Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟಿ. ಎಂ. ಸಿ. ಬ್ಯಾಂಕ್ ಸರ್ವ ಸದಸ್ಯರ ಸಭೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ಟೆಕ್ಸ್ ಟೈಲ್ ಮ್ಯಾನುಫ್ಯಾಕ್ಚರ್ ಕೋ ಆಪರೇಟಿವ್ ಬ್ಯಾಂಕ್ ನ 62 ನೇ ವಾರ್ಷಿಕ ಸರ್ವ ಸದಸ್ಯರ ಸಭೆ ನಡೆಯಿತು.

       ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಬ್ಯಾಂಕ್ ನ ಅಧ್ಯಕ್ಷರಾದ ಕೆ. ಪಿ. ವಾಸುದೇವ್ ಮಾತನಾಡಿ ನೇಕಾರರ ತವರೂರು ದೊಡ್ಡಬಳ್ಳಾಪುರಕ್ಕೆ ಮಾತ್ರ ಸೀಮಿತವಾಗಿದ್ದ ಬ್ಯಾಂಕ್ ನ ಕಾರ್ಯಕ್ಷೇತ್ರವನ್ನು ಮುಂದಿನ ದಿನಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಿಸ್ತರಿಸಲು ಯೋಜನೆಯನ್ನು ಹಾಕಿಕೊಳ್ಳಲಾಗಿದೆ. ಟಿ. ಎಂ. ಸಿ. ಬ್ಯಾಂಕ್ ನೇಕಾರರಿಗೆ ಮಗ್ಗದ ಮೇಲೆ ಸಾಲ ನೀಡುವ ಏಕೈಕ ಬ್ಯಾಂಕ್ ಆಗಿದೆ. ಚಿನ್ನ, ಬೆಳ್ಳಿ ಯ ಮೇಲೆ ಸಾಲ, ವಾಹನಗಳ ಮೇಲಿನ ಸಾಲ ಸೇರಿದಂತೆ ಹಲವು ವಿಧಗಳಲ್ಲಿ ಮಧ್ಯಮ ವರ್ಗದವರಿಗೆ ಸಾಲ ಸೌಲಭ್ಯ ನಮ್ಮ ಬ್ಯಾಂಕ್ ವತಿಯಿಂದ ನೀಡಲಾಗುತ್ತಿದೆ. ಇದನ್ನು ನಗರದ ನೇಕಾರರು ಮಾತ್ರವಲ್ಲದೆ ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಹೇಳಿದರು.

         ಕಾರ್ಯಕ್ರಮದಲ್ಲಿ ಹತ್ತನೇ ತರಗತಿ ಹಾಗೂ ದ್ವಿತೀಯ ಪಿ. ಯು. ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಉತ್ತೀರ್ಣ ರಾದ ಬ್ಯಾಂಕ್ ನ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಜೊತೆಗೆ ಕ್ರೀಡೆ ಹಾಗೂ ಯೋಗ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಯಿತು.

          ಕಾರ್ಯಕ್ರಮದಲ್ಲಿ ಟಿ. ಎಂ. ಸಿ. ಬ್ಯಾಂಕ್ ಉಪಾಧ್ಯಕ್ಷ ಡಿ. ಪ್ರಶಾಂತ್ ಕುಮಾರ್, ನಿರ್ದೇಶಕರಾದ ಪಿ. ಸಿ. ವೆಂಕಟೇಶ್, ಜಿ. ಮಂಜುನಾಥ್, ಎ. ಆರ್. ಶಿವಕುಮಾರ್, ಕೆ. ಜಿ. ಗೋಪಾಲ್, ಬಿ. ಆರ್. ಉಮಾಕಾಂತ್, ನಾರಾಯಣ್ ಎನ್. ನಾಯ್ಡು, ಅನಿಲ್, ಎ. ಗಿರಿಜಾ, ಡಾ. ಇಂದಿರಾ, ವೃತ್ತಿಪರ ನಿರ್ದೇಶಕ ಎ. ಆರ್. ನಾಗರಾಜನ್, ಕೆ. ಎಂ. ಕೃಷ್ಣಮೂರ್ತಿ, ಪ್ರಭಾರಿ ವ್ಯವಸ್ಥಾಪಕಿ ಪುಷ್ಪಲತಾ ಮುಂತಾದವರು ಹಾಜರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗ್ರಾಮೀಣ ಪತ್ರಕರ್ತರ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಯೋಜನೆ ಶೀಘ್ರ ಜಾರಿಗೆ ಕೆಯುಡಬ್ಲ್ಯೂಜೆ ಆಗ್ರಹಜೂನ್ 20ರಂದು ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮೂತ್ರಕೋಶ ತಪಾಸಣೆಟಿ. ಎಂ. ಸಿ. ಬ್ಯಾಂಕ್ ಸರ್ವ ಸದಸ್ಯರ ಸಭೆದೊಡ್ಡಬಳ್ಳಾಪುರ ತಿರುವಣ್ಣ ಮಲೈ ಮಾರ್ಗದ ಕೆಎಸ್ಆರ್ ಟಿಸಿ ಸೇವೆ ಮುಂದುವರೆಸಲು ಒತ್ತಾಯಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹಳೆಯ ವಿದ್ಯಾರ್ಥಿಗಳಿಂದ ಗೌರವ ಪುರಸ್ಕಾರ"ಸಿಎಂ ಆದ ಮೇಲಾದರೂ ನೀಲಿ ಚಿತ್ರ, ಪೋಸ್ಟರ್ ಮಾಡೋದು ಬಿಡ್ತಾರೆ ಅಂದ್ಕೊಂಡಿದ್ದೆ" – ಡಿಕೆಶಿ ವಿರುದ್ಧ ಹೆಚ್‌ಡಿಕೆ ಬಾಂಬ್!ಹಿರಿಯೂರಿನಲ್ಲಿ ರೈತರ ಕುಂದುಕೊರತೆ ಸಭೆ: ವಿವಿಧ ಇಲಾಖೆಗಳಿಂದ ಸ್ಥಳದಲ್ಲೇ ಪರಿಹಾರಮಧ್ಯರಾತ್ರಿ ಸ್ನೇಹಿತನಿಗೆ ಕರೆ ಮಾಡಿ ಪಿಎಸ್‌ಐ ಬಸವರಾಜ ಹೆರೂರ್ ಆತ್ಮಹತ್ಯೆ!ವಿಧಾನ ಪರಿಷತ್ ಚುನಾವಣೆ ತಲ್ಲಣ; ಕ್ರಾಸ್ ವೋಟಿಂಗ್ ಭೀತಿಯಲ್ಲಿ ಕಾಂಗ್ರೆಸ್ ಶಾಸಕರುಪಿಎಚ್‌ಡಿ ವಿದ್ಯಾರ್ಥಿನಿ ಲೈಂಗಿಕ ಸಂಪರ್ಕ; ಪ್ರಾಧ್ಯಾಪಕ ದೇವರಾಜನ್ ಅಮಾನತು