Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದುಳಿದ ವರ್ಗಗಳ ಸಾಮಾಜಿಕ ನ್ಯಾಯದ ದನಿ ಅರಸು

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಇಲ್ಲಿನ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಲಯನ್ಸ್‌ ಕ್ಲಬ್‌
, ಎನ್‌ಎಸ್‌ಎಸ್‌ ನೇತೃತ್ವದಲ್ಲಿ ಬುಧವಾರ  ಹಿಂದುಳಿದ ವರ್ಗಗಳ ಹರಿಕಾರ ಡಿ.ದೇವರಾಜ ಅರಸ್‌ ಹಾಗೂ ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಜನ್ಮದಿನಾಚರಣೆ, ಸದ್ಭಾವನಾ ದಿನ ಕಾರ್ಯಕ್ರಮ ನಡೆಯಿತು.

ದೇವರಾಜ್‌ ಅರಸ್‌ ಹಾಗೂ ರಾಜೀವ್‌ಗಾಂಧಿ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ದೇವರಾಜ್‌ ಅರಸ್‌ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ, ಹಿಂದುಳಿದ ವರ್ಗಗಳ ಸಮಗ್ರ ಅಭ್ಯುದಯದ ಆಶಯವನ್ನು ಬಿತ್ತುವ ಮೂಲಕ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ವ್ಯವಸ್ಥಿತವಾಗಿ ಜಾರಿಗೆ ತಂದ ಕೀರ್ತಿ ಡಿ.ದೇವರಾಜ ಅರಸು ಅವರಿಗೆ ಸಲ್ಲುತ್ತದೆ. ಅರಸು ಹಾಗೂ ರಾಜೀವ್‌ಗಾಂಧಿ ತಮ್ಮ ಕಾರ್ಯವ್ಯಾಪ್ತಿ ಮತ್ತು ಆಲೋಚನಾ ಬದ್ದತೆಯಿಂದ ದೇಶದ ಭವಿಷ್ಯವನ್ನು ಸದೃಢಗೊಳಿಸಿದ್ದಾರೆ ಎಂದರು.

ಜಾಲಪ್ಪನವರ ರಾಜಕಾರಣದ ದಿಕ್ಕುದೆಸೆಯನ್ನು ಸ್ಪಷ್ಟಗೊಳಿಸಿದ್ದು ದೇವರಾಜ್‌ ಅರಸ್‌. ಹೀಗಾಗಿಯೇ ಅವರ ಹೆಸರನ್ನೇ ವಿದ್ಯಾ ಸಂಸ್ಥೆಗೆ ಇಡಲಾಗಿದೆ. ಎಲ್ಲ ವರ್ಗಗಳ ದನಿಯಾಗಿ, ಯುವಜನರ ಆಶೋತ್ತರಗಳನ್ನು ಪ್ರಭಾವಿಸಿದ್ದು, ಅವರ ಆದರ್ಶಗಳು ಪಾಲನೀಯ ಎಂದರು.

ಜಾಲಪ್ಪ ರಾಜಕೀಯ ನಡೆಗೆ ಅರಸು ಪ್ರಭಾವ:
ಮುಖ್ಯಭಾಷಣಕಾರರಾಗಿ ಮಾತನಾಡಿದ ಜಾಲಪ್ಪ ಲಯನ್ಸ್‌ ಸಂಸ್ಥೆಯ ಅಧ್ಯಕ್ಷ ಕೆ.ಆರ್.ರವಿಕಿರಣ್‌, ದೇವರಾಜ ಅರಸ್‌ ಮುಖ್ಯಮಂತ್ರಿಗಳಾಗಿದ್ದ ವೇಳೆ ಉಳುವವನೇ ಭೂಮಿಯ ಒಡೆಯ ಎಂಬ ಘೋಷವಾಕ್ಯದಡಿ ಭೂ ಒಡೆತನವನ್ನು ಶೋಷಿತವರ್ಗಗಳಿಗೆ ನೀಡಿದರು. ಎಲ್.ಜಿ.ಹಾವನೂರ್‌ ಅವರ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಆಯೋಗವನ್ನು ರಚಿಸಿ, ಪ್ರಬಲ ಸಮುದಾಯಗಳ ನಡುಗೆ ಹಿಂದುಳಿದ ವರ್ಗಗಳಿಗೂ ಅವಕಾಶ ಮತ್ತು ಸಮಾನತೆಯನ್ನು ಒದಗಿಸುವ ಸಂಕಲ್ಪ ಮಾಡಿದರು. ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿದ ಹೆಗ್ಗಳಿಕೆ ಅವರದು. ಆರ್.ಎಲ್.ಜಾಲಪ್ಪನವರ ರಾಜಕೀಯ ನಡೆಯಲ್ಲಿ ಅರಸು ಅವರ ಒತ್ತಾಸೆ ಪ್ರಮುಖ ಎಂದು ಅಭಿಪ್ರಾಯಪಟ್ಟರು.

ಯುವಜನರ ಶಕ್ತಿಯಾಗಿದ್ದ ರಾಜೀವ್‌ಗಾಂಧಿ ಡಿಜಿಟಲ್‌ ಇಂಡಿಯಾದ ಪರಿಕಲ್ಪನೆಯನ್ನು ಜಾರಿಗೆ ತರುವ ಸಾಹಸ ಮಾಡಿದವರು. ಆರಂಭಿಕ ಕಾಲಘಟ್ಟದಲ್ಲಿ ದೂರ ಸಂಪರ್ಕ ಕ್ರಾಂತಿಗೆ ಮುನ್ನುಡಿ ಬರೆದ ಅವರು, ಮತದಾನದ ಹಕ್ಕು ವಯೋಮಿತಿಯನ್ನು 18 ವರ್ಷಕ್ಕೆ ಇಳಿಸುವ ಮೂಲಕ ಯುವಶಕ್ತಿಯ ಪ್ರೇರಕರಾದರು. ಅವರ ಜನ್ಮದಿನದ ಸಂದರ್ಭದಲ್ಲಿ ಸದ್ಭಾವನಾ ದಿನಾಚರಣೆ ಆಚರಿಸುತ್ತಿರುವುದು ಅರ್ಥಪೂರ್ಣ ಎಂದರು.

ಇದೇ ವೇಳೆ ಸದ್ಭಾವನಾ ದಿನದ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು. ವಿದ್ಯಾ ಸಂಸ್ಥೆಯ ಗೌರ್ನಿಂಗ್‌ ಕೌನ್ಸಿಲ್‌ ಸದಸ್ಯರಾದ ಎನ್.ತೇಜಸ್ವಿನಿ, ಜೆ.ಆರ್.ರಾಕೇಶ್, ವಿದ್ವತ್‌, ಮಾನವ ಸಂಪನ್ಮೂಲ ನಿರ್ದೇಶಕ ಎನ್.ಎಸ್.ಬಾಬುರೆಡ್ಡಿ, ಡೀನ್‌ ಡಾ.ಶ್ರೀನಿವಾಸರೆಡ್ಡಿ, ವಿವಿಧ ಶೈಕ್ಷಣಿಕ ಘಟಕಗಳ ಪ್ರಾಂಶುಪಾಲರಾದ ಡಾ.ವಿಜಯ್‌ಕಾರ್ತಿಕ್‌,

ಡಾ.ಗೌರಪ್ಪ, ಡಾ.ನರಸಿಂಹರೆಡ್ಡಿ, ಡಾ.ಚಿಕ್ಕಣ್ಣ, ಮಹಂತೇಶಪ್ಪ, ರವಿಕುಮಾರ್, ಧನಂಜಯ್, ಜಿಯಾವುಲ್ಲಾಖಾನ್, ಉಪಪ್ರಾಂಶುಪಾಲ ಡಾ.ಶಿವಪ್ರಸಾದ್, ವ್ಯವಸ್ಥಾಪಕ ಯತಿನ್, ದೈಹಿಕ ಶಿಕ್ಷಣ ನಿರ್ದೇಶಕ ದಾದಾಫೀರ್, ವಿವಿಧ ಘಟಕಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ಪಾಲ್ಗೊಂಡರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ