Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಲಾಡ್ಜ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು; ಕೊಲೆಯೋ ಅಥವಾ ಆತ್ಮಹತ್ಯೆಯೋ...?

ಚಂದ್ರವಳ್ಳಿ ನ್ಯೂಸ್, ​ದೊಡ್ಡಬಳ್ಳಾಪುರ:
ನಗರದ ಗ್ರಾಮಾಂತರ ಪೊಲೀಸ್ ಠಾಣೆಯ ಸನಿಹದಲ್ಲೇ ಇರುವ ಖಾಸಗಿ ಲಾಡ್ಜ್‌ ನಲ್ಲಿ 21 ವರ್ಷದ ಯುವತಿಯ ಶವ ರಕ್ತದ ಮಡಲಿನಲ್ಲಿ ಪತ್ತೆಯಾಗಿರುವ ಘಟನೆ ತೀವ್ರ ಸ್ವರೂಪದ ಆತಂಕ ಮೂಡಿಸಿದೆ. ಇದು ಮೇಲ್ನೋಟಕ್ಕೆ ಪೂರ್ವಯೋಜಿತ ಕೊಲೆಯಂತೆ ಗೋಚರಿಸುತ್ತಿದ್ದು, ಮೃತಳ ಪತಿಯೇ ಕೃತ್ಯ ಎಸಗಿರುವ ಬಲವಾದ ಶಂಕೆ ವ್ಯಕ್ತವಾಗಿದೆ.

​ಮೃತ ಯುವತಿಯನ್ನು ಗೌರಿಬಿದನೂರು ತಾಲೂಕಿನ ಮುದಗೆರೆ ಗ್ರಾಮದ ನಿವಾಸಿ ವಿದ್ಯಾ (21) ಎಂದು ಗುರುತಿಸಲಾಗಿದೆ. ಈಕೆ ಇಲ್ಲಿನ ಪ್ರತಿಷ್ಠಿತ ಫಾಕ್ಸ್ ಕಾನ್  ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ದೊಡ್ಡಬಳ್ಳಾಪುರದಲ್ಲೇ ವಾಸವಾಗಿದ್ದರು ಎನ್ನಲಾಗಿದೆ.

Advertisement

​ಲಭ್ಯವಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ವಿದ್ಯಾ ಅವರಿಗೆ ಮುದಗೆರೆ ಗ್ರಾಮದ ಆನಂದ್ ಎಂಬುವವರೊಂದಿಗೆ ಮದುವೆಯಾಗಿತ್ತು. ಆದರೆ, ದಾಂಪತ್ಯ ಜೀವನದಲ್ಲಿ ಹೊಂದಾಣಿಕೆಯ ಕೊರತೆ ಹಾಗೂ ವೈಯಕ್ತಿಕ ಮನಸ್ತಾಪಗಳು ಉಂಟಾಗಿದ್ದವು. ಇದರಿಂದಾಗಿ ಕಳೆದ ಕೆಲವು ತಿಂಗಳಿಂದ ಗಂಡ-ಹೆಂಡತಿ ಇಬ್ಬರೂ ಪರಸ್ಪರ ಬೇರೆ ಬೇರೆಯಾಗಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.

​ಘಟನೆಗೆ ಸಂಬಂಧಿಸಿದಂತೆ ಲಾಡ್ಜ್‌ನ ಸಿಸಿಟಿವಿ  ದೃಶ್ಯಾವಳಿಗಳು ಪ್ರಮುಖ ಸಾಕ್ಷ್ಯವಾಗಿ ಹೊರಬಂದಿವೆ. ಸೆಪ್ಟೆಂಬರ್ 16ರಂದು ​ಬೆಳಗ್ಗೆ ಸರಿಯಾಗಿ 11:48 ರ ಸುಮಾರಿಗೆ ಮೃತ ವಿದ್ಯಾ ಹಾಗೂ ಅವರ ಪತಿ ಆನಂದ್ ಇಬ್ಬರೂ ಜೊತೆಯಾಗಿ ಲಾಡ್ಜ್‌ ಒಳಗೆ ಪ್ರವೇಶಿಸಿರುವುದು ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ.​ಕೋಣೆ ಪಡೆದು ಒಳಗೆ ತೆರಳಿದ ಬಳಿಕ, ಗಂಡ-ಹೆಂಡತಿ ನಡುವೆ ತೀವ್ರ ಮಾತಿನ ಚಕಮಕಿ ಹಾಗೂ ಗಲಾಟೆ ನಡೆದಿರುವ ಸಾಧ್ಯತೆಯಿದೆ.

​ಮಾತಿಗೆ ಮಾತು ಬೆಳೆದು ಆಕ್ರೋಶಗೊಂಡ ಪತಿ ಆನಂದ್, ವಿದ್ಯಾ ಅವರನ್ನು ಕತ್ತು ಹಿಸುಕಿ ಹತ್ಯೆಗೈದು ಪರಾರಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

​ವಿಷಯ ತಿಳಿದ ತಕ್ಷಣವೇ ದೊಡ್ಡಬಳ್ಳಾಪುರ ನಗರ ಠಾಣೆಯ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಲಾಡ್ಜ್‌ ಕೋಣೆಯನ್ನು ಸೀಜ್ ಮಾಡಲಾಗಿದ್ದು, ಬೆರಳಚ್ಚು ತಜ್ಞರು ಹಾಗೂ ಶ್ವಾನದಳದ ಸಹಾಯದಿಂದ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ.

​ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

​ಪತಿ ಆನಂದ್ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕಾಗಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ​ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

​ದಿನನಿತ್ಯ ಜನದಟ್ಟಣೆಯಿಂದ ಕೂಡಿರುವ ಹಾಗೂ ಪೊಲೀಸ್ ಠಾಣೆಯ ಪಕ್ಕದಲ್ಲೇ ಇರುವ ಲಾಡ್ಜ್‌ನಲ್ಲಿ ಇಂತಹ ಅಘಾತಕಾರಿ ಘಟನೆ ಜರುಗಿರುವುದು ಸ್ಥಳೀಯ ಸಾರ್ವಜನಿಕರಲ್ಲಿ  ಆತಂಕಕ್ಕೆ ಕಾರಣವಾಗಿದೆ.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಖ್ಯಾತ ಜೈನ ಜ್ಯೋತಿಷಿ ಬಿಕೆ ಸುಭಾಷ್ ಚಂದ್ರ ಜೈನ್ ಭೇಟಿಸೆ. 21ರಂದು ನೇರ ನೇಮಕಾತಿ ಸಂದರ್ಶನರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಭಗವಾನ್ ವಿಶ್ವಕರ್ಮ ಜಯಂತಿ ಆಚರಣೆಲಾಡ್ಜ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು; ಕೊಲೆಯೋ ಅಥವಾ ಆತ್ಮಹತ್ಯೆಯೋ...? ಭದ್ರೆ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮನ್ನಣೆ ನೀಡಿ-ರೈತಸಂಘ ಜಿಲ್ಲಾಧ್ಯಕ್ಷ ಡಿಎಸ್ ಹಳ್ಳಿ ಮಲ್ಲಿಕಾರ್ಜುನ್ಹೈಕೋರ್ಟ್ ವೃತ್ತದಲ್ಲಿ ರಾತ್ರೋರಾತ್ರಿ ಸಿದ್ದರಾಮಯ್ಯ ಮೂರ್ತಿ ಪ್ರತಿಷ್ಠಾಪನೆ: ಪಾಲಿಕೆಯಿಂದ ಕ್ಷಿಪ್ರ ತೆರವು!ಕೆಕೆ ಅಭಿವೃದ್ಧಿಗೆ ಹೊಸ ಮನ್ವಂತರ: 50 ಸಾವಿರ ನಿವೇಶನ, ಐಟಿ ಪಾರ್ಕ್ ಸೇರಿ 10 ಮಹತ್ವದ ಯೋಜನೆ ಘೋಷಣೆ!ಕೋರ್ಟ್ ಕಚೇರಿಯಲ್ಲಿ ಕುಡಿದು ರಂಪಾಟ: ವಕೀಲನಿಗೆ ಹೈಕೋರ್ಟ್‌ನಿಂದ ಜೈಲು ಶಿಕ್ಷೆ!ತಹಶೀಲ್ದಾರ್ 50 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ! ಮಾಲ್‌ಗಳ ಡಿ.ಜಿ ಸೆಟ್‌ಗಳಿಗೆ ವಾರ್ಷಿಕ ಟ್ರೇಡ್‌ ಲೈಸೆನ್ಸ್‌ ಅಗತ್ಯವಿಲ್ಲ!-ಹೈಕೋರ್ಟ್