Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

​ ವಿಶ್ವ ಯೋಗ ದಿನ ಜೂನ್ 21 ರ ರಹಸ್ಯ

Advertisement
Advertisement

ಚಂದ್ರವಳ್ಳಿ ನ್ಯೂಸ್, ಉಡುಪಿ:
 ಮತ್ತೊಮ್ಮೆ ವಿಶ್ವ ಯೋಗ ದಿನಾಚರಣೆ ಬಂದಿದೆ ಈ ದಿನ ಅತ್ಯಂತ ಶ್ರೇಷ್ಠವಾದ ದಿನ ಜೂನ್‌ 21 ವರ್ಷದಲ್ಲಿ ಉತ್ತರ ಗೋಳಾರ್ಧದ ಅತಿ ಉದ್ದದ ಹಾಗೂ ದಕ್ಷಿಣ ಗೋಳಾರ್ಧದ ಅತಿ ಚಿಕ್ಕ ದಿನವನ್ನು ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಆಯ್ಕೆ ಮಾಡಲಾಗಿದೆ. ಈ ದಿನವನ್ನು ಬೇಸಿಗೆ ಆಯನ ಸಂಕ್ರಾತಿ ದಿನವೆಂದು ವರ್ಷದಲ್ಲಿನ ಅತ್ಯಂತ ಹೆಚ್ಚು ಹಗಲುಳ್ಳ ದಿನವೆಂದು ಕರೆಯಲಾಗುತ್ತದೆ. 

ದಕ್ಷಿಣ ಯಾನವನ್ನು ಆಧ್ಯಾತ್ಮಿಕ ಅಭ್ಯಾಸಗಳಿಗೆ ನೈಸರ್ಗಿಕ ಬೆಂಬಲವೆಂದು ಪರಿಗಣಿಸಲಾಗುತ್ತದೆ. ಆದಿ ಕಾಲದಲ್ಲಿ ಸೂರ್ಯಾಭಿಮುಖವಾಗಿ ದೃಷ್ಟಿ ನೆಟ್ಟು ಧೀವ್ಯ ಶಕ್ತಿ ಉದ್ದೀಪನಗೊಳಿಸುತ್ತದೆ ಎಂದು ಈ ದಿನವನ್ನು ನಂಬಲಾಗಿದೆ. ಹಾಗಾಗಿ ಈ ಪರಿವರ್ತನೆಯು ಯೋಗ ಅಭ್ಯಾಸಿಗರಿಗೆ ಬೆಂಬಲಿಸಲಾಗುತ್ತದೆ ಎಂಬ ನಂಬಿಕೆಯಿದೆ. ಬೇಸಿಗೆ ಆಯನ ಸಂಕ್ರಾತಿಯ ಬಳಿಕ ಮೊದಲ ಹುಣ್ಣಿಮೆಯನ್ನು ಗುರು ಪೂರ್ಣಿಮೆ ಎಂದು ಕರೆಯಲಾಗುತ್ತದೆ.

 ಪ್ರಧಾನಿ ಮೋದಿ ತಮ್ಮ ಹೇಳಿಕೆಯಲ್ಲಿ ಭಾರತೀಯರಿಗೆ ಪ್ರಕೃತಿಗೆ ಗೌರವ ಸಲ್ಲಿಸುವುದು, ಆಧ್ಯಾತ್ಮಿಕತೆಯ ಅವಿಭಾಜ್ಯ ಅಂಗವಾಗಿದೆ. ಹಾಗೆಯೇ ಪ್ರಕೃತಿಯ ಕೊಡುಗೆಯನ್ನು, ಅತ್ಯಂತ ಪವಿತ್ರವೆಂದು ಪರಿಗಣಿಸುತ್ತೇವೆ ಎಂದು ಹೇಳಿದ್ದನ್ನು ನಾವು ನೆನಪಿಸಬಹುದು.

 ಈ ದಿನದಂದು ಯೋಗವನ್ನು ಅಭ್ಯಾಸಸುವ ಮೂಲಕ ನಮ್ಮ ಆರೋಗ್ಯ ಜೊತೆಗೆ ಮನಸ್ಸನ್ನು ಉತ್ತಮಗೊಳಿಸಬಹುದಾಗಿದೆ.

 ಯೋಗದ ಗುರಿ :-
ಯೋಗದ ಗುರಿಯು ಕೇವಲ ದೇಹವನ್ನು ಸರಿಪಡಿಸುವುದು ಮಾತ್ರವಲ್ಲ. ಮನಸ್ಸು
, ದೇಹ ಮತ್ತು ಆತ್ಮ ಸೇರಿದ ಎಲ್ಲ ಮೂರು ಅಂಶಗಳನ್ನು ಶುದ್ದೀಕರಿಸಲು ನೆರವಾಗುತ್ತದೆ. ಇದು ನಾವು ಮತ್ತು ಪ್ರಕೃತಿ ಮಾತೆಯ ಜೊತೆ ಸಂರ್ಪಕವನ್ನು ಕಲ್ಪಿಸುತ್ತದೆ.

ನಮ್ಮನ್ನು ನಮ್ಮ ನೈಜತೆಯ ಹತ್ತಿರಕ್ಕೆ ಕೊಂಡೊಯ್ಯುತ್ತದೆ. ಯೋಗವು ವ್ಯಾಯಾಮ ಮಾತ್ರವಲ್ಲದೇ ನಿಮ್ಮೊಂದಿಗೆ, ವಿಶ್ವ ಹಾಗೂ ಪ್ರಕೃತಿಯ ಜೊತೆಗೆ ಏಕತೆಯ ಅರ್ಥವನ್ನು ಕಂಡುಹಿಡಿಯಲು ನೆರವಾಗುತ್ತದೆ. ನಮ್ಮ ಜೀವನಶೈಲಿ ಹಾಗೂ ಸಾಮಾಜಿಕ ಪ್ರಜ್ಞೆ ರಚಿಸುವ ಮೂಲಕ ಹವಮಾನ ಬದಲಾವಣೆ ನಿಭಾಯಿಸಲು ಮತ್ತು ಯೋಗಕ್ಷೇಮವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

 ಯೋಗವು ಮನಸ್ಸು ಮತ್ತು ದೇಹ, ಚಿಂತನೆ ಮತ್ತು ಕ್ರಿಯೆ, ಸಂಯಮ ಮತ್ತು ಸಾರ್ಥಕತೆಯನ್ನು ಒಗ್ಗೂಡಿಸುತ್ತದೆ. ಹಾಗೇಯೆ ಪ್ರಕೃತಿ ಮತ್ತು ಮನುಷ್ಯನ ನಡೆವೆ ಸಾಮರಸ್ಯವನ್ನುಂಟು ಮಾಡುತ್ತದೆ.

ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಲು ಸಹಾಯ ಮಾಡುತ್ತದೆ. ಈ ವರ್ಷದ ಅಧಿಕೃತ ಥೀಮ್ "ಆರೋಗ್ಯಕರ ವೃದ್ಧಿಗಾಗಿ ಯೋಗ" ಎಂಬುದಾಗಿದೆ. ವಯಸ್ಸಾಗುತ್ತಿದ್ದಂತೆ ಜನರು ದೈಹಿಕ ನಮ್ಯತೆ, ಮಾನಸಿಕ ನೆಮ್ಮದಿ ಮತ್ತು ಸ್ವಾತಂತ್ರ್ಯವನ್ನು ಕಾಪಾಡಿಕೊಳ್ಳಲು ಯೋಗ ಹೇಗೆ ಸಹಕಾರಿಯಾಗಿದೆ ಎಂಬುದನ್ನು ಈ ಧ್ಯೇಯ ವಾಕ್ಯ ತಿಳಿಸುತ್ತದೆ.

 ಯೋಗ ನಮ್ಮ ಜೀವನದ ಅವಿಭಾಜ್ಯ ಅಂಗವಾಗಲಿ :
 ವರ್ಷದಲ್ಲಿ ಒಂದು ದಿನ ಯೋಗ ಮಾಡಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟರೆ ಸಾಲದು ಬದಲಾಗಿ ಪ್ರತಿದಿನವೂ ಯೋಗ ದಿನವಾಗಬೇಕು ನಮ್ಮ ದಿನದಲ್ಲಿ ಕನಿಷ್ಠ ಒಂದು ಗಂಟೆಯನ್ನು ಯುವಕವಾಗಿ ನೀಡಿದ್ದಲ್ಲಿ ನಮ್ಮ ಆರೋಗ್ಯ (ಮಾನಸಿಕ ಮತ್ತು ಭೌತಿಕ ) ವನ್ನು ಉತ್ತಮವಾಗಿಸಬಹುದು.

 ಹೀಗಾಗಿ ಈ ವರ್ಷದ ಯೋಗ ದಿನದಲ್ಲಿ ನಾವೆಲ್ಲರೂ ಸಂಕಲ್ಪ ಮಾಡೋಣ ಪ್ರತಿದಿನ ಯೋಗ ನಮ್ಮ ಜೀವನದ ಭಾಗವಾಗಲಿ.
ಲೇಖನ: ರಾಘವೇಂದ್ರ ಪ್ರಭು ಕರ್ವಾಲು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸರ್ಕಾರಿ ಆಸ್ಪತ್ರೆಯಲ್ಲಿ 'ಕಮಿಷನ್ ದಂಧೆ': ಭ್ರಷ್ಟ ವೈದ್ಯರ ಅಮಾನತಿಗೆ ಆಗ್ರಹ​‘ಬಿಡದಿ ಟೌನ್‌ಶಿಪ್’ ವಿರುದ್ಧ ಎಚ್‌ಡಿಕೆ ಗುಡುಗು: 2007ರ ಕಲಾಪದ ದಾಖಲೆ ಬಿಡುಗಡೆಗೆ ಸಿದ್ಧತೆ!ಬಿಡದಿ ಟೌನ್‌ಶಿಪ್ ಭೂಸ್ವಾಧೀನ: 90% ರೈತರ ವಿರೋಧ ಮುಚ್ಚಿಟ್ಟು ಕೇವಲ 7 ಜನಕ್ಕೆ ಪರಿಹಾರ ವಿತರಣೆ – ಎಚ್.ಡಿ. ಕುಮಾರಸ್ವಾಮಿ ಆರೋಪಜೆಡಿಎಸ್ ಗಂಭೀರ ಆರೋಪ: ರಾಜ್ಯದಲ್ಲಿ ಬಿತ್ತನೆ ಕುಂಠಿತ, ಬರ ಪರಿಹಾರಕ್ಕೆ ಆಗ್ರಹಸಾರ್ವಜನಿಕರ ಕುಂದುಕೊರತೆ ನಿವಾರಣೆಗೆ ಹೊಸ "ಪ್ರಜಾಸೇವೆ ಇಲಾಖೆ" ಸ್ಥಾಪನೆ: ಸಿಎಂ ಡಿ.ಕೆ. ಶಿವಕುಮಾರ್ಕರ್ನಾಟಕ ಕೈಗಾರಿಕಾ ರಂಗದಲ್ಲಿ ಐತಿಹಾಸಿಕ ಮೈಲಿಗಲ್ಲು: 28 ಸಾವಿರ ಉದ್ಯೋಗ ಸೃಷ್ಟಿ!ಜಾಗತಿಕ ಕನ್ನಡಿಗರ ನಿಯೋಗದೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಭೆ: ಸೌಹಾರ್ದಯುತ ಸಹಕಾರಕ್ಕೆ ಭರವಸೆಯೋಗವನ್ನು ಜೀವನದ ಭಾಗವಾಗಿಸಿಕೊಳ್ಳಿ: ದೇಶದ ಜನತೆಗೆ ಹೆಚ್.ಡಿ. ಕುಮಾರಸ್ವಾಮಿ ಕರೆಪೊಲೀಸ್ ಇಲಾಖೆಯ ಮಾನ ಹರಾಜು: ಗೃಹ ಸಚಿವರ ರಾಜೀನಾಮೆಗೆ ಆರ್. ಅಶೋಕ್ ಆಗ್ರಹಅಡ್ಡಮತದಾನ ರಾಜಕೀಯದಲ್ಲಿ ಆಡಳಿತ ಮೂಲೆಗೆ: ಆರ್. ಅಶೋಕ್ ​