Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೋಡಿಮಠದ ಸ್ವಾಮಿಗಳ ಭವಿಷ್ಯವಾಣಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೋಡಿಮಠದ ಸ್ವಾಮಿಗಳ ಭವಿಷ್ಯವಾಣಿ.....

ಕೋಡಿಹಳ್ಳಿ ಮಠದ ಸ್ವಾಮಿಗಳ ಭವಿಷ್ಯವಾಣಿ ರಾಜ್ಯದ ಮಾಧ್ಯಮಗಳಲ್ಲಿ ಹಲವಾರು ವರ್ಷಗಳಿಂದ ಬಹಳ ಪ್ರಾಮುಖ್ಯತೆ ಪಡೆಯುತ್ತದೆ. ಕಳೆದ 40/50 ವರ್ಷಗಳಿಂದ ಅವರ ಭವಿಷ್ಯ ವಾಣಿ ಗಮನಿಸಿದಾಗ ಒಂದಷ್ಟು ನಿಜವಾಗಿರುವುದು ಸಹ ವಾಸ್ತವ. ಅದರಲ್ಲೂ ಪ್ರಾಕೃತಿಕ, ರಾಜಕೀಯ ಮತ್ತು ಕೆಲವು ದುರಂತ ಘಟನೆಗಳ ಬಗ್ಗೆ ಅವರು ನುಡಿದ ಭವಿಷ್ಯಗಳು ಸಾಮಾನ್ಯವಾಗಿ ನಿಜವಾಗುತ್ತದೆ.....

ಹಾಗಾದರೆ ಸ್ವಾಮೀಜಿಗಳ ಭವಿಷ್ಯ ನಿಜವೇ, ಅವರಿಗೆ ಆ ಶಕ್ತಿ ಇದೆಯೇ ಅಥವಾ ಅದೊಂದು ಅನುಭವದ ಮಾತುಗಳೇ, ಆಳ ಅಧ್ಯಯನದ ಚಿಂತನೆಯೇ, ದೂರ ದೃಷ್ಟಿಯೇ ಅಥವಾ ಅವರೊಳಗಿನ, ಪ್ರತಿಭೆಯೇ, ಅವರು ವಿಶೇಷ ಸಾಮರ್ಥ್ಯವೇ, ವೈಚಾರಿಕತೆಯೇ, ವೈಜ್ಞಾನಿಕವೇ, ಮೂಡನಂಬಿಕೆಯೇ ಹೀಗೆ ಪ್ರಶ್ನೆಗಳು ಸಾಮಾನ್ಯ ಜನರಲ್ಲಿ ಉದ್ಭವವಾಗುತ್ತದೆ.....

ಪ್ರಾಕೃತಿಕವಾಗಿ, ಸಹಜವಾಗಿ ಹೇಳುವುದಾದರೆ ಭವಿಷ್ಯವನ್ನು ಊಹಿಸಿ ಖಚಿತವಾಗಿ ಹೇಳುವುದು ಯಾರಿಂದಲೂ ಸಾಧ್ಯವಿಲ್ಲ. ವಿಜ್ಞಾನವು ಕೂಡ ಆ ವಿಷಯದಲ್ಲಿ ಸಂಪೂರ್ಣ ಸತ್ಯ ಎಂದು ಹೇಳಲು ಆಗುವುದಿಲ್ಲ. ಏಕೆಂದರೆ ಭವಿಷ್ಯದ ಘಟನೆಗಳು ಎಲ್ಲಾ ಸಾಧ್ಯತೆಗಳ, ಅವಕಾಶಗಳ ಒಂದು ನಿಗೂಢ  ಮಾತ್ರ. ಆಗಬಹುದು, ಆಗದೇ ಇರಬಹುದು, ಆಗುತ್ತಲೂ ಇರಬಹುದು......

ಕೋಡಿ ಮಠದ ಸ್ವಾಮೀಜಿಗಳು ಸಾಮಾನ್ಯವಾಗಿ ಮಳೆ ಬೆಳೆ, ಅತೀವೃಷ್ಟಿ, ಅನಾವೃಷ್ಟಿ, ಭೂಕಂಪ, ಅಗ್ನಿಯ ಅನಾಹುತಗಳು, ಭಯೋತ್ಪಾದಕ ಕೃತ್ಯಗಳು, ಅಪಘಾತಗಳು, ಸಾವುಗಳು ಈ ಬಗ್ಗೆ ಹೇಳುತ್ತಾರೆ, ಜೊತೆಗೆ ರಾಜಕೀಯದಲ್ಲಿ ಯಾವ ಪಕ್ಷ ಗೆಲ್ಲಬಹುದು, ಯಾವ ಪಕ್ಷ ಸೋಲಬಹುದು ಅಥವಾ ಸಮ್ಮಿಶ್ರ ಸರ್ಕಾರವೇ ಎಂಬುದನ್ನು ಆಗಾಗ ಹೇಳುತ್ತಿರುತ್ತಾರೆ. ಅನೇಕ ಪ್ರಸಿದ್ಧ ವ್ಯಕ್ತಿಗಳ ಸಾವುಗಳ ಬಗ್ಗೆ ಕೂಡ ಅವರು ಊಹಿಸಿ ಹೇಳುತ್ತಿರುತ್ತಾರೆ. ಅದನ್ನು ಅವರದೇ ಭಾಷೆಯಲ್ಲಿ ಸಾಂಕೇತಿಕವಾಗಿ  ಹೇಳುತ್ತಾರೆ. ಕೆಲವು ಮಾಧ್ಯಮಗಳು ಅವರಿಗೆ ತೋಚಿದಂತೆ ವಿಮರ್ಶಿಸುತ್ತಾರೆ.....

ಅವರು ಹೇಳುವುದೆಲ್ಲ ಸುಳ್ಳು ಎಂದರೆ ಅದು ತಪ್ಪಾಗುತ್ತದೆ ಅಥವಾ ಅವರು ಹೇಳುವುದೆಲ್ಲ ನಿಜ, ಖಚಿತವಾಗಿರುತ್ತದೆ ಎಂದರೆ ಅದೂ ಸಹ ತಪ್ಪಾಗುತ್ತದೆ. ಹಾಗಾದರೆ ವಾಸ್ತವ ಏನು....

ಸಾಮಾನ್ಯವಾಗಿ ಯಾವುದೇ ವಿಷಯದಲ್ಲಿ ಪರಿಣಿತಿ ಹೊಂದಿದ ತಜ್ಞರು ಆಯಾ ವಿಷಯಕ್ಕೆ ಸಂಬಂಧಿಸಿದಂತೆ ಭವಿಷ್ಯದಲ್ಲಿ ಅದು ಪಡೆಯುವ ತಿರುವುಗಳು, ಪರಿಣಾಮಗಳು ಫಲಿತಾಂಶಗಳ ಬಗ್ಗೆ ಒಂದಷ್ಟು ಮಾಹಿತಿಯನ್ನು ನೀಡುತ್ತಾರೆ. ವಿಜ್ಞಾನವೇ ಇರಲಿ, ಕೃಷಿ ಕ್ಷೇತ್ರವೇ ಇರಲಿ, ಶಿಕ್ಷಣವೇ ಇರಲಿ, ರಾಜಕೀಯವೇ ಇರಲಿ ಮುಂದೆ ಭವಿಷ್ಯದಲ್ಲಿ ಈ ರೀತಿಯ ಘಟನೆಗಳಾಗುವ ಸಾಧ್ಯತೆ ಇರುತ್ತದೆ ಎಂದು ಹೇಳುತ್ತಾರೆ. ಅದು ಕೆಲವೊಮ್ಮೆ ಘಟಿಸಬಹುದು, ಕೆಲವೊಮ್ಮೆ ಆಗದೇ ಇರಬಹುದು. ಆದರೆ ಈ ಕ್ಷಣದಲ್ಲಿ ಅದು ಒಂದು ಪ್ರತಿಕ್ರಿಯೆ ರೂಪದಲ್ಲಿರುತ್ತದೆ.....

ಕೋಡಿಮಠದ ಸ್ವಾಮಿಗಳು ಯಾರೋ ಮಹಾತ್ಮರು ಸಾಯುತ್ತಾರೆ ಎನ್ನುವುದಾಗಲಿ, ಎಲ್ಲೋ ಒಂದು ಕಡೆ ಭಯೋತ್ಪಾದಕ ದಾಳಿಯಾಗುತ್ತದೆ ಎಂದು ಹೇಳುವುದಾಗಲಿ, ರಾಜಕೀಯದಲ್ಲಿ ಮಹತ್ತರ ಬದಲಾವಣೆಗಳಾಗುತ್ತವೆ ಎನ್ನುವುದಾಗಲಿ ಎಲ್ಲೂ ಖಚಿತವಾಗಿ ಇದೇ ರೀತಿ ಎಂದು ಹೇಳುವುದಿಲ್ಲ, ಹೇಳಲು ಸಾಧ್ಯವೂ ಇಲ್ಲ. ಆದರೆ ಅವರು ಊಹಿಸುವ ರೀತಿ ಖಂಡಿತವಾಗಿಯೂ ಆ ವಿಷಯದಲ್ಲಿ ಪರಿಣಿತಿ ಹೊಂದಿರುವ ಎಲ್ಲರೂ ಊಹಿಸಬಹುದಾದ ರೀತಿಯಲ್ಲಿಯೇ ಇರುತ್ತದೆ. ಅನುಭವದ ಆಧಾರದ ಮೇಲೆ ಸ್ವಾಮೀಜಿಗಳಿಗೆ ಬಹುಶಃ 80 ಅಥವಾ ಅದಕ್ಕಿಂತ ಹೆಚ್ಚು ವಯಸ್ಸಾಗಿರುವುದರಿಂದ ಈ ವಿಷಯದಲ್ಲಿ ಪರಿಣಿತಿ ಹೊಂದಿದ್ದಾರೆ. ಸಮಕಾಲೀನ ಆಗುಹೋಗುಗಳ ಬಗ್ಗೆ, ಐತಿಹಾಸಿಕ ಘಟನೆಗಳ ಬಗ್ಗೆ ಮಾಹಿತಿ ಇದೆ. ಅದರೊಂದಿಗೆ ಅವರಿಗೆ ಭವಿಷ್ಯ ಹೇಳುವ ಕಲೆಯೂ ಇದೆ. ಈ ಎಲ್ಲಾದರ ಮಿಶ್ರಣವಾಗಿ ಅವರು ಹೇಳುವ ಭವಿಷ್ಯ ವಾಣಿ ಒಂದಷ್ಟು ಸತ್ಯಗಳನ್ನು ನಿಜಗಳನ್ನು ಒಳಗೊಂಡಿರಬಹುದು....

ಉದಾಹರಣೆಗೆ ಒಬ್ಬ ಕ್ರೀಡಾಪಟು ಅತ್ಯಂತ ವೇಗವಾಗಿ ಓಡುವುದಾಗಲಿ, ಒಬ್ಬ ರಾಜಕಾರಣಿ ನಿರಂತರವಾಗಿ ಚುನಾವಣೆಯಲ್ಲಿ ಗೆಲ್ಲುವುದಾಗಲಿ, ಒಬ್ಬ ಹಾಡುಗಾರ ನಿರಂತರವಾಗಿ ಹಾಡುವುದಾಗಲಿ ಅದೆಲ್ಲವೂ ಕೆಲವೊಮ್ಮೆ ವಿಶೇಷ ಸಾಮರ್ಥ್ಯವನ್ನು ಹೊಂದಿರುತ್ತದೆ. ಹಾಗೆಂದು ಅದೇ ಅಂತಿಮವೇನು ಅಲ್ಲ. ಹಾಗೆಯೇ ಸ್ವಾಮಿಗಳಿಗೂ ಕೂಡ ಅವರು ಹೇಳುವ ವಿಷಯದಲ್ಲಿ ಒಂದಷ್ಟು ಪರಿಣಿತಿ ಇದೆ, ಹಾಗೆಂದು ಅದು ಖಚಿತ, ಅವರಲ್ಲಿ ದೈವೀಶಕ್ತಿ ಇದೆ ಎನ್ನುವ ಭ್ರಮೆಗೆ ಒಳಗಾಗಬಾರದು. ಅನೇಕ ಇತಿಹಾಸಕಾರರು ಅನೇಕ, ರಾಜಕೀಯ ವಿಶ್ಲೇಷಕರು, ಅನೇಕ ಆರ್ಥಿಕ ತಜ್ಞರು ಮುಂದಿನ 10 20 30 ವರ್ಷಗಳ ಭವಿಷ್ಯವನ್ನು ಊಹಿಸಿ ಹೇಳುತ್ತಾರೆ. ಅದು ಎಷ್ಟೋ ಬಾರಿ ನಿಜವೂ ಆಗುತ್ತದೆ. ಕೆಲವೊಮ್ಮೆ ತಪ್ಪು ಆಗುತ್ತದೆ. ಅದು ವಿಷಯದಲ್ಲಿರುವ ಪರಿಣಿತಿಯೇ ಹೊರತು ದೈವ ಅಥವಾ ಅತಿಮಾನುಷ ಶಕ್ತಿಯಲ್ಲ ಇದನ್ನು ಎಲ್ಲರೂ ಗಮನಿಸಬೇಕು......

ಇತ್ತೀಚಿನ ವರ್ಷಗಳಲ್ಲಿ ರಾಜಕೀಯವಾಗಿ, ಆರ್ಥಿಕವಾಗಿ, ಪ್ರಾಕೃತಿಕವಾಗಿ ಸಹ ಬಹುದೊಡ್ಡ ಏಳು ಬೀಳುಗಳು ಉಂಟಾಗುತ್ತಿದೆ. ಸಾವುಗಳು ಕೂಡ ಅನಿರೀಕ್ಷಿತವಾಗಿ ನಮಗೆ ಆಘಾತವನ್ನುಂಟು ಮಾಡುತ್ತಿವೆ. ಇಂತಹ ಸಂದರ್ಭದಲ್ಲಿ ಸ್ವಾಮೀಜಿಗಳು ಹೇಳುವುದು ಕೆಲವೊಮ್ಮೆ ನಮಗೂ ಆಶ್ಚರ್ಯವಾಗುತ್ತದೆ. ಆದರೆ ಆಳಕ್ಕೆ ಇಳಿದಾಗ ಅದೆಲ್ಲವೂ ಇತಿಹಾಸದ ಭಾಗಗಳೇ ಆಗಿರುತ್ತವೆ....

ಈ ಭವಿಷ್ಯ ಹೇಳುವ ಕಲೆ ಕೇವಲ ಕೋಡಿಮಠದ ಸ್ವಾಮಿಗಳು ಮಾತ್ರವಲ್ಲ. ಇನ್ನು ಅನೇಕರು ಈ ರೀತಿಯ ಭವಿಷ್ಯಗಳನ್ನು ಹೇಳುತ್ತಿರುತ್ತಾರೆ. ಎಂದಿನಂತೆ ಅವರು ಹೇಳುವ ಘಟನೆಗಳು ಖಚಿತವಲ್ಲದ ಆದರೆ ಸಾಧ್ಯಾಸಾಧ್ಯತೆಗಳ ಒಂದು ಮುನ್ನೋಟ ಮಾತ್ರವಾಗಿರುತ್ತದೆ. ಈ ಬಗ್ಗೆ ಸಾಕಷ್ಟು ಅಧ್ಯಯನಗಳು ನಡೆಯುತ್ತಿವೆ. ಸದ್ಯಕ್ಕೆ ಚರ್ಚೆ, ವಾದಗಳಿಗೆ ಅವಕಾಶಗಳು ಯಥೇಚ್ಛವಾಗಿದೆ.......

ಕೆಲವರು ಇದೊಂದು ವೈಜ್ಞಾನಿಕ ವಿದ್ಯೆ. ಗ್ರಹಗಳು, ನಕ್ಷತ್ರಗಳ ಚಲನವಲನಗಳನ್ನು ಅಭ್ಯಸಿಸಿ ಮನುಷ್ಯ ಇತಿಹಾಸದ ಅನುಭವಗಳ ಆಧಾರದ ಮೇಲೆ ಆತನ ಗುಣ ಸ್ವಭಾವಗಳನ್ನು ಗುರುತಿಸುವ ವಿಜ್ಞಾನವಿದು. ಖಚಿತ ಭವಿಷ್ಯ ಹೇಳುವುದು ಸಾಧ್ಯವಿಲ್ಲವಾದರು ಕೆಲವು ನಡೆಗಳನ್ನು ಗುರುತಿಸಬಹುದು.

ಈಗಿನ ಅನೇಕ ನಕಲಿ ಜ್ಯೋತಿಷಿಗಳ ವ್ಯಾಪಾರಿ ಮನೋಭಾವದಿಂದ ಇದು ಕಲುಷಿತಗೊಂಡಿದ್ದು ನಿಜವಾದ ಜ್ಯೋತಿಷ್ಯ ಶಾಸ್ತ್ರ ವೈಚಾರಿಕವಾದದ್ದು ಎಂದು ಸಮರ್ಥಿಸಿಕೊಳ್ಳುತ್ತಾರೆ....

ಹೌದು, ಕೆಲವೊಮ್ಮೆ ಅದರಲ್ಲೂ ನಮ್ಮ ಸಂಕಷ್ಟದ ಸಮಯದಲ್ಲಿ ಯಾರೋ ಜ್ಯೋತಿಷಿಗಳು ಮೇಲೆ ತಿಳಿಸಿದ ಅಂಶಗಳ ಆಧಾರದಲ್ಲಿ ಕೆಲವು ಊಹಾತ್ಮಕ ಅಥವಾ ಅವರು ಕಲಿತ ವಿದ್ಯೆಯ ನೆರವಿನಿಂದ ಕೆಲವು ಸಲಹೆ ಸೂಚನೆಗಳನ್ನು ನೀಡಬಹುದು. ಅದು‌ಹಲವು ಬಾರಿ ನಿಜವೂ ಆಗಬಹುದು. ಅದು ಜ್ಯೋತಿಷ್ಯದ ಮೇಲೆ ನಂಬಿಕೆ ಹೆಚ್ಚಿಸುತ್ತದೆ. ಹಾಗಾದರೆ ಜ್ಯೋತಿಷ್ಯ ನಿಜವೇ ?

ಒಣ ವೈಚಾರಿಕ ಪ್ರಜ್ಞೆಯೂ ಬೇಡ ಅಥವಾ ಹಿರಿಯರು ತೋರಿದ ಧರ್ಮ, ಸಂಪ್ರದಾಯದ ನಂಬಿಕೆಯ ದಾರಿಯೂ ಬೇಡ. ನಮ್ಮ ಇಂದಿನ ಅರಿವು ಅನುಭವದ ಮಿತಿಯಲ್ಲಿ ಇದನ್ನು ಯೋಚಿಸೋಣ.........

ಇದು ಸಾರ್ವತ್ರಿಕ ಸತ್ಯವೇ ? ವಿಶ್ವದ ಈಗಿನ ಸುಮಾರು 750 ಕೋಟಿ ಜನಸಂಖ್ಯೆಗೂ ಇದು ಅನ್ವಯವಾಗುತ್ತದೆಯೇ ? ಸೃಷ್ಟಿಯ ಎಲ್ಲಾ ಭೂ ಪ್ರದೇಶದಲ್ಲಿಯೂ  ಏಕ ಪ್ರಕಾರವಾಗಿ ಪರಿಣಾಮ ಬೀರುತ್ತದೆಯೇ ? ಮನುಷ್ಯರಿಗೆ ಮಾತ್ರವೇ ಅಥವಾ ಸಕಲ ಚರಾಚರ ಜೀವಿಗಳಿಗೂ ಅನ್ವಯಿಸುತ್ತದೆಯೇ ? ಬಣ್ಣ, ದಿಕ್ಕು, ಸಂಖ್ಯೆಗಳು ಮನುಷ್ಯನ ವ್ಯಾವಹಾರಿಕ ಅನುಕೂಲಕ್ಕಾಗಿ ಗುರುತಿಸುವಿಕೆಯ ಕಾರಣಕ್ಕಾಗಿ ನೀಡಿದ ಹೆಸರುಗಳಲ್ಲವೇ ?

ಸಾರ್ವಜನಿಕವಾಗಿ  ಪ್ರಾಕೃತಿಕ ವಿಕೋಪಗಳನ್ನು, ವೈಯಕ್ತಿಕವಾಗಿ ಮನುಷ್ಯನ ಏಳು ಬೀಳುಗಳನ್ಮು, ಯಶಸ್ಸು ವೈಫಲ್ಯಗಳನ್ನು, ಹುಟ್ಟು ಸಾವುಗಳನ್ನು ಖಚಿತವಾಗಿ ಮೊದಲೇ ಮಾಹಿತಿ ನೀಡಲು ಸಾಧ್ಯವೇ ? ಪ್ರಕೃತಿಯ ಎಲ್ಲಾ ಅಂಶಗಳನ್ನು ಜ್ಯೋತಿಷ್ಯ ಶಾಸ್ತ್ರ ಭೇದಿಸಿದೆಯೇ ?

ಆರೋಗ್ಯವೇ ಇರಲಿ, ಆರ್ಥಿಕ ಪರಿಸ್ಥಿತಿಯೇ ಇರಲಿ, ತಂತ್ರಜ್ಞಾನವೇ ಇರಲಿ, ಮಾನಸಿಕ ಸಮತೋಲನವೇ ಇರಲಿ ಅಥವಾ ವ್ಯವಸ್ಥೆಯ ಯಾವುದೇ ವಿಷಯದಲ್ಲಿ ವಿಜ್ಞಾನ ಮತ್ತು ಜ್ಯೋತಿಷ್ಯದ ಮುಖಾಮುಖಿಯಲ್ಲಿ ಜ್ಯೋತಿಷ್ಯ ಹೆಚ್ಚು ಖಚಿತವಾದದ್ದು ಮತ್ತು ಸಾರ್ವತ್ರಿಕ ಸತ್ಯ ಎಂದು ನಿಮಗನಿಸುತ್ತದೆಯೇ ?

ಯಾವುದೋ ನಮ್ಮ ವೈಯಕ್ತಿಕ ನೆಲೆಯಲ್ಲಿ ಕೆಲವು ಘಟನೆಗಳು ಕಾಕತಾಳೀಯ ಅಥವಾ ಸಹಜ ಸ್ವಾಭಾವಿಕವಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನಿಜವಾದಲ್ಲಿ ಅದನ್ನೇ ಸಂಪೂರ್ಣ ಸತ್ಯ ಎಂದು ಭಾವಿಸಬೇಕೆ ? ಈ ಕ್ಷಣದ ಆಧುನಿಕ ಸಮಾಜವನ್ನು ಗಮನಿಸಿದಾಗ ಇಡೀ ವಿಶ್ವದ ದಿನನಿತ್ಯದ ಆಗುಹೋಗುಗಳನ್ನು ಮುನ್ನಡೆಸುತ್ತಿರುವುದು ವಿಜ್ಞಾನವೇ ಅಥವಾ ಜ್ಯೋತಿಷ್ಯವೇ ?

ಸಾವಿನ ಭಯ ಪಡದೆ, ಸೋಲಿನ ಆತಂಕಕ್ಕೆ ಒಳಗಾಗದೆ, ನಿಷ್ಕಲ್ಮಶ ಮನಸ್ಸಿನಿಂದ, ವಿಶಾಲ ಮನೋಭಾವದಿಂದ, ದೀರ್ಘಕಾಲದ ಮೌನದಲ್ಲಿ ಇದರ ಬಗ್ಗೆ ನೀವು ಯೋಚಿಸಿದರೆ ಬಹುಶಃ ವಾಸ್ತವಿಕ ಸತ್ಯ ನಿಮಗೆ ಅರ್ಥವಾಗಬಹುದು. ಬದುಕು ತುಂಬಾ ಸರಳವಾಗಿದ್ದಾಗ, ಮನುಷ್ಯ ಪ್ರಕೃತಿಯೊಂದಿಗೆ ಜೀವಿಸುತ್ತಿದ್ದಾಗ,‌ಆತನ ಬೇಡಿಕೆಗಳು ಅನ್ನ ಆಹಾರಕ್ಕೆ ಸೀಮಿತವಾಗಿದ್ದಾಗ, ಅಕ್ಷರ ಜ್ಞಾನವಿಲ್ಲದ ಸಮಯದಲ್ಲಿ, ವಿಜ್ಞಾನ ಇನ್ನೂ ಅಸ್ತಿತ್ವವಿಲ್ಲದ ಕಾಲದಲ್ಲಿ ಜ್ಯೋತಿಷ್ಯ ಒಂದು ಸಲಹಾ ರೂಪದ ಮಾರ್ಗದರ್ಶನವಾಗಿ ಇದ್ದಿರಬಹುದು....


ಆದರೆ ಇಂದಿನ ಸಂಕೀರ್ಣ ಆಧುನಿಕ ಸಮಾಜದಲ್ಲಿ ವಿಜ್ಞಾನವನ್ನು ತಿರಸ್ಕರಿಸಿ, ಜ್ಯೋತಿಷ್ಯವನ್ನು ಪುರಸ್ಕರಿಸಿ ನಮ್ಮ ದೇಶದ ಅಭಿವೃದ್ಧಿ ಸಾಧ್ಯವೇ? ವೈಯಕ್ತಿಕ ಬದುಕಿನ ಯಶಸ್ಸು ನೆಮ್ಮದಿ ಸಾಧ್ಯವೇ ? ಯೋಚಿಸುವ ಸರದಿ ನಮ್ಮದು....... ಲೇಖನ:ವಿವೇಕಾನಂದ. ಎಚ್. ಕೆ. 9663750451

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ