Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೀವನ ಮಟ್ಟ ಸುಧಾರಣೆಯ ಆಯ್ಕೆಗಳು...

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾವು ನಮ್ಮ ಜೀವನದ ಸಾಕಷ್ಟು ಸಮಯವನ್ನು ಯಾವ ಸ್ಥಳದಲ್ಲಿ
, ಯಾವ ಪ್ರದೇಶದಲ್ಲಿ, ಯಾವ ವ್ಯಕ್ತಿಗಳೊಂದಿಗೆ, ಯಾವ ಭಾವದೊಂದಿಗೆ ಹೆಚ್ಚು ಹೆಚ್ಚು ಕಳೆಯುತ್ತೇವೆಯೋ ಅದರ ಪ್ರಭಾವ ನಮ್ಮ ಬದುಕಿನ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಇದು ಬಹುತೇಕ ಅನಿವಾರ್ಯವಾಗಿ ಸಹಜವಾಗಿಯೇ, ಅನುಕೂಲಕ್ಕೆ ತಕ್ಕಂತೆ ನಡೆಯುತ್ತದೆ. ಇವುಗಳ ಮೇಲೆ ನಿಯಂತ್ರಣ ಸಾಧಿಸಬೇಕಿರುವುದು ನಮ್ಮ ಆಯ್ಕೆ ಮತ್ತು ವಿವೇಚನೆಗೆ ಬಿಟ್ಟಿದ್ದು. ಕೆಲವು ಉದಾಹರಣೆಗಳೆಂದರೆ.........

ಆಸ್ಪತ್ರೆಗಳಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನೋವನ್ನು ಉಂಟುಮಾಡುತ್ತದೆ, ಆಟದ ಮೈದಾನದಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನಲಿವನ್ನು ಕೊಡುತ್ತದೆ‌.

 ಪೋಲೀಸ್ ಸ್ಟೇಷನ್, ಜೈಲು, ನ್ಯಾಯಾಲಯಗಳಲ್ಲಿ ಸವೆಸುವ ಸಮಯ ಯಾವಾಗಲೂ ಕಹಿ ನೆನಪುಗಳನ್ನು ಉಳಿಸುತ್ತದೆ. ಗ್ರಂಥಾಲಯದಲ್ಲಿ ಸವೆಸುವ ಸಮಯ ಯಾವಾಗಲೂ ಜ್ಞಾನವನ್ನು ವೃದ್ಧಿಸುತ್ತದೆ.

ಸಾವು, ಸ್ಮಶಾನ, ತಿಥಿಗಳಲ್ಲಿ ಭಾಗವಹಿಸಿದಾಗ ಹೃದಯ ಭಾರವಾಗುತ್ತದೆ. ಮದುವೆ, ನಾಮಕರಣ, ಗೃಹ ಪ್ರವೇಶ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.

ಸಿನಿಮಾ, ನಾಟಕ, ಸರ್ಕಸ್ ಮುಂತಾದ ಸ್ಥಳಗಳು ಭಾವನೆಗಳನ್ನು ಕೆರಳಿಸುತ್ತವೆ, ದೇವ ಮಂದಿರ, ಚರ್ಚು, ಮಸೀದಿ, ಮಠ ಮಾನ್ಯಗಳು ಮುಂತಾದ ಪ್ರಾರ್ಥನಾ ಸ್ಥಳಗಳು ಭಾವನೆಗಳನ್ನು ನಿಯಂತ್ರಿಸುತ್ತವೆ.

ಐತಿಹಾಸಿಕ ಮತ್ತು ಪೌರಾಣಿಕ ಘಟನೆಗಳು ಕುತೂಹಲ ಮೂಡಿಸುತ್ತದೆ, ಪ್ರಸ್ತುತ ರಾಜಕೀಯ ಮತ್ತು ಹಿಂಸಾತ್ಮಕ ಘಟನೆಗಳು ಅಸಹ್ಯ ಮತ್ತು ಬೇಸರ ಮೂಡಿಸುತ್ತದೆ.

ಪ್ರಕೃತಿಯೊಂದಿಗಿನ ಒಡನಾಟ ಜೀವನೋತ್ಸಾಹ ಹೆಚ್ಚಿಸುತ್ತದೆ. ಆಧುನಿಕ ತಂತ್ರಜ್ಞಾನದ ಒಡನಾಟ ಜೀವನದ ಬಗ್ಗೆ ಜಿಗುಪ್ಸೆ ಹೆಚ್ಚಿಸುತ್ತದೆ. ಪ್ರಶ್ನಿಸುವ ಮನೋಭಾವ ಮನಸ್ಸನ್ನು ವಿಶಾಲಗೊಳಿಸಿ ಸದಾ ಜಾಗೃತವಾಗಿಟ್ಟಿರುತ್ತದೆ.

ಪ್ರಶ್ನಿಸದೆ ಒಪ್ಪಿಕೊಳ್ಳುವ ಮನೋಭಾವ ಮನಸ್ಸನ್ನು ಸಂಕುಚಿತಗೊಳಿಸಿ ಅರಿವಿನ ಮಟ್ಟವನ್ನು ಕುಗ್ಗಿಸುತ್ತದೆ. ದ್ವೇಷ, ಅಸೂಯೆ, ಅಹಂಕಾರ, ಪ್ರತಿಕಾರಗಳು, ಸಂಬಂಧಗಳನ್ನು ನಾಶಪಡಿಸುತ್ತದೆ.

ಪ್ರೀತಿ, ಸಹಕಾರ, ತ್ಯಾಗ, ತಾಳ್ಮೆ , ಕರುಣೆ, ಕ್ಷಮೆ  ಸಂಬಂಧಗಳನ್ನು ಬೆಳೆಯುತ್ತವೆ. ಈ ಎಲ್ಲಾ ಆಯ್ಕೆಗಳು ಬಹುತೇಕ ನಮ್ಮ ನಿಯಂತ್ರಣಕ್ಕೆ ಒಳಪಟ್ಟಿರುತ್ತದೆ. ಅನಿವಾರ್ಯತೆ ಹೊರತುಪಡಿಸಿ ನಾವು ಯಾವುದನ್ನು ಎಷ್ಟು ಪ್ರಮಾಣದಲ್ಲಿ ಉಪಯೋಗಿಸಿಕೊಳ್ಳುತ್ತೇವೆ ಎಂಬುದರ ಮೇಲೆ ಬದುಕಿನ ಘನತೆ ನಿರ್ಧರಿಸಲ್ಪಡುತ್ತದೆ. ಆದಷ್ಟು ಉತ್ತಮ ವಾತಾವರಣದಲ್ಲಿ ಜೀವಿಸಲು ಪ್ರಯತ್ನಿಸಿ..........
ಲೇಖನ-ವಿವೇಕಾನಂದ. ಎಚ್. ಕೆ. 9663750451

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ