Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಉದ್ಯಮದ ಪಿತಾಮಹ ರತನ್ ಟಾಟಾ-ರಘುಗೌಡ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಶ್ರೀ ರತನ್ ಟಾಟಾ ಭಾರತ ದೇಶದ ಪ್ರಖ್ಯಾತ ಉದ್ಯಮಿಗಳು 86 ವರ್ಷಗಳ ವಯಸ್ಸಿನವರಾದ ಇವರು ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣಕ್ಕೆ ಬುಧವಾರ ತಡ ರಾತ್ರಿ ವಿಧಿವಶರಾಗಿದ್ದಾರೆ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

 ರತನ್  ಟಾಟಾ ಅವರು ದೇಶದಲ್ಲಿ ಅನೇಕ ಉದ್ಯಮಗಳನ್ನು ಟಾಟಾ ಹೆಸರಿನಲ್ಲಿ ಸ್ಥಾಪನೆ ಮಾಡುವ ಮೂಲಕ ಭಾರತ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯಲು ಕಾರಣವಾದ ಶ್ರೇಷ್ಠ ಉದ್ಯಮಿ ಎಂದು ಹೆಮ್ಮೆಯಿಂದ ಹೇಳಬಹುದು.

ಟಾಟಾ ಸ್ಟೀಲ್, ಟಾಟಾ ಮೋಟರ್ಸ್, ಟಾಟಾ ಪವರ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್, ಟಾಟಾ ಟೀ, ಟಾಟಾ ತಂತ್ರಜ್ಞಾನ, ಇಂಡಿಯನ್ ಹೋಟೆಲ್ಸ್ ಮತ್ತು ಟಾಟಾ ಟೆಲಿ ಸರ್ವಿಸಸ್ ಮುಂತಾದ ಶ್ರೇಷ್ಟ ವಿಭಾಗಗಳಲ್ಲಿ ಹೊಸದಾಗಿ ಅಳವಡಿಸಿದ ಅತ್ಯಾಧುನಿಕ ತಾಂತ್ರಿಕ ಮತ್ತು ಮುಂದಾಲೋಚನೆಯ ಕ್ರಮಗಳಿಂದಾಗಿ ಅವುಗಳ ಮಟ್ಟವನ್ನು ಉನ್ನತ ಶಿಖರಕ್ಕೆ ಏರಿಸಿ, ಕಂಪೆನಿಯ ಲಾಭಾಂಶವನ್ನು ದೊಡ್ಡ ಪ್ರಮಾಣದಲ್ಲಿ ಹೆಚ್ಚಿಸಿದರು.

ಭಾರತ ದೇಶದ ಅಡಳಿತ ಕೇಂದ್ರವಾದ ಲೋಕಸಭಾ ಸಂಸತ್ ಭವನವನ್ನು ಸರ್ಕಾರ ನೀಡಿದ ಅವಧಿಯಲ್ಲಿಯೇ ಕಳೆದ ವರ್ಷ ನಿರ್ಮಾಣ ಮಾಡಿ ಲೋಕಕಲ್ಯಾಣಕ್ಕಾಗಿ ಅರ್ಪಿಸಿದ  ಕೀರ್ತಿ ಟಾಟಾ ಸಂಸ್ಥೆಗೆ ಸಲುತ್ತದೆ.

ಜನಸಾಮಾನ್ಯರು ಬಳಸುವ ಪ್ರತಿಯೊಂದು ದಿನಚರಿ ವಸ್ತುವನ್ನು ಉತ್ತಮ ಗುಣಮಟ್ಟದಲ್ಲಿ ತಯಾರಿಸಿ ಆ ವಸ್ತುಗಳನ್ನು ಜನಸಾಮಾನ್ಯರಿಗೆ ಎಟಕುವ ಬೆಲೆಗೆ ನೀಡುವ ಕೀರ್ತಿ ಟಾಟಾ ಸಂಸ್ಥೆಗೆ ಸಲುತ್ತದೆ.

 ದೇಶದ ಪ್ರತಿಯೊಬ್ಬ ನಾಗರಿಕರ ಕುಟುಂಬ ಕಾರಿನಲ್ಲಿ ಓಡಾಡಬೇಕು ಎಂಬ ಮಹತ್ವಾಕಾಂಕ್ಷೆಯ ದೃಷ್ಟಿಯಿಂದ ಒಂದು ಲಕ್ಷ ರೂಪಾಯಿಯ ಬೆಲೆ ಬಾಳುವ ಟಾಟಾ ನ್ಯಾನೋ ಕಾರನ್ನು ಜನಸಾಮಾನ್ಯರಿಗೆ ಅರ್ಪಿಸಿದರು.

ಟಾಟಾ ಸಂಸ್ಥೆಯ ಅಡಿಯಲ್ಲಿ ದೇಶದ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದರು. ದೇಶದ ಆರ್ಥಿಕತೆ ಹೆಚ್ಚಲು ಟಾಟಾ ಸಂಸ್ಥೆ ಕಾರಣವಾಗಿದೆ. ದೇಶದ ಕೋಟ್ಯಂತರ ಜನರ ವಿಶ್ವಾಸವನ್ನು ಗೆದ್ದಿರುವ ರತನ್ ಟಾಟಾ ಅವರಿಗೆ ದೇಶದ ಪ್ರತಿಷ್ಟಿತ ಪ್ರಶಸ್ತಿಗಳಾದ ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿ ಲಭಿಸಿವೆ.

ದೇಶದ ಪ್ರಶಸ್ತಿಗಳೊಂದಿಗೆ ಇನ್ನು ಅನೇಕ ದೇಶ ವಿದೇಶಗಳ ಪ್ರಶಸ್ತಿಗಳು ಲಭಿಸಿವೆ. ರತನ್ ಟಾಟಾ ಅವರು ಅವಿವಾಹಿತರಾಗಿದ್ದರು. ಟಾಟಾ ಅವರ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟವಾಗಿದೆ.
ಲೇಖನ-ರಘು ಗೌಡ 9916101265 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ