Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುಡಿದು ತಾಯಿಗೆ ಹಿಂಸಿಸುತ್ತಿದ್ದ ತಂದೆಯ ಕೊಲೆ: ಮಗ ಪೊಲೀಸ್ ಬಲೆಗೆ!

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಪ್ರತಿದಿನ ಕುಡಿದು ಬಂದು ತಾಯಿಗೆ ಅಮಾನುಷವಾಗಿ ಹಿಂಸೆ ನೀಡುತ್ತಿದ್ದ ತಂದೆಯನ್ನು ಮಗನೇ ಮಣೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿ, ಅದನ್ನು ಆಕಸ್ಮಿಕ ಅಪಘಾತ ಎಂದು ಬಿಂಬಿಸಲು ಹೋಗಿ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ನಡೆದಿದೆ. 

ಹನುಮನಹಳ್ಳಿ ಗ್ರಾಮದ ನಿವಾಸಿ ಕೆಂಚೇಗೌಡ (55) ಕೊಲೆಯಾದ ದುರ್ದೈವಿ. ಕೃತ್ಯ ಎಸಗಿದ ಅವರ ಎರಡನೇ ಮಗ ಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯ ಹಿನ್ನೆಲೆ:
ಮೃತ ಕೆಂಚೇಗೌಡ ಅವರಿಗೆ ತೀವ್ರವಾದ ಕುಡಿತದ ಚಟವಿತ್ತು. ಇದರಿಂದಾಗಿ ಮನೆಯಲ್ಲಿ ಪ್ರತಿನಿತ್ಯ ಕೌಟುಂಬಿಕ ಕಲಹಗಳು ನಡೆಯುತ್ತಿದ್ದವು. ಇತ್ತೀಚೆಗಷ್ಟೇ ಕೆಂಚೇಗೌಡ ಪತ್ನಿಯ ಮೇಲೆ ತೀವ್ರ ಸ್ವರೂಪದ ಹಲ್ಲೆ ನಡೆಸಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ತಂದೆಯ ನಿರಂತರ ದೌರ್ಜನ್ಯ ಹಾಗೂ ತಾಯಿ ಅನುಭವಿಸುತ್ತಿದ್ದ ನರಕಯಾತನೆಯನ್ನು ಕಂಡು ಆಕ್ರೋಶಗೊಂಡಿದ್ದ ಎರಡನೇ ಮಗ ಕುಮಾರ್, ಜೂನ್ 10ರ ಸಂಜೆ ಮನೆಯಲ್ಲಿದ್ದ ಮಣೆಯಿಂದ ತಂದೆಯ ತಲೆ ಹಾಗೂ ಹೊಟ್ಟೆಯ ಭಾಗಕ್ಕೆ ಬಲವಾಗಿ ಹೊಡೆದಿದ್ದಾನೆ. ತೀವ್ರವಾಗಿ ಗಾಯಗೊಂಡ ಕೆಂಚೇಗೌಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.

ಅಪಘಾತದ ನಾಟಕವಾಡಿದ ಕುಟುಂಬ:
ಘಟನೆ ನಡೆದ ಮರುದಿನ ಮೃತರ ಕುಟುಂಬಸ್ಥರು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದು, ಇದೊಂದು ಆಕಸ್ಮಿಕ ಅಪಘಾತ ಎಂದು ದೂರು ನೀಡಿದ್ದರು. ಆರಂಭದಲ್ಲಿ ಗೊಂದಲದಲ್ಲಿದ್ದ ಕುಟುಂಬಸ್ಥರ ಮಾತು ಕೇಳಿ ಪೊಲೀಸರು ಮೊದಲಿಗೆ 174 ಅಸ್ವಾಭಾವಿಕ ಮರಣ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.

ಪೊಲೀಸರ ಸಮಯಪ್ರಜ್ಞೆ, ಬಯಲಾಯ್ತು ಸತ್ಯ!:
ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಶವಾಗಾರಕ್ಕೆ ತೆರಳಿ ಮೃತದೇಹವನ್ನು ಪರಿಶೀಲಿಸಿದಾಗ ಕೆಂಚೇಗೌಡ ಅವರ ತಲೆ ಹಾಗೂ ಕೆಳಹೊಟ್ಟೆಯ ಭಾಗದಲ್ಲಿ ತೀವ್ರವಾದ ಗಾಯಗಳಿರುವುದು ಪತ್ತೆಯಾಗಿದೆ. ಇದು ಅಪಘಾತದಿಂದ ಆದ ಗಾಯಗಳಲ್ಲ, ಬದಲಿಗೆ ಮಾರಣಾಂತಿಕ ಹಲ್ಲೆಯಿಂದ ಆಗಿರುವುದು ಎಂದು ಪೊಲೀಸರಿಗೆ ಖಾತ್ರಿಯಾಗಿದೆ.

ಈ ಹಿನ್ನೆಲೆಯಲ್ಲಿ ಪೊಲೀಸರು ಮೃತರ ಕುಟುಂಬಸ್ಥರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಕೊಲೆಯ ಸತ್ಯಾಂಶ ಹೊರಬಂದಿದೆ. ಸಂದೇಹದ ಮೇರೆಗೆ ಮಗ ಕುಮಾರ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ತಾನೇ ತಂದೆಯನ್ನು ಕೊಂದಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ.

ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಪ್ರತಿಕ್ರಿಯೆ:
"
ಮೃತರ ಪತ್ನಿಯೇ ಈ ಘಟನೆಗೆ ಸಂಬಂಧಿಸಿದಂತೆ ದೂರು ನೀಡಿದ್ದಾರೆ. ಪ್ರಾಥಮಿಕ ವಿಚಾರಣೆಯ ಪ್ರಕಾರ ತಂದೆಯ ವಿಪರೀತ ಕುಡಿತ ಹಾಗೂ ಕೌಟುಂಬಿಕ ಕಲಹವೇ ಈ ಕೊಲೆಗೆ ಮುಖ್ಯ ಪ್ರೇರಣೆಯಾಗಿದೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು, ಪ್ರಕರಣಕ್ಕೆ ಕೊಲೆ ಸೆಕ್ಷನ್ ಸೇರ್ಪಡೆಗೊಳಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಘಟನೆಯ ಸಂಪೂರ್ಣ ವಿವರ ಲಭ್ಯವಾಗಲಿದೆ."
ಜಿತೇಂದ್ರ ಕುಮಾರ್ ದಯಾಮ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ.

ಸದ್ಯ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಪ್ರತಿನಿತ್ಯದ ಕೌಟುಂಬಿಕ ಕಲಹವೊಂದು ಈ ರೀತಿ ಕೊಲೆಯಲ್ಲಿ ಅಂತ್ಯವಾಗಿರುವುದು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.