Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇವರ ಕೋಪ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇವರ ಕೋಪ.........
ಹಿಂದೆ ಹಳ್ಳಿಗಳಿಗಾಗಿ ರಸ್ತೆಗಳನ್ನು ನಿರ್ಮಿಸಲಾಗುತ್ತಿತ್ತು, ಈಗ ರಸ್ತೆಗಳಿಗಾಗಿ ಹಳ್ಳಿಗಳನ್ನೇ ನಾಶಗೊಳಿಸಲಾಗುತ್ತಿದೆ. ಹಿಂದೆ ಹಸಿವಿನಿಂದ ಸಾಕಷ್ಟು ಜನ ಸಾಯುತ್ತಿದ್ದರು, ಈಗ ಅತಿ ಹೆಚ್ಚು ಆಹಾರ ಸೇವನೆಯಿಂದ ಜನ ಸಾಯುತ್ತಿದ್ದಾರೆ......

ಹಿಂದೆ ಹೊಲಗದ್ದೆಗಳಲ್ಲಿ ದುಡಿದು ವಿಶ್ರಾಂತಿಗಾಗಿ ಜನ ಕಾಯುತ್ತಿದ್ದರು, ಈಗ ಅತಿಯಾದ ವಿಶ್ರಾಂತಿಯಿಂದಾಗಿ ದೈಹಿಕ ಚಟುವಟಿಕೆಗಳಿಲ್ಲದೆ ಜನ ಸಾಯುತ್ತಿದ್ದಾರೆ. ಹಿಂದೆ ಹತ್ತಾರು ಮಕ್ಕಳನ್ನು ತಂದೆ-ತಾಯಿಗಳು ಸಾಕುತ್ತಿದ್ದರು, ಈಗ ಒಬ್ಬನೇ ಮಗನಿಗೆ ತಂದೆ - ತಾಯಿಗಳೇ ಭಾರವಾಗುತ್ತಿದ್ದಾರೆ.......

ಹಿಂದೆ ಹಣ ಅಂತಸ್ತು ಇಲ್ಲದೆ ಮನುಷ್ಯ ನೆಮ್ಮದಿಯಾಗಿದ್ದನು, ಈಗ ಅತಿಯಾದ ಹಣದಿಂದಾಗಿ ಮನುಷ್ಯನ ನೆಮ್ಮದಿಯೇ ಹಾಳಾಗಿದೆ. ಹಿಂದೆ ಮದುವೆ ಎಂಬುದು ಸಂಬಂಧವಾಗಿತ್ತು, ಇಂದು ಮದುವೆಗಳು ಒಪ್ಪಂದಗಳಾಗಿವೆ. ಹೀಗೆ ಆದ ಬದಲಾವಣೆ ಕಂಡು ಕೋಪಗೊಂಡ ದೇವರ ಮನದಾಳದ ಮಾತುಗಳು.......

ಅಯ್ಯಾ ಮನುಜ, ಎಷ್ಟೊಂದು ಅನ್ಯಾಯ ಮಾಡಿದೆ ನೀನು ನನಗೆ, ಸೃಷ್ಟಿಸಿದ ನನಗೇ ನೀನು ದ್ರೋಹ ಬಗೆದೆಯಲ್ಲಾ, ನೀನು ನಿಂತಿರುವ ನೆಲವೇ ನನ್ನದು, ನೀನು ಉಸಿರಾಡುವ ಗಾಳಿ, ಕುಡಿಯುವ ನೀರು, ಅಷ್ಟೇ ಏಕೆ, ನಿನ್ನ ಇಡೀ ದೇಹ, ಆತ್ಮಗಳೇ ನನ್ನದು, ನಿನ್ನ ಅನುಕೂಲಕ್ಕಾಗಿಯೇ ಮಳೆ, ಗಾಳಿ, ಚಳಿ, ಬಿಸಿಲನ್ನು ಸೃಷ್ಟಿಸಿದೆ, ನಿನ್ನ ಸುಖಕ್ಕಾಗಿ ಗಿಡ, ಮರ, ಪ್ರಾಣಿ ಪಕ್ಷಿಗಳನ್ನು ನೀಡಿದೆ, ನಿನ್ನ ದೇಹದ ಪ್ರತಿ ಅಂಗಗಳನ್ನು ಅತ್ಯಂತ ಜಾಗರೂಕವಾಗಿ ರೂಪಿಸಿದೆ, ನಿನ್ನ ಸಂತೋಷಕ್ಕಾಗಿ ಗಂಡು ಹೆಣ್ಣುಗಳೆಂಬ ಭಿನ್ನತೆ ಸೃಷ್ಟಿಸಿದ್ದೂ ನಾನೇ, ನಿನ್ನ ಭಾವನೆ, ಆಕಾರ, ರೂಪಗಳನ್ನು ನಾನೇ ಕಷ್ಟಪಟ್ಟು ರಚಿಸಿದೆ, ಹೋಗಲಿ ಮಜಾ ಮಾಡು ಎಂದು ನೂರು ವರ್ಷಗಳ ಆಯಸ್ಸು ನೀಡಿದೆ, ಆದರೆ, ಪಾಪಿ ನೀನು ಮಾಡಿದ್ದಾದರೂ ಏನು..

ನನ್ನನೇ ಬಗೆದು ನಿನಗೆ ಇಷ್ಟ ಬಂದಂತೆ ಬಂಗಲೆ ನಿರ್ಮಿಸಿಕೊಂಡೆ, ನಡೆದಾಡಲು ಬಲಿಷ್ಠ ಕಾಲುಗಳನ್ನು ಕೊಟ್ಟಿದ್ದರೂ, ಸೋಮಾರಿಯಾಗಿ ಅಲೆದಾಡಲು ವಾಹನಗಳನ್ನು ನಿರ್ಮಿಸಿ ನನ್ನ ಉಸಿರನ್ನೇ ಮಲಿನಗೊಳಿಸಿದೆ, ನಿನಗೋಸ್ಕರ ಎಷ್ಟೊಂದು ಬಗೆಯ ಹಣ್ಣು, ತರಕಾರಿ, ಸೊಪ್ಪು, ಬೇಳೆಗಳನ್ನು ಕೊಟ್ಟೆ. ಆದರೆ ದುರಾಸೆಯಿಂದ ರಸಾಯನಿಕಗಳೆಂಬ ವಿಷ ಬೆರೆಸಿ ನಿನಗಿಷ್ಟವಾದ ರುಚಿಗಾಗಿ ನನ್ನನ್ನು ಹಾಳು ಮಾಡಿದೆ.

ಸೃಷ್ಟಿಸುವಾಗ ಇತರೆ ಎಲ್ಲಾ ಜೀವಿಗಳನ್ನೂ ನಿರ್ಲಕ್ಷಿಸಿ ನಿನಗೆ ಮಾತ್ರ ಅತಿ ಹೆಚ್ಚು ಬುದ್ದಿ ನೀಡಿದೆ. ಏನೋ ಮನುಷ್ಯ ಪಾಪ ಚೆನ್ನಾಗಿರಲಿ ಎಂದು, ಅದೇ ದೊಡ್ಡ ಸಮಸ್ಯೆಯಾಗಿ ಮುಂದೆ ಇಷ್ಟೊಂದು ಅನಾಹುತಕಾರಿಯಾಗುತ್ತದೆಂದು ಸೃಷ್ಟಿಸಿದ ನಾನೇ ಊಹಿಸದಾದೆ, ಮನುಷ್ಯನ ಅಲೋಚನೆ ಇಷ್ಟೊಂದು ಕ್ರೂರವಾಗಿರುತ್ತದೆ ಎಂದು ಅಂದಾಜಿಸಲು ವಿಫಲನಾದೆ, ಮನುಷ್ಯರನ್ನೆಲ್ಲಾ ಸಮನಾಗಿ ಸೃಷ್ಟಿಸಿದ ನನಗೇ ಮೋಸಮಾಡಿ ಬೇರೆ ಬೇರೆ ಧರ್ಮ, ಜಾತಿ ಸೃಷ್ಟಿಸಿ ಮನಸ್ಸುಗಳನ್ನೇ ಒಡೆದೆ, ಇಡೀ ಭೂ ಪ್ರದೇಶವನ್ನೇ ತುಂಡು ತುಂಡಾಗಿ ಬೌಂಡರಿ ನಿರ್ಮಿಸಿ ಇಭ್ಭಾಗ ಮಾಡಿ ನನ್ನ ಮಾನವನ್ನೇ ಹರಾಜಾಕಿದೆ,

ನನ್ನೆಲ್ಲಾ ಅದ್ಭುತ ಕ್ರಿಯೆಗಳನ್ನು ನಿನ್ನ ತೆವಲಿಗಾಗಿ ಉಪಯೋಗಿಸಿಕೊಂಡು ಕೊನೆಗೆ, ನನ್ನನ್ನೇ ಈ ಸೃಷ್ಟಿಕರ್ತನನ್ನೇ ನಾಶಮಾಡಲು ಹೊರಟಿರುವೆ, ಆದರೆ ಮೂರ್ಖ, ಅವಿವೇಕಿ ನೆನಪಿಟ್ಟುಕೋ, ನನ್ನನ್ನು ದುರುಪಯೋಗ ಪಡಿಸಿಕೊಂಡು ನೀನು ನಿರ್ಮಿಸಿದ ಬಂದೂಕು, ಬಾಂಬುಗಳೇ ನಿನ್ನನ್ನು ಕೊಲ್ಲುತ್ತವೆ, ಎಲ್ಲಾ ಸುಖಗಳಿದ್ದರೂ ಅದನ್ನು ಅನುಭವಿಸಲಾಗದೆ ರಕ್ತ ಕಾರುವ ಸ್ಥಿತಿ ನಿನ್ನದಾಗುತ್ತದೆ, ನಾಶವಾಗುವುದು ನೀನೇ ಹೊರತು ನಾನಲ್ಲ....

ನಾನು ಅಮರ.....ಶಾಶ್ವತ......ಬೆನ್ನಿಗೂ ....ಹೃದಯಕ್ಕೂ ಒಟ್ಟಿಗೆ ಚೂರಿ ಹಾಕಿದ ದ್ರೋಹಿ ನೀನು. ನಿನಗೆ ಕ್ಷಮೆ ಇಲ್ಲ. ಅನುಭವಿಸು......
ಲೇಖನ-ವಿವೇಕಾನಂದ. ಎಚ್. ಕೆ. 9663750451
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ