LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಟಿ. ಎಂ. ಸಿ. ಬ್ಯಾಂಕ್ ಸರ್ವ ಸದಸ್ಯರ ಸಭೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ಟೆಕ್ಸ್ ಟೈಲ್ ಮ್ಯಾನುಫ್ಯಾಕ್ಚರ್ ಕೋ ಆಪರೇಟಿವ್ ಬ್ಯಾಂಕ್ ನ 62 ನೇ ವಾರ್ಷಿಕ ಸರ್ವ ಸದಸ್ಯರ ಸಭೆ ನಡೆಯಿತು.

       ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಬ್ಯಾಂಕ್ ನ ಅಧ್ಯಕ್ಷರಾದ ಕೆ. ಪಿ. ವಾಸುದೇವ್ ಮಾತನಾಡಿ ನೇಕಾರರ ತವರೂರು ದೊಡ್ಡಬಳ್ಳಾಪುರಕ್ಕೆ ಮಾತ್ರ ಸೀಮಿತವಾಗಿದ್ದ ಬ್ಯಾಂಕ್ ನ ಕಾರ್ಯಕ್ಷೇತ್ರವನ್ನು ಮುಂದಿನ ದಿನಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಿಸ್ತರಿಸಲು ಯೋಜನೆಯನ್ನು ಹಾಕಿಕೊಳ್ಳಲಾಗಿದೆ. ಟಿ. ಎಂ. ಸಿ. ಬ್ಯಾಂಕ್ ನೇಕಾರರಿಗೆ ಮಗ್ಗದ ಮೇಲೆ ಸಾಲ ನೀಡುವ ಏಕೈಕ ಬ್ಯಾಂಕ್ ಆಗಿದೆ. ಚಿನ್ನ, ಬೆಳ್ಳಿ ಯ ಮೇಲೆ ಸಾಲ, ವಾಹನಗಳ ಮೇಲಿನ ಸಾಲ ಸೇರಿದಂತೆ ಹಲವು ವಿಧಗಳಲ್ಲಿ ಮಧ್ಯಮ ವರ್ಗದವರಿಗೆ ಸಾಲ ಸೌಲಭ್ಯ ನಮ್ಮ ಬ್ಯಾಂಕ್ ವತಿಯಿಂದ ನೀಡಲಾಗುತ್ತಿದೆ. ಇದನ್ನು ನಗರದ ನೇಕಾರರು ಮಾತ್ರವಲ್ಲದೆ ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಹೇಳಿದರು.

         ಕಾರ್ಯಕ್ರಮದಲ್ಲಿ ಹತ್ತನೇ ತರಗತಿ ಹಾಗೂ ದ್ವಿತೀಯ ಪಿ. ಯು. ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಉತ್ತೀರ್ಣ ರಾದ ಬ್ಯಾಂಕ್ ನ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಜೊತೆಗೆ ಕ್ರೀಡೆ ಹಾಗೂ ಯೋಗ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಯಿತು.

          ಕಾರ್ಯಕ್ರಮದಲ್ಲಿ ಟಿ. ಎಂ. ಸಿ. ಬ್ಯಾಂಕ್ ಉಪಾಧ್ಯಕ್ಷ ಡಿ. ಪ್ರಶಾಂತ್ ಕುಮಾರ್, ನಿರ್ದೇಶಕರಾದ ಪಿ. ಸಿ. ವೆಂಕಟೇಶ್, ಜಿ. ಮಂಜುನಾಥ್, ಎ. ಆರ್. ಶಿವಕುಮಾರ್, ಕೆ. ಜಿ. ಗೋಪಾಲ್, ಬಿ. ಆರ್. ಉಮಾಕಾಂತ್, ನಾರಾಯಣ್ ಎನ್. ನಾಯ್ಡು, ಅನಿಲ್, ಎ. ಗಿರಿಜಾ, ಡಾ. ಇಂದಿರಾ, ವೃತ್ತಿಪರ ನಿರ್ದೇಶಕ ಎ. ಆರ್. ನಾಗರಾಜನ್, ಕೆ. ಎಂ. ಕೃಷ್ಣಮೂರ್ತಿ, ಪ್ರಭಾರಿ ವ್ಯವಸ್ಥಾಪಕಿ ಪುಷ್ಪಲತಾ ಮುಂತಾದವರು ಹಾಜರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾವೇರಿ ಕಿಚ್ಚು: ಸುಪ್ರೀಂ ತೀರ್ಪು ನೋಡಿ ಮುಂದಿನ ನಿರ್ಧಾರ, ಹೆಚ್‌ಡಿಕೆಗೆ ಸಚಿವ ರಾಮಲಿಂಗಾರೆಡ್ಡಿ ಸವಾಲು!ಉಗ್ರರೂಪ ತಾಳಿದ ಕಾವೇರಿ ಕಿಚ್ಚು: ಹೆದ್ದಾರಿ ತಡೆದು ರೈತರ ಬೃಹತ್ ಪ್ರತಿಭಟನೆ!ಆಗಸ್ಟ್ 13ರ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ: ಸಾರಿಗೆ, ಶಾಲಾ-ಕಾಲೇಜು ಕಾರ್ಯನಿರ್ವಹಣೆ?ಪ್ರಜ್ವಲ್ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ: DIG ನೇತೃತ್ವದಲ್ಲಿ ಆಂತರಿಕ ತನಿಖೆ!ಐಎಎಸ್ ಅಧಿಕಾರಿಗಳ ವರ್ಗಾವಣೆ: ಕೆಪಿಎಸ್‌ಸಿ ಪರೀಕ್ಷಾ ಜವಾಬ್ದಾರಿ ಕೆಇಎ 'ಎಚ್. ಪ್ರಸನ್ನ' ಹೆಗಲಿಗೆ!ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಹಿರಿಯ ನಾಯಕರ ರಹಸ್ಯ ಸಭೆ: ಡಾ. ಯತೀಂದ್ರ ಸಮಾಧಾನದ ಯತ್ನ!ಜೈಲಿನ ಮೇಲೆ ಸಿಸಿಬಿ ದಾಳಿ ನನ್ನದೇ ಆದೇಶ: ಪ್ರಿಯಾಂಕ್ ಖರ್ಗೆ!ಜೈಲಿನ ಮೇಲೆ ಸಿಸಿಬಿ ಹಠಾತ್ ದಾಳಿ: ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್ ಡ್ರೈವ್ ಪತ್ತೆ- FIR ದಾಖಲು!ನೂತನ ಸಚಿವರಿಗೆ ಖಾತೆ ಹಂಚಿಕೆ: ರಾಮಲಿಂಗಾರೆಡ್ಡಿ, ಮುನಿಯಪ್ಪ ಖಾತೆ ಬದಲಾವಣೆ–ಯಾರಿಗೆ ಯಾವ ಇಲಾಖೆ?ಯುಎಪಿಎ ಪ್ರಕರಣಗಳ ಸುದೀರ್ಘ ವಿಳಂಬಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ