Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುಖ್ಯಾತ ರೌಡಿಶೀಟರ್ ಕೊನೆಗೂ ಪೊಲೀಸರ ಬಲೆಗೆ!

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೊಲೆ, ಕೊಲೆ ಯತ್ನ, ದರೋಡೆ, ಮನೆಗಳ್ಳತನ ಸೇರಿದಂತೆ ಭೀಕರ 67 ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯ 30ಕ್ಕೂ ಹೆಚ್ಚು ಬಾರಿ ಜಾಮೀನು ರಹಿತ ವಾರೆಂಟ್ ಹೊರಡಿಸಿದರೂ ಸಿಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್‌ನನ್ನು ಬಾಣಸವಾಡಿ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಹೆಡೆಮುರಿ ಕಟ್ಟಿದ್ದಾರೆ.

ಬಂಧಿತ ಆರೋಪಿಯನ್ನು ಕೆ.ಜಿ. ಹಳ್ಳಿ ನಿವಾಸಿ, ರೌಡಿಶೀಟರ್ ಸೈಯದ್ ಅಬ್ರಾರ್ (32) ಎಂದು ಗುರುತಿಸಲಾಗಿದೆ.

10 ಸಾವಿರ ರೂ. ಕಳ್ಳತನ ಕೇಸ್ ಬೆನ್ನತ್ತಿದಾಗ ಸಿಕ್ಕಿತು 'ದೊಡ್ಡ ಮೀನು'!:
ಕಳೆದ ಮಾರ್ಚ್ ತಿಂಗಳಲ್ಲಿ ಹೆಚ್.ಆರ್.ಬಿ.ಆರ್ ಬಡಾವಣೆ ಸಮೀಪ ಬೀಗ ಹಾಕಿದ್ದ ಮನೆಯೊಂದರ ಬಾಗಿಲು ಮುರಿದು 10 ಸಾವಿರ ರೂಪಾಯಿ ನಗದು ಕಳ್ಳತನವಾಗಿತ್ತು. ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಬಾಣಸವಾಡಿ ಠಾಣೆಯ ಇನ್​ಸ್ಪೆಕ್ಟರ್ ಹೆಚ್.ಸಿ. ಸುದರ್ಶನ್ ಹಾಗೂ ಪಿಎಸ್ಐ ಬಿ.ಟಿ. ವೆಂಕಟರಮಣಪ್ಪ ನೇತೃತ್ವದ ತಂಡ ಸಿಸಿಟಿವಿ ದೃಶ್ಯಾವಳಿಗಳನ್ನು ಜಾಲಾಡಿದಾಗ, ಆರೋಪಿ ಬೈಕ್‌ನಲ್ಲಿ ಪರಾರಿಯಾಗುತ್ತಿರುವುದು ಪತ್ತೆಯಾಗಿತ್ತು. ಇದನ್ನು ಆಧರಿಸಿ ತನಿಖೆ ಚುರುಕುಗೊಳಿಸಿದಾಗ ಸಿಕ್ಕಿದ್ದೇ ಈ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಸೈಯದ್ ಅಬ್ರಾರ್.

ಮೊಬೈಲ್ ಬಳಸದೆ ಪೊಲೀಸರಿಗೆ ಚಳ್ಳೆಹಣ್ಣು ತಿನಿಸುತ್ತಿದ್ದ ಖದೀಮ:
ಆರೋಪಿ ಅಬ್ರಾರ್ ತನಿಖಾ ಸಂಸ್ಥೆಗಳಿಗೆ ಸಿಕ್ಕಿಬೀಳಬಾರದೆಂದು ಮೊಬೈಲ್ ಫೋನ್ ಬಳಸುವುದನ್ನು ಸಂಪೂರ್ಣವಾಗಿ ಬಿಟ್ಟಿದ್ದ. ಅಷ್ಟೇ ಅಲ್ಲದೆ, ಒಂದೇ ಕಡೆ ಇರದೆ ಸದಾ ಜಾಗ ಬದಲಾಯಿಸುತ್ತಾ ಅಲೆಮಾರಿಯಂತೆ ತಿರುಗಾಡುತ್ತಿದ್ದ. ಪೊಲೀಸರು ಸತತ 4 ದಿನಗಳ ಕಾಲ ಹಗಲಿರುಳು ಕಾರ್ಯಾಚರಣೆ ನಡೆಸಿ, ಕೊನೆಗೆ ಬಾಗಲೂರು ಬಳಿ ಈತನನ್ನು ಸುತ್ತುವರಿದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

15 ವರ್ಷಗಳ ಅಪರಾಧ ಇತಿಹಾಸ, 37 ವಾರೆಂಟ್‌ಗಳು!:
ಬಂಧಿತ ಅಬ್ರಾರ್‌ನ ಹಿನ್ನೆಲೆ ಕೆದಕಿದ ಪೊಲೀಸರಿಗೇ ಶಾಕ್ ಕಾದಿತ್ತು. ಕಳೆದ 15 ವರ್ಷಗಳಿಂದ ಅಪರಾಧ ಲೋಕದಲ್ಲಿ ಸಕ್ರಿಯನಾಗಿದ್ದ ಈತನ ವಿರುದ್ಧ ಬೆಂಗಳೂರು, ಕೋಲಾರ, ಯಾದಗಿರಿ ಸೇರಿದಂತೆ ವಿವಿಧ ಜಿಲ್ಲೆಗಳ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ರಾಬರಿ ಹಾಗೂ ಕಳ್ಳತನದ 67 ಪ್ರಕರಣಗಳು ದಾಖಲಾಗಿವೆ.

ನ್ಯಾಯಾಲಯದ ವಿಚಾರಣೆಗೆ ನಿರಂತರವಾಗಿ ಗೈರಾಗಿದ್ದ ಹಿನ್ನೆಲೆಯಲ್ಲಿ ಈತನ ವಿರುದ್ಧ 37ಕ್ಕೂ ಹೆಚ್ಚು ಜಾಮೀನು ರಹಿತ ವಾರೆಂಟ್‌ಗಳು ಜಾರಿಯಾಗಿದ್ದವು.
ನ್ಯಾಯಾಲಯವು ಈತನನ್ನು ಐದು ಬಾರಿ ಪ್ರೊಕ್ಲಮೇಷನ್ (ಸ್ವಯಂಘೋಷಿತ ಅಪರಾಧಿ) ಎಂದು ಘೋಷಿಸಿತ್ತು.

ಮೋಜು-ಮಸ್ತಿಗಾಗಿ ಕಳ್ಳತನ:
ಕಳೆದ ಎರಡು ವರ್ಷಗಳ ಹಿಂದೆ ಅಪರಾಧ ಪ್ರಕರಣವೊಂದರಲ್ಲಿ ಈತನನ್ನು ಗೋವಿಂದಪುರ ಪೊಲೀಸರು ಬಂಧಿಸಿದ್ದರು. ಆದರೆ, ಜಾಮೀನಿನ ಮೇಲೆ ಹೊರಬಂದಿದ್ದ ಈತ ಮತ್ತೆ ತನ್ನ ಹಳೇ ಚಾಳಿ ಮುಂದುವರಿಸಿದ್ದ. ಕೇವಲ ಐಷಾರಾಮಿ ಜೀವನ ಹಾಗೂ ಮೋಜು-ಮಸ್ತಿ ಮಾಡಲು ಹಣ ಸಂಪಾದಿಸಲೆಂದೇ ಈತ ನಿರಂತರವಾಗಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಆರೋಪಿಯನ್ನು ಕಂಬಿ ಹಿಂದೆ ತಳ್ಳಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣ ಹೆಚ್ಚಿದರೂ ಸಂಸ್ಕಾರ ಕಡಿಮೆಯಾದರೆ ಜ್ಞಾನ ನಿಷ್ಫಲ:ಜ್ಞಾನದ ಅರಿವು ಇಂದಿನ ಸಮಾಜಕ್ಕೆ ಅನಿವಾರ್ಯ: ಸಾಹಿತಿ ಮಣ್ಣೆ ಮೋಹನ್ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಮತ್ತು ಸ್ನಾತಕ ಸಾರ್ಥಕತೆ ಸಮಾರಂಭಟ್ವಿಟರ್‌ನಲ್ಲಿ ಉಪದೇಶ ನಿಲ್ಲಿಸಿ ಸರ್ಕಾರದ ‘ರಿಯಾಲಿಟಿ ಚೆಕ್’ ಮಾಡಿಕೊಳ್ಳಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಜೆಡಿಎಸ್ ಕಿಡಿಕುಮಾರಸ್ವಾಮಿ ವಿರುದ್ಧ ನಿಂದಿಸಿದವರಿಗೆ ಮಂತ್ರಿಸ್ಥಾನ: ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಆಕ್ರೋಶಮುಖ್ಯಮಂತ್ರಿ ಶಿವಕುಮಾರ್ ಅವರನ್ನು ಭೇಟಿಯಾಗಿ ಅಭಿನಂದಿಸಿದ ಪಿ.ಜಿ.ಆರ್. ಸಿಂಧ್ಯಾರಕ್ಷಣಾ ವಲಯದಲ್ಲಿ ಆತ್ಮನಿರ್ಭರತೆ: ಕರ್ನಾಟಕದ ಹೆಗಲಿಗೆ ದೇಶದ ನೀತಿ-ನಿರೂಪಣೆಯ ಜವಾಬ್ದಾರಿ;ಶಿವಮೊಗ್ಗಕ್ಕೆ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಕುರಿತು ಚರ್ಚೆ:ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಸಿಎಂ ಶಿವಕುಮಾರ್ ಮಹತ್ವದ ಸಭೆಉಕ್ಕಿನ ವಲಯದಲ್ಲಿ ಡಿಜಿಟಲೀಕರಣ ಭವಿಷ್ಯದ ಬೆಳವಣಿಗೆಗೆ ಅನಿವಾರ್ಯ: ಸಚಿವ ಹೆಚ್.ಡಿ. ಕುಮಾರಸ್ವಾಮಿ