Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೀಕರ ಅಪಘಾತ: ಸೇತುವೆಯಿಂದ ಕೆಳಕ್ಕೆ ಬಿದ್ದ ಟ್ರ್ಯಾಕ್ಟರ್, ಒಂದೇ ಕುಟುಂಬದ 7 ಸಾವು!

Advertisement
Advertisement

ಚಂದ್ರವಳ್ಳಿ ನ್ಯೂಸ್, ಕೊಪ್ಪಳ:
ರಾಷ್ಟ್ರೀಯ ಹೆದ್ದಾರಿ ೫೦ರ ತುಂಗಭದ್ರಾ ಜಲಾಶಯದ ಸಮೀಪ ಶುಕ್ರವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಹಿಂಬದಿಯಿಂದ ಬಂದ ಟ್ಯಾಂಕರ್ ಲಾರಿಯೊಂದು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಏಳು ಜನರು ಸ್ಥಳದಲ್ಲೇ ಜೀವ ಕಳೆದುಕೊಂಡಿದ್ದಾರೆ. ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ದೇವಸ್ಥಾನಕ್ಕೆ ಹೊರಟಿದ್ದಾಗ ಕಾಯ್ದಿರಿಸಿದ್ದ ಯಮ!:
ಮೃತರೆಲ್ಲರೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದ ಒಂದೇ ಕುಟುಂಬಕ್ಕೆ ಸೇರಿದವರು ಎಂದು ತಿಳಿದುಬಂದಿದೆ. ಇವರೆಲ್ಲರೂ ಕೊಪ್ಪಳದ ಪ್ರಸಿದ್ಧ ಹುಲಿಗೆಮ್ಮ ದೇವಸ್ಥಾನಕ್ಕೆ ಮುರುಕು ತೀರಿಸಲು ಟ್ರ್ಯಾಕ್ಟರ್‌ನಲ್ಲಿ ಹೊರಟಿದ್ದರು. ಆದರೆ, ವಿಜಯನಗರ-ಕೊಪ್ಪಳ ಗಡಿಯ ತುಂಗಭದ್ರಾ ಜಲಾಶಯದ ಬಳಿ ಬರುತ್ತಿದ್ದಂತೆ, ವೇಗವಾಗಿ ಬಂದ ಟ್ಯಾಂಕರ್ ಲಾರಿಯೊಂದು ಟ್ರ್ಯಾಕ್ಟರ್‌ನ ಹಿಂಭಾಗಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಎರಡೂ ವಾಹನಗಳು ಸೇತುವೆಯ ಮೇಲಿಂದ ಕೆಳಕ್ಕೆ ಉರುಳಿ ಬಿದ್ದಿವೆ.

ಹೆಚ್ಚಾಗುವ ಸಾಧ್ಯತೆಯಿರುವ ಸಾವಿನ ಸಂಖ್ಯೆ:
ಅಪಘಾತದ ತೀವ್ರತೆಗೆ ಟ್ರ್ಯಾಕ್ಟರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ ಕರುಳು ಹಿಂಡುವ ದೃಶ್ಯಗಳು ಸೃಷ್ಟಿಯಾಗಿದ್ದವು.

ಗಾಯಾಳುಗಳ ಸ್ಥಿತಿ: ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಹೊಸಪೇಟೆ ಹಾಗೂ ಕೊಪ್ಪಳದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಭೀತಿ ಎದುರಾಗಿದೆ.

ಮೃತದೇಹಗಳ ರವಾನೆ: ಮೃತರ ನಿಖರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಸದ್ಯಕ್ಕೆ ಎಲ್ಲಾ ಮೃತದೇಹಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ: ಘಟನಾ ಸ್ಥಳ ಹಾಗೂ ಹೊಸಪೇಟೆಯ ಆಸ್ಪತ್ರೆಗೆ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಹಾಗೂ ಹೊಸಪೇಟೆ ಡಿವೈಎಸ್ಪಿ ಕೆ.ಪಿ.ಮುರುಳಿಧರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳೀಯರು ಮತ್ತು ಪೊಲೀಸರು ಯುದ್ಧೋಪಾದಿಯಲ್ಲಿ ಕಾರ್ಯಾಚರಣೆ ನಡೆಸಿ, ವಾಹನಗಳ ಅಡಿಯಲ್ಲಿ ಸಿಲುಕಿದ್ದವರನ್ನು ಹೊರತೆಗೆದು ಆಸ್ಪತ್ರೆಗೆ ತಲುಪಿಸುವಲ್ಲಿ ನೆರವಾಗಿದ್ದಾರೆ. ಮೃತರ ಆಪ್ತರ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಮರ್ಲಾಯನಹಳ್ಳಿ ಗ್ರಾಮದಲ್ಲಿ ಶೋಕದ ಛಾಯೆ ಮೂಡಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST