Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದೂ ಸ್ವಾಮೀಜಿ ಮೇಲೆ ಗೋಲಿಬಾರ್‌ಮಾಡಲು ಚಿಂತನೆ ಮಾಡಿದ ಸರ್ಕಾರ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯುತ್ತಿದ್ದ ಮೀಸಲಾತಿ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಬಲಪ್ರಯೋಗ ಮಾಡಿದ್ದಲ್ಲದೆ, ಪೂಜ್ಯ ಸ್ವಾಮೀಜಿಗಳ ಸಹಿತ ಹೋರಾಟಗಾರರ ಮೇಲೆ ಗೋಲಿಬಾರ್‌ನಡೆಸಲು ಸರ್ಕಾರ ಚಿಂತನೆ ನಡೆಸಿರುವ ಬಗ್ಗೆ ಸ್ವತಃ ಸ್ವಾಮೀಜಿಗಳೇ ಹೇಳಿಕೆ ನೀಡಿದ್ದಾರೆ.

ಹಿಂದೂ ಸಂತರೋರ್ವರ ಮೇಲೆ ಗೋಲಿಬಾರ್‌ಮಾಡಲು ಚಿಂತನೆ ನಡೆಸುವಷ್ಟರ ಮಟ್ಟಿಗೆ ಈ ಸಿದ್ದರಾಮಯ್ಯ ಅವರು ಮುಂದುವರೆದಿರುವುದು ಆತಂಕಕಾರಿ. ಈ ಹಿಂದೆ ಒಕ್ಕಲಿಗ ಪೀಠದ ಪೂಜ್ಯರ ಮೇಲೆ ಎಫ್‌ಐಆರ್‌ಹಾಕಿ, ನ್ಯಾಯಾಲಯದ ಕಟಕಟೆಗೆ ಎಳೆದಿದ್ದ ಕಾಂಗ್ರೆಸ್‌ಸರ್ಕಾರ ಈಗ ಪಂಚಮಸಾಲಿ ಪೀಠದ ಸ್ವಾಮೀಜಿಗಳ ಮೇಲೆಯೇ ಗುಂಡು ಹಾರಿಸಲು ತೆರೆಮರೆಯ ಹಿಂದೆ ಕಸರತ್ತು ನಡೆಸಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯದಲ್ಲಿ ಸರ್ವಾಧಿಕಾರಿಗಳ ಸರ್ಕಾರವಿದೆಯೋ, ಪ್ರಜಾಪ್ರಭುತ್ವದ ಸರ್ಕಾರವಿದೆಯೋ ಎನ್ನುವುದರ ಬಗ್ಗೆಯೇ ಸಂಶಯ ಕಾಡುತ್ತಿದೆ. ಮಾತುಕತೆಯಲ್ಲಿ ಬಗೆಹರಿಸಬಹುದಾಗಿದ್ದ ವಿಚಾರಗಳಿಗೆ ಲಾಠಿ ಚಾರ್ಜ್‌, ಗೋಲಿಬಾರ್‌ಎಂದು ಆಕ್ರಮಣಕಾರಿ ಪ್ರವೃತ್ತಿ ತೋರಿಸಿರುವುದು ಕಾಂಗ್ರೆಸ್‌ಸರ್ಕಾರದ ನೈತಿಕ ಅಧಃಪತನಕ್ಕೆ ಸಾಕ್ಷಿಯಾಗಿದೆ.

2016 ರಲ್ಲೂ ಕಾಂಗ್ರೆಸ್‌ಸರ್ಕಾರ ಇದೇ ರೀತಿಯ ಮೃಗೀಯ ವರ್ತನೆ ತೋರಿತ್ತು. ಮಹದಾಯಿ ನ್ಯಾಯಾಧಿಕರಣದ ತೀರ್ಪು ವಿರೋಧಿಸಿ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಯಮನೂರು ಗ್ರಾಮಸ್ಥರ ಮೇಲೆ ಸರ್ಕಾರ ಅಕ್ಷರಶಃ ತಾಲಿಬಾನ್‌ರೀತಿಯಲ್ಲಿ ವರ್ತಿಸಿತ್ತು. ಈಗ ಪಂಚಮಸಾಲಿ ಮೀಸಲಾತಿ ಹೋರಾಟಗಾರರನ್ನು ಕಾಂಗ್ರೆಸ್‌ಸರ್ಕಾರ ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ