿಗಳಿಗೆ ಮನವಿ ಮಾಡಿ ತಿಳಿಸಿತ್ತು.

ಹರೀಶ್‌ಗೆ ನಿಷ್ಕ್ರಿಯ ದಯಾಮರಣ ಕೋರಿ ಅವರ ಪೋಷಕರು ಸುಪ್ರೀಂಕೋರ್ಟ್‌ಗೆ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ನವೆಂಬರ್ 2025ರಲ್ಲಿ, ಕೇಂದ್ರ ಆರೋಗ್ಯ ಸಚಿವಾಲಯದ ವರದಿಯನ್ನು ಸುಪ್ರೀಂಕೋರ್ಟ್ ಗಮನಿಸಿತ್ತು. ಹರೀಶ್ ಅವರನ್ನು ಉತ್ತರ ಪ್ರದೇಶ ಸರ್ಕಾರದ ಸಹಾಯ ಮತ್ತು ವೈದ್ಯರು ಹಾಗೂ ಭೌತಚಿಕಿತ್ಸಕರ ನಿಯಮಿತ ಭೇಟಿಯೊಂದಿಗೆ ಮನೆಯ ಆರೈಕೆಯಲ್ಲಿ ಇರಿಸಲಾಗುವುದು ವರದಿಯಲ್ಲಿ ತಿಳಿಸಲಾಗಿತ್ತು.

 

 

 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ