Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಶಿಕ್ಷಕರಿಗೆ ಐಎಎಸ್‌ ಅಧಿಕಾರಿಗಳಿಗಿಂತ ಹೆಚ್ಚು ವೇತನ ನೀಡಬೇಕು: ಸಿಸೋಡಿಯಾ

ಚಂದ್ರವಳ್ಳಿ ನ್ಯೂಸ್, ನವದೆಹಲಿ :

2047 ರ ವೇಳೆಗೆ ಭಾರತವು ಅಭಿವೃದ್ಧಿ ಹೊಂದಿದ ದೇಶವಾಗಿ ಹೊರಹೊಮ್ಮಬೇಕಾದರೆ ಶಿಕ್ಷಕರ ವೇತನವು ಐಎಎಸ್ ಅಧಿಕಾರಿಗಿಂತ ಹೆಚ್ಚಾಗಬೇಕು ಎಂದು ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರು ಗುರುವಾರ ಹೇಳಿದ್ದಾರೆ.

 

ಇಂದು ಶಿಕ್ಷಕರ ದಿನಾಚರಣೆಯ ಅಂಗವಾಗಿ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಆಯೋಜಿಸಿದ್ದ 'ಶಿಕ್ಷಕ ಸಮ್ಮಾನ್ ಸಮಾರೋಹ್' ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಶಿಕ್ಷಣ ಸಚಿವ, "ಇಂದು, 2047 ರ ಭಾರತದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಇಲ್ಲಿ ಕುಳಿತಿರುವ ಶಿಕ್ಷಕರು, ನಿಮ್ಮೊಂದಿಗೆ ಇರುವ ಮಕ್ಕಳು 2047ಕ್ಕೆ ಬಹಳ ಮುಖ್ಯ. 2047ರ ಅಭಿವೃದ್ಧಿ ಹೊಂದಿದ ಭಾರತ ಈ ಮಕ್ಕಳ ಮೇಲೆ ಅವಲಂಬಿತವಾಗಿದೆ ಎಂದರು.

"ಹೆಚ್ಚಿನ ಅಭಿವೃದ್ಧಿ ಹೊಂದಿದ ದೇಶಗಳಲ್ಲಿ, ಶಿಕ್ಷಕರ ಸಂಬಳವು ಅಲ್ಲಿನ ಅಧಿಕಾರಶಾಹಿಗಳಿಗಿಂತ ಹೆಚ್ಚಾಗಿದೆ. ಐದು ವರ್ಷಗಳ ಅನುಭವ ಹೊಂದಿರುವ ಶಿಕ್ಷಕರು ಒಬ್ಬ ಐಎಎಸ್ ಅಧಿಕಾರಿಗಿಂತ ಹೆಚ್ಚಿನ ಸಂಬಳ ಪಡೆಯುತ್ತಾರೆ" ಎಂದು ಸಿಸೋಡಿಯಾ ಜರ್ಮನಿ, ಸ್ವಿಟ್ಜರ್ಲೆಂಡ್ ಮತ್ತು ಇತರ ಕೆಲವು ದೇಶಗಳ ಉದಾಹರಣೆ ನೀಡಿದರು.

ಸರ್ವಾಧಿಕಾರದ ವಿರುದ್ಧ ಜನರು ಹೋರಾಡಬೇಕು: ಮನೀಶ್ ಸಿಸೋಡಿಯಾ

ಇದೇ ವೇಳೆ ತಾವು ತಿಹಾರ್ ಜೈಲಿನಲ್ಲಿ ಬಂಧಿಯಾಗಿರುವ ಬಗ್ಗೆ ಮಾತನಾಡಿದ ಸಿಸೋಡಿಯಾ, ಪ್ರತಿದಿನ 8-10 ಗಂಟೆಗಳ ಕಾಲ ಪುಸ್ತಕಗಳನ್ನು ಓದುತ್ತಿದ್ದೆ ಮತ್ತು ವಿವಿಧ ದೇಶಗಳ ಶಿಕ್ಷಣ ವ್ಯವಸ್ಥೆಯನ್ನು ತಿಳಿದುಕೊಂಡೆ. "ಕಳೆದ ಒಂದೂವರೆ ವರ್ಷ ನಾನು ನನ್ನ ಜೀವನದ ಕಠಿಣ ಪರಿಸ್ಥಿತಿಯನ್ನು ಎದುರಿಸಿದ್ದೇನೆ ಎಂದರು.

ನಾವು ಕಷ್ಟಕರ ಸಂದರ್ಭಗಳಲ್ಲಿದ್ದಾಗ ನಮಗೆ ಶಿಕ್ಷಕರು ಕಲಿಸಿದ ಪಾಠಗಳು ಹೆಚ್ಚು ಉಪಯುಕ್ತವಾಗುತ್ತವೆ. ನಾನು ಜೈಲಿನಲ್ಲಿದ್ದಾಗ ಸಾಕಷ್ಟು ಅಧ್ಯಯನ ಮಾಡಿದ್ದೇನೆ. 8-10 ಗಂಟೆಗಳ ಕಾಲ ಪುಸ್ತಕಗಳನ್ನು ಓದುತ್ತಿದ್ದೆ. ಎಲ್ಲಕ್ಕಿಂತ ಹೆಚ್ಚಾಗಿ ಶಿಕ್ಷಣ, ಭಾರತದ ಶಿಕ್ಷಣ ವ್ಯವಸಬಗ್ಗೆ, ವಿಶ್ವದ ಶಿಕ್ಷಣ ವ್ಯವಸ್ಥೆ ಬಗ್ಗೆ ಓದಿದ್ದೇನೆ ಎಂದರು.

 

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಿಸೋಡಿಯಾ 17 ತಿಂಗಳ ಕಾಲ ತಿಹಾರ್ ಜೈಲಿನಲ್ಲಿದ್ದರು. ಕಳೆದ ತಿಂಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ