Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದುಳಿದ ವರ್ಗಗಳಿಗೆ ಅರಸು ಕೊಡುಗೆ ಅವಿಸ್ಮರಣೀಯ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
 ಇಲ್ಲಿನ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸ್‌ ಅವರ 44ನೇ ಪುಣ್ಯಸ್ಮರಣೆ ಕಾರ್ಯಕ್ರಮ ಆರ್‌ಎಲ್‌ಜೆಐಟಿ ಆವರಣದಲ್ಲಿ ಶುಕ್ರವಾರ ನಡೆಯಿತು.

ಅರಸು ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪ ನಮನ ಸಲ್ಲಿಸಿದರು.ಈ ವೇಳೆ ಮಾತನಾಡಿದ ಲಯನ್ಸ್‌ ಕ್ಲಬ್‌ ಅಧ್ಯಕ್ಷ ಜೆ.ಆರ್.ರಾಕೇಶ್‌, ಹಿಂದುಳಿದ ವರ್ಗಗಳ ದನಿಯಾಗಿ, ಯುವಜನರ ಆಶೋತ್ತರಗಳನ್ನು ಪ್ರಭಾವಿಸಿದ ಅರಸು ಅವರು ಜಾಲಪ್ಪ ಅವರ ರಾಜಕೀಯ ಬೆಳವಣಿಗೆಗೆ ಪ್ರೇರಕಶಕ್ತಿಯಾಗಿದ್ದರು ಎಂದು ತಿಳಿಸಿದರು.

ಮುಖ್ಯ ಭಾಷಣಕಾರರಾಗಿ ಮಾತನಾಡಿದ ಲಯನ್ಸ್‌ ಕ್ಲಬ್‌ ಉಪಾಧ್ಯಕ್ಷ ಪ್ರೊ.ಕೆ.ಆರ್.ರವಿಕಿರಣ್‌, ರಾಜ್ಯದಲ್ಲಿ ಹಿಂದುಳಿದ ವರ್ಗಗಳಿಗೆ ಪ್ರಬಲ ಅಸ್ತಿತ್ವವನ್ನು ಪ್ರತಿಪಾದಿಸಿದ ಅರಸು ಅವರು, ಉಳುವವನೇ ಭೂಮಿಯ ಒಡೆಯ ಎಂಬ ಘೋಷವಾಕ್ಯದಡಿ ಭೂ ಒಡೆತನವನ್ನು ಶೋಷಿತವರ್ಗಗಳಿಗೆ ನೀಡಿದರು. ಎಲ್‌.ಜಿ.ಹಾವನೂರ್‌ ಅವರ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಆಯೋಗವನ್ನು ರಚಿಸಿ, ಪ್ರಬಲ ಸಮುದಾಯಗಳ ನಡುಗೆ ಹಿಂದುಳಿದ ವರ್ಗಗಳಿಗೂ ಅವಕಾಶ ಮತ್ತು ಸಮಾನತೆಯನ್ನು ಒದಗಿಸುವ ಸಂಕಲ್ಪ ಮಾಡಿದರು. ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿದರು. ಅರಸು ಅವರ ಒತ್ತಾಸೆಯಿಂದಲೇ ಆರ್.ಎಲ್.ಜಾಲಪ್ಪ ಅವರು ಮೊದಲ ಬಾರಿಗೆ ವಿಧಾನಪರಿಷತ್ತಿನ ಸದಸ್ಯರಾಗಿ ಆಯ್ಕೆಯಾದರು ಎಂದು ತಿಳಿಸಿದರು.

ಲಯನ್ಸ್‌ ಜಿಇಟಿ ಸಂಯೋಜಕ ಎಂ.ಆರ್.ಶ್ರೀನಿವಾಸ್‌, ಆರ್‌ಎಲ್‌ಜೆಐಟಿ ಪ್ರಾಂಶುಪಾಲ ಡಾ.ವಿಜಯ್‌ ಕಾರ್ತಿಕ್, ಮಾನವ ಸಂಪನ್ಮೂಲ ನಿರ್ದೇಶಕ ಬಾಬುರೆಡ್ಡಿ ನಾಗಸಂದ್ರ, ಉಪಪ್ರಾಂಶುಪಾಲ ಡಾ.ಶಿವಪ್ರಸಾದ್, ಪದವಿ ಕಾಲೇಜು ಪ್ರಾಂಶುಪಾಲ ಡಾ.ನಾಗರಾಜ್, ಪ್ರೌಢಶಾಲೆ ಮುಖ್ಯಶಿಕ್ಷಕ ಜಿಯಾವುಲ್ಲಾಖಾನ್, ಎಸ್‌ಡಿಯುಐಎಂ ಆಡಳಿತಾಧಿಕಾರಿ ಐ.ಎಂ.ರಮೇಶ್‌ಕುಮಾರ್, ವ್ಯವಸ್ಥಾಪಕ ಯತಿನ್, ವಿವಿಧ ವಿಭಾಗಗಳು ಹಾಗೂ ಶೈಕ್ಷಣಿಕ ಘಟಕಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ಪಾಲ್ಗೊಂಡರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ