LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಮಿಳುನಾಡು ಸಿಎಂ ಭೇಟಿ ಮುಂದೂಡಿಕೆಗೆ:ಡಿ.ಕೆ. ಶಿವಕುಮಾರ್!

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಕಾವೇರಿ ನೀರು ಹಂಚಿಕೆ ವಿವಾದದಿಂದಾಗಿ ಪ್ರತಿಭಟನೆಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಆಗಸ್ಟ್ 3ರಂದು ನಿಗದಿಯಾಗಿದ್ದ ತಮಿಳುನಾಡು ಮುಖ್ಯಮಂತ್ರಿ ಸಿ. ವಿಜಯ್ ಜೋಸೆಫ್ ಅವರ ಬೆಂಗಳೂರು ಭೇಟಿಯನ್ನು ತಾತ್ಕಾಲಿಕವಾಗಿ ಮುಂದೂಡುವಂತೆ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

ಕಾವೇರಿ ನೀರು ಹಂಚಿಕೆ ಪ್ರಾಧಿಕಾರ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರು ಹರಿಸುವಂತೆ ನೀಡಿದ ನಿರ್ದೇಶನದ ವಿರುದ್ಧ ಮಂಡ್ಯ ಸೇರಿದಂತೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾನೂನು ತಜ್ಞರು ಹಾಗೂ ಸಂಪುಟದ ಸಹೋದ್ಯೋಗಿಗಳೊಂದಿಗೆ ಚರ್ಚಿಸಿದ ಬಳಿಕ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಶಾಂತಿಯುತ ವಾತಾವರಣಕ್ಕೆ ಆದ್ಯತೆ:
"ರಾಜ್ಯದಲ್ಲಿ ಈಗ ಉದ್ವಿಗ್ನ ವಾತಾವರಣವಿದೆ. ಇಂತಹ ಸಮಯದಲ್ಲಿ ತಮಿಳುನಾಡು ಸಿಎಂ ಅವರ ಭೇಟಿ ಸರಿಯಲ್ಲ. ಪರಿಸ್ಠಿತಿ ಸಂಪೂರ್ಣ ಶಾಂತವಾದ ಬಳಿಕ, ಪರಸ್ಪರ ಅನುಕೂಲಕರ ದಿನಾಂಕದಂದು ಆಹ್ವಾನಿಸಿ ಸ್ನೇಹಪೂರ್ವಕವಾಗಿ ಸಭೆ ನಡೆಸಲಾಗುವುದು" ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸಿನಿಮಾ ಪೋಸ್ಟರ್ ಹರಿದು ಆಕ್ರೋಶ:
ಪ್ರತಿಭಟನಾಕಾರರು ತಮಿಳುನಾಡು ಸಿಎಂ ವಿಜಯ್ ಅಭಿನಯದ 'ಜನನಾಯಕನ್' ಚಿತ್ರದ ಪೋಸ್ಟರ್‌ಗಳನ್ನು ಹರಿದು ಹಾಕಿ, ಚಿತ್ರ ಪ್ರದರ್ಶನ ತಡೆಯಲು ಒತ್ತಾಯಿಸಿದ್ದಾರೆ. ಆದರೂ ಕನ್ನಡಿಗರು ಮತ್ತು ತಮಿಳರ ನಡುವಿನ ಬಾಂಧವ್ಯಕ್ಕೆ ಧಕ್ಕೆಯಾಗದಂತೆ ಶಾಂತಿ ಕಾಪಾಡಲು ಸಿಎಂ ಕರೆ ನೀಡಿದ್ದಾರೆ.

ಮೇಕೆದಾಟು ಪ್ರಸ್ತಾವನೆ ತಿರಸ್ಕೃತವಾಗಿಲ್ಲ:
ಮೇಕೆದಾಟು ಯೋಜನೆ ಪ್ರಸ್ತಾವನೆ ತಿರಸ್ಕೃತಗೊಂಡಿದೆ ಎಂಬ ವರದಿಗಳನ್ನು ತಳ್ಳಿಹಾಕಿದ ಸಿಎಂ, "ಪ್ರಾಧಿಕಾರವು ಕೇವಲ ಕೆಲವು ಸ್ಪಷ್ಟೀಕರಣಗಳನ್ನು ಕೇಳಿದೆ. ಅಗತ್ಯ ವಿವರಣೆ ನೀಡಿ ಕಾನೂನು ವ್ಯಾಪ್ತಿಯಲ್ಲೇ ಯೋಜನೆಯನ್ನು ಮುಂದುವರಿಸುತ್ತೇವೆ" ಎಂದು ಸ್ಪಷ್ಟಪಡಿಸಿದರು.

ಮೇಕೆದಾಟುವಿನಿಂದ ತಮಿಳುನಾಡಿಗೆ ಹೆಚ್ಚಿನ ಲಾಭ:
"66 ಟಿಎಂಸಿ ಸಾಮರ್ಥ್ಯದ ಮೇಕೆದಾಟು ಜಲಾಶಯದಿಂದ ಕರ್ನಾಟಕಕ್ಕೆ ಸಿಗುವುದು ಕೇವಲ 400 ಮೆಗಾವಾಟ್ ಜಲವಿದ್ಯುತ್ ಮಾತ್ರ. ಈ ನೀರನ್ನು ಹೊಸ ನೀರಾವರಿಗೆ ಬಳಸುವ ಅಧಿಕಾರ ನಮಗಿಲ್ಲ. ಇದು ಸಮತೋಲನ ಜಲಾಶಯವಾಗಿದ್ದು, ತಮಿಳುನಾಡಿಗೆ ಇದರಿಂದ ಹೆಚ್ಚಿನ ಪ್ರಯೋಜನವಾಗಲಿದೆ" ಎಂದು ಪ್ರತಿಪಾದಿಸಿದರು.
ಮುಂದಿನ ಹೆಜ್ಜೆ: ಸರ್ವಪಕ್ಷ ಸಭೆ ಹಾಗೂ ಮೇಲ್ಮನವಿ
ನ್ಯಾಯಾಲಯದಲ್ಲಿ ಹೋರಾಟ:
ಕಾವೇರಿ ಪ್ರಾಧಿಕಾರದ ನೀರು ಬಿಡುಗಡೆ ಆದೇಶದ ವಿರುದ್ಧ ರಾಜ್ಯ ಸರ್ಕಾರ ಈಗಾಗಲೇ ಮೇಲ್ಮನವಿ ಸಲ್ಲಿಸಿದ್ದು, ಕಾನೂನು ಹೋರಾಟ ಮುಂದುವರಿಸಲಿದೆ.

ಸರ್ವಪಕ್ಷ ಸಭೆ:
ರಾಜ್ಯದ ಹಿತಾಸಕ್ತಿ ಕಾಯುವ ಸಂಬಂಧ ಭಾನುವಾರ ಸರ್ವಪಕ್ಷ ಸಭೆ ಕರೆಯಲಾಗಿದ್ದು, ಸಭೆಯ ಬಳಿಕ ತಮಿಳುನಾಡು ಸಿಎಂ ಭೇಟಿಯ ಮುಂದಿನ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನದಲ್ಲಿ ಜಾತಿ ಉಳಿದಿರುವವರೆಗೂ, ಜಾತ್ಯತೀತತೆ ಕೇವಲ ಮುಖವಾಡ ​ ಅಂತರಂಗದ ಬೇಸಾಯವೇ ಬದುಕಿನ ಸಾರ್ಥಕ ಬೆಳೆ*ಶಿಕ್ಷಕ-ರಕ್ಷಕ*ಆತ್ಮಹತ್ಯೆಗೆ ಶರಣಾದ ರೈತ ದಂಪತಿ ಮನೆಗೆ ಕುಮಾರಸ್ವಾಮಿ ಭೇಟಿ- ಸಾಂತ್ವನ, ಧೈರ್ಯ ತುಂಬಿದ ನಾಯಕಗೋಪೂಜೆ ಮತ್ತು ರಾಗಿಹುಲ್ಲು ವಿತರಣೆಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ದಿಗ್ವಿಜಯ್ ಸಿಂಗ್ ಭೇಟಿ:ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ಕಾನ್ಸುಲೇಟ್ ಜನರಲ್ ಕಚೇರಿ ಅಧಿಕೃತವಾಗಿ ಉದ್ಘಾಟನೆ: ಎಂ.ಬಿ. ಪಾಟೀಲ್ ಹರ್ಷ​‘ಕಾಂಗ್ರೆಸ್‌ನ 6ನೇ ಗ್ಯಾರೆಂಟಿ ಅಂದರೆ ಕೃಷಿ ಕಾರ್ಮಿಕರಿಗೆ ಗುಳೆ ಗ್ಯಾರೆಂಟಿ’: ಆರ್‌. ಅಶೋಕ್ ತೀವ್ರ ವಾಗ್ದಾಳಿ!ಕಾಂಗ್ರೆಸ್ ಸರ್ಕಾರ ‘ಮನೆಗೆ ಮಾರಿ, ಪರರಿಗೆ ಉಪಕಾರಿ’: ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆತಮಿಳುನಾಡಿಗೆ ಕಾವೇರಿ ನೀರು ಹರಿಸಲು ಪ್ರಾಧಿಕಾರದ ಆದೇಶ: ರಾಜ್ಯದ ಹಿತ ಕಾಯುವಲ್ಲಿ ಕಾಂಗ್ರೆಸ್‌ಸರ್ಕಾರ ವಿಫಲ - ಸಿ.ಟಿ. ರವಿ ಆಕ್ರೋಶ