Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೇಷ್ಮೆ ಕೃಷಿಯಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರೇಷ್ಮೆ ಕೃಷಿ ಉತ್ಪಾದನೆಯಲ್ಲಿ ದೇಶದಲ್ಲಿಯೇ ಕರ್ನಾಟಕ ರಾಜ್ಯ ಮೊದಲಿನಿಂದಲೂ ಪ್ರಥಮ ಸ್ಥಾನದಲ್ಲಿದೆ ಎಂದು ಕೇಂದ್ರ ರೇಷ್ಮೆ ಮಂಡಳಿ ಸದಸ್ಯ ಕಾರ್ಯದರ್ಶಿ ಪಿ.ಶಿವಕುಮಾರ್ ಹೇಳಿದರು.  
ನಗರದ ಎಸ್.ಜಿ.ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಕೇಂದ್ರ ಸಂಶೋಧನೆ ಮತ್ತು ತರಬೇತಿ ಸಂಸ್ಥೆ, ಕೇಂದ್ರ ರೇಷ್ಮೆ ಮಂಡಳಿ ಜವಳಿ ಸಚಿವಾಲಯ ಮತ್ತು ರೇಷ್ಮೆ ಇಲಾಖೆ ವತಿಯಿಂದ ರೇಷ್ಮೆ ಕೃಷಿ-ಐಸಿರಿಗೆ ದಾರಿ ಎಂಬ ವಿಷಯದೊಂದಿಗೆ ಹಮ್ಮಿಕೊಂಡಿದ್ದ ರೇಷ್ಮೆ ಕೃಷಿ ಮೇಳಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶ ಎಲ್ಲ ಭಾಗಗಳ ರೇಷ್ಮೆ ಕೃಷಿ ನೋಡುವುದರ ಸಲುವಾಗಿ ಕೇಂದ್ರ ರೇಷ್ಮೆ ಮಂಡಳಿ ಸ್ಥಾಪನೆಯಾಯಿತು. ಮಂಡಳಿ ಪ್ರಾರಂಭವಾದಾಗ ಜಾಗತೀಕವಾಗಿ ನಮ್ಮ ಉತ್ಪಾದನೆ ಶೇ.6ರಷ್ಟು ಇತ್ತು. ಇಂದು ಶೇ.42ರಷ್ಟು ಆಗಿದ್ದು, ಇದಕ್ಕೆ ರೈತರು ಹಾಗೂ ಕಾರ್ಮಿಕರ ಪರಿಶ್ರಮವೇ ಕಾರಣ. ದೇಶದ 25ಕ್ಕೂ ಹೆಚ್ಚು ರಾಜ್ಯಗಳಲ್ಲಿ ರೇಷ್ಮೆ ಕೆಲಸಗಳು ನಡೆಯುತ್ತಿವೆ. ಇದರಲ್ಲಿ ಕರ್ನಾಟಕ ರಾಜ್ಯ ನಂ.1 ಸ್ಥಾನದಲ್ಲಿ ಮುಂದುವರೆದಿದೆ ಎಂದು ಹೇಳಿದರು.

ಕೇಂದ್ರ ರೇಷ್ಮೆ ಮಂಡಳಿ ದೇಶಾದಾದ್ಯಂತ 159 ಶಾಖೆ ಹಾಗೂ ವಿಸ್ತರಣಾ ಶಾಖೆಗಳನ್ನು ಹೊಂದಿದೆ. ಇದರಲ್ಲಿ 28 ಕರ್ನಾಟಕ ರಾಜ್ಯದಲ್ಲಿವೆ. ಬಹಳಷ್ಟು ವಿಜ್ಞಾನಿಗಳು ರಾಜ್ಯದವರೇ ಇದ್ದಾರೆ. ವಿಶ್ವದ ರೇಷ್ಮೆ ಮಾರುಕಟ್ಟೆಯಲ್ಲಿ ಚೀನಾ ಮೊದಲ ಸ್ಥಾನದಲ್ಲಿದೆ. 2030 ವೇಳೆಗೆ ಭಾರತವು ಶೇ.50ರಷ್ಟು ಉತ್ಪಾದನೆ ಮಾಡಿ ಚೀನಾವನ್ನು ಹಿಂದಿಕ್ಕಬೇಕು. ನಿಟ್ಟಿನಲ್ಲಿ ರೈತರು ಎದುರಿಸುವ ಸಮಸ್ಯೆ ಪರಿಹರಿಸಲು ಹಾಗೂ ಆರ್ಥಿಕ ನೆರವು ನೀಡಲು ರೇಷ್ಮೆ ಮಂಡಳಿ ಸದಾ ಸಿದ್ದವಿದೆ ಎಂದು ಹೇಳಿದರು.

  ಸ್ವಯಂ ಚಾಲಿತ ರೇಷ್ಮೆ ನೂಲಿನ ಯಂತ್ರ ಖರೀದಿಗೆ ಕೇಂದ್ರ ಸರ್ಕಾರ ಶೇ.50ರಷ್ಟು ಹಾಗೂ ರಾಜ್ಯ ಸರ್ಕಾರ ಶೇ.25ರಷ್ಟು ಸಹಾಯಧನ ನೀಡುತ್ತಿದೆ. ಉಳಿದ ಹಣವನ್ನು ರೈತರು ಪಾವತಿಸಬೇಕು. ಆದರೆ ಇದರ ಮೇಲಿನ ಜಿ.ಎಸ್.ಟಿಯನ್ನು ಖರೀದಿಸುವ ರೇಷ್ಮೆ ಕೆಲಸಗಾರರು ಭರಿಸಬೇಕು ಎಂದು ಅಳಲು ತೋಡಿಕೊಂಡಿದ್ದು, ಮುಂಬರುವ ದಿನಗಳಲ್ಲಿ ಸ್ವಯಂ ಚಾಲಿನ ನೂಲಿನ ಯಂತ್ರ ಖರೀದಿ ಮೇಲಿನ ಜಿ.ಎಸ್.ಟಿ ತೆಗೆದು ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದರು.

ಚಿತ್ರದುರ್ಗ ನಗರಸಭೆ ಅಧ್ಯಕ್ಷೆ ಬಿ.ಎನ್. ಸುಮಿತಾ ಮಾತನಾಡಿ, ಇಂದಿನ ತಾಂತ್ರಿಕತೆಯ ಡಿಜಿಟಲ್ ಯುಗದಲ್ಲಿ ಸಿಗುವ ಆಧುನಿಕ ತಂತ್ರಾಂಶಗಳನ್ನು ಬಳಸಿಕೊಂಡು ಉತ್ತಮವಾದ ಬೆಳೆ ಬೆಳೆಯುವುದರೊಂದಿಗೆ ಆದರ್ಶಯುತ ಕೃಷಿಕರಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ರೇಷ್ಮೆ ಕೃಷಿ ಇಲಾಖೆ ಹಚ್ಚುವರಿ ನಿರ್ದೇಶಕ ವೈ.ಟಿ.ತಿಮ್ಮಯ್ಯ ಮಾತನಾಡಿ, ರೇಷ್ಮೆ ಕೃಷಿ ಬೆಳೆಯು ಮಳೆ ಬಂದಾಗ ಕೊಡೆ ಹಿಡಿಯುವಂತೆ ಕಾಲ-ಕಾಲಕ್ಕೆ ಬದಲಾಗುವ ಬೆಳೆಯಾಗಿ ಮಾರ್ಪಾಡಾಗಿದೆ. ಇದನ್ನು ಅಪ್ಪಿಕೊಂಡಷ್ಟು ಮೇಲೆತ್ತರಕ್ಕೆ ಕೊಂಡೊಯ್ಯುತ್ತದೆ ಎಂದರು.

ರೇಷ್ಮೆ ಕೃಷಿ ಮೇಳದ ಅಂಗವಾಗಿ ರೇಷ್ಮೆ ಕೃಷಿಗೆ ಸಂಬಂಧಿಸಿದ ರೇಷ್ಮೆ ಕೃಷಿ ವಸ್ತುಪ್ರದರ್ಶನ, ತಂತ್ರಜ್ಞಾನಗಳು, ಕಿರುಪುಸ್ತಕಗಳು ಮತ್ತು ಕಿರುಹೊತ್ತಿಗೆಗಳನ್ನು ಬಿಡುಗಡೆ ಮಾಡಲಾಯಿತು. ರೈತರು ಹಾಗೂ ವಿಜ್ಞಾನಿಗಳ ಸಂವಾದವೂ ನಡೆಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ರೇಷ್ಮೆ ಮಂಡಳಿ ನಿರ್ದೇಶಕ ಗಾಂಧಿದಾಸ್, ವಿಜ್ಞಾನಿಗಳ ವಿಭಾಗದ ಡೀನ್ ಡಾ.ಎಲ್.ಕುಸುಮ, ಡಾ.ಭಾಗ್ಯ, ರೇಷ್ಮೆ ಇಲಾಖೆ ಉಪನಿರ್ದೇಶಕ ಮಾರಪ್ಪ ಬೀರಲದಿನ್ನಿ, ಅಮೃತ ಆಗ್ರ್ಯನಿಕ್ ಫರ್ಟಿಲೈಜರ್ ಕೆ.ನಾಗರಾಜ್, ಪ್ರಗತಿಪರ ಕೃಷಿಕ ಡಾ.ವೀರಭದ್ರಪ್ಪ ಸೇರಿದಂತೆ ರೇಷ್ಮೆ ಇಲಾಖೆ ಅಧಿಕಾರಿಗಳು,  ರೇಷ್ಮೆ ಕೃಷಿಕರು ಇದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ