Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಡು ಮುಟ್ಟದ ಸೊಪ್ಪಿಲ್ಲ ಡಾ.ಬುಕಾನನ್ ಬರೆಯದ ವಿಚಾರಗಳಿಲ್ಲ-ಎಂಜಿಆರ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಳೆ ಮೈಸೂರು ಭಾಗದಲ್ಲಿ ಡಾ.ಬುಕಾನನ್ ಒಂದು ವರ್ಷ ಎರಡು ತಿಂಗಳು ಹದಿಮೂರು ದಿನಗಳ ಕಾಲ ಪ್ರವಾಸ ಮಾಡಿ ಅನೇಕ ಮಾಹಿತಿಗಳನ್ನು ಪಡೆದು ತಮ್ಮ ಬರವಣಿಗೆಯಲ್ಲಿ ದಾಖಲಿಸುತ್ತಾರೆಂದು ಆಂಗ್ಲ ಭಾಷಾ ಉಪನ್ಯಾಸಕ ಹಾಗೂ ಸಾಹಿತಿ ಪ್ರೊ.ಎಂ.ಜಿ.ರಂಗಸ್ವಾಮಿ ತಿಳಿಸಿದರು.


ಚಿತ್ರದುರ್ಗ ಇತಿಹಾಸ ಕೂಟ ಇತಿಹಾಸ-ಸಂಸ್ಕೃತಿ-ಸಂಶೋಧನೆಗಳ ವಿಚಾರ ವೇದಿಕೆ, ರೇಣುಕಾ ಪ್ರಕಾಶನ ಇವರುಗಳ ಸಹಯೋಗದೊಂದಿಗೆ ಐ.ಎಂ.ಎ ಹಾಲ್‌ನಲ್ಲಿ ಭಾನುವಾರ ನಡೆದ ೫೦ನೇ ಉಪನ್ಯಾಸ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲೆ ಡಾ.ಬುಕಾನನ್ ಮತ್ತು ಡಾಬ್ಸ್ ಕುರಿತಂತೆ ಮಾತನಾಡಿದರು. ವೃತ್ತಿಯಿಂದ ವೈದ್ಯರಾಗಿದ್ದ ಡಾ.ಬುಕಾನನ್ ಅವರದು ವಿಶಿಷ್ಟವಾದ ವ್ಯಕ್ತಿತ್ವ. ವೈದ್ಯಕೀಯ ಶಾಸ್ತ್ರ ಓದಿದ್ದರೂ ಬಟಾನಿಸ್ಟ್ ಆಗಿದ್ದರು. ಆಡು ಮುಟ್ಟದ ಸೊಪ್ಪಿಲ್ಲ ಡಾ.ಬುಕಾನನ್ ಬರೆಯದ ವಿಚಾರಗಳಿಲ್ಲ. ಕರ್ನಾಟಕದ ಭಾಗದ ಬೆಳೆಗಳಿಂದ ಹಿಡಿದು ಉತ್ತರಾಣಿ ಕಡ್ಡಿಯವರೆಗೂ ಬರೆದಿದ್ದಾರೆ. ಯಾರ್‍ಯಾರು ಕತ್ತೆಗಳನ್ನು ಸಾಕುತ್ತಿದ್ದರು ಎನ್ನುವುದನ್ನು ಬಿಟ್ಟಿಲ್ಲ. ಎಲ್ಲವನ್ನು ಬರವಣಿಗೆ ಮೂಲಕ ದಾಖಲು ಮಾಡಿದ್ದಾರೆ. ವಿರಾಟ ಸ್ವರೂಪದ ವ್ಯಕ್ತಿತ್ವವುಳ್ಳ ಡಾ.ಬುಕಾನನು ಶ್ರೀರಂಗಪಟ್ಟಣದಲ್ಲಿ ಟಿಪ್ಪುಸುಲ್ತಾನ್ ಯುದ್ದದಲ್ಲಿ ಸೆಣಸಾಡಿದ ಮಾಹಿತಿಯನ್ನು ಸಂಗ್ರಹಿಸಿದ್ದಾರೆಂದರು.

ಮಂಡ್ಯ, ಮೈಸೂರಿಗೆ ಆಗಮಿಸಿದ ಡಾ.ಬುಕಾನನು ರಾಜಾಜ್ಞೆ ಪಡೆದುಕೊಂಡು ಅನೇಕ ಊರುಗಳಿಗೆ ಸಂಚರಿಸಿ ಎಲ್ಲೆಲ್ಲಿ ಏನೇನು ಮಾಹಿತಿಯಿದೆ ಎನ್ನುವುದನ್ನು ಸಂಗ್ರಹಿಸುವುದು ಆತನ ಗುಣ. ಹದಿನೆಂಟು ದಿನಗಳ ಕಾಲ ಶ್ರೀರಂಗಪಟ್ಟಣದಲ್ಲಿ ಅಧ್ಯಯನ ನಡೆಸಿ ನಂತರ ಮಂಡ್ಯ, ಬೆಂಗಳೂರಿಗೆ ಬರುತ್ತಾನೆ. ಶಿರಾ, ತುಮಕೂರು, ಗುಬ್ಬಿ, ಕರೂರು, ಮಂಗಳೂರು, ಉಡುಪಿ, ಬನವಾಸಿ, ಇಕ್ಕೇರಿ, ಶಿವಮೊಗ್ಗ, ಸೂಳೆಕೆರೆ, ಬಸವಾಪಟ್ಟಣ, ಹರಿಹರದಲ್ಲಿ ಪ್ರಯಾಣಿಸುವ ಡಾ.ಬುಕಾನನ್ ೧೮೦೧ ಏ.೧೫ ರಂದು ಚತ್ರದುರ್ಗ ಜಿಲ್ಲೆ ಪ್ರವೇಶಿಸಿ ಎರಡು ದಿನ ಉಳಿದುಕೊಂಡು ಶಿವುಪ್ಪ ಎನ್ನುವ ಶಾನುಭೋಗನನ್ನು ಹಿಡಿದು ಇಲ್ಲಿನ ಮಾಹಿತಿ ಪಡೆದುಕೊಳ್ಳುತ್ತಾರೆ ಎಂದರು.

ದೊಡ್ಡಸಿದ್ದವ್ವನಹಳ್ಳಿಯಲ್ಲಿ ಒಂದು ದಿನ ತಂಗಿದ್ದ ಡಾ.ಬುಕಾನನ್ ಚಳ್ಳಕೆರೆಯ ನನ್ನಿವಾಳದ ಗುಡ್ಡದ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಾರೆ. ಐಮಂಗಲಕ್ಕೆ ಹೋಗಿ ಅಲ್ಲಿನ ಕೋಟೆಯ ಬಗ್ಗೆಯೂ ಬರೆಯುತ್ತಾರೆ. ಬೆನ್ನಿಗೆ ಕೊಕ್ಕೆ ಹಾಕಿ ಸಿಡಿ ಆಡಿಸುವ ಕ್ರೂರ ಪದ್ದತಿಯನ್ನು ತಮ್ಮ ಬರವಣಿಗೆಯಲ್ಲಿ ಖಂಡಿಸಿದ್ದಾರೆ. ಹಿರಿಯೂರಿನ ತಾಲ್ಲೂಕಿನಲ್ಲಿ ವರ್ಷವಿಡಿ ಹರಿಯುವ ವೇದಾವತಿ ನದಿಯ ಬಗ್ಗೆಯೂ ಉಲ್ಲೇಖಿಸಿ ಮೂರು ಬಗೆಯ ಮೀನುಗಳನ್ನು ಕಂಡಿದ್ದೇನೆಂದು ಬರೆಯುತ್ತಾರೆಂದು ಚಿತ್ರದುರ್ಗ ಜಿಲ್ಲೆ ಡಾ.ಬುಕಾನನ್ ಮತ್ತು ಡಾಬ್ಸ್ ಕಂಡಂತೆ ಕೂಲಂಕುಷವಾಗಿ ಮಾಹಿತಿಯನ್ನು ಉಪನ್ಯಾಸದಲ್ಲಿ ಎಂ.ಜಿ ರಂಗಸ್ವಾಮಿ ಹಂಚಿಕೊಂಡರು.

ಚಿತ್ರದುರ್ಗ ಇತಿಹಾಸ ಕೂಟದ ಸಂಚಾಲಕ ಡಾ.ಎನ್.ಎಸ್.ಮಹಂತೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಿತ್ರದುರ್ಗ ಇತಿಹಾಸ ಕೂಟದ ನಿರ್ದೇಶಕ ಡಾ.ಲಕ್ಷ್ಮಣತೆಲಗಾವಿ, ಪ್ರೊ.ಹೆಚ್.ಲಿಂಗಪ್ಪ, ಮದಕರಿನಾಯಕ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಡಿ.ಗೋಪಾಲಸ್ವಾಮಿ ನಾಯಕ, ಮೃತ್ಯುಂಜಯಪ್ಪ, ಹಿರಿಯ ಪತ್ರಕರ್ತ ಜಿ.ಎಸ್.ಉಜ್ಜಿನಪ್ಪ, ಪ್ರೊ.ವೀರಣ್ಣ, ಪ್ರೊ.ವೀರನಾಯಕ, ಡಾ.ತಿಪ್ಪೇಸ್ವಾಮಿ, ರೇಣುಕಾ ಪ್ರಕಾಶನದ ಗೌರವಾಧ್ಯಕ್ಷೆ ವೈ.ಗುಣವತಿ ಮಹಂತೇಶ, ಸ್ನಾತಕೋತ್ತರ ವಿದ್ಯಾರ್ಥಿಗಳು ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ