Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇವರೇನು ಜನ ಪ್ರತಿನಿಧಿಗಳೋ ಅಥವಾ ರೇಸು ಕುದುರೆಗಳೋ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸದಾ ನೆನಪಾಗುತ್ತಾರೆ ಇವರು...........ಎಂತಹ ಅತ್ಯಂತ ಕೆಟ್ಟ ಕೊಳಕ ರಾಜಕೀಯ ವ್ಯವಸ್ಥೆಯಲ್ಲಿ ನಾವು ಬದುಕುತ್ತಿದ್ದೇವೆ ಮತ್ತು ಅದಕ್ಕೆ ಜೀವಂತ ಸಾಕ್ಷಿಯಾಗಿದ್ದೇವೆ ಎಂಬುದೇ ನಮ್ಮ ನೈತಿಕತೆ ಮತ್ತು ಆತ್ಮವಿಶ್ವಾಸ ಕುಸಿಯುವಂತೆ ಮಾಡುತ್ತಿದೆ.

 ಎಲ್ಲಾ ಪಕ್ಷಗಳ ಅಧಿಕಾರದಾಹದ ಈ ಭಿನ್ನಮತೀಯ ಚಟುವಟಿಕೆಗಳ ದಿನನಿತ್ಯದ ನಿರಂತರ ಸುದ್ದಿಗಳನ್ನು ಕೇಳುತ್ತಾ ಮನಸ್ಸು ಏನೇನೋ ಯೋಚಿಸುತ್ತಿದೆ.

 ರಾಜಕೀಯ ಎಂಬ ಸೇವಾ ವಲಯವನ್ನು ಪುಂಡ ಪೋಕರಿಗಳ, ಬೀದಿ ಜಗಳಗಳ ಮಟ್ಟಕ್ಕೆ ಇಳಿಸಿದ್ದಾರೆ. ಇವರಿಗೆ ಕ್ಷಮೆಯೇ ಇಲ್ಲ.  ಛೆ.... ಏನೂ ಮಾಡಲು ಸಾಧ್ಯವಾಗುತ್ತಿಲ್ಲ.......ಇವರೇನು ಜನ ಪ್ರತಿನಿಧಿಗಳೋ ಅಥವಾ ರೇಸು ಕುದುರೆಗಳೋ..............

 ದಿನದ 24 ಗಂಟೆ ಕೆಲಸ ಮಾಡಿದರೂ ಮುಗಿಯದಷ್ಟು ಸಮಸ್ಯೆಗಳು ತುಂಬಿ ತುಳುಕುತ್ತಿದ್ದರೂ, 7 ಕೋಟಿ ಜನರಲ್ಲಿ ಕೇವಲ 224 ಜನರಿಗೆ ಮಾತ್ರ ಸಿಗಬಹುದಾದ ಅತ್ಯುತ್ತಮ ಸ್ಥಾನ ದೊರೆತಿದ್ದರೂ, ಇನ್ನೂ ಹಣ ಅಧಿಕಾರ ದುರಹಂಕಾರಕ್ಕೆ ಬಲಿಯಾಗುತ್ತಿದ್ದಾರಲ್ಲ ಇವರಿಗೆ ಏನು ಮಾಡುವುದು.

 ಇವರನ್ನು ಮರೆತು ನೆಮ್ಮದಿಯಾಗಿ ಇರೋಣವೆಂದರೆ.........ಆಸ್ಪತ್ರೆಗಳ ಅವ್ಯವಸ್ಥೆ ಕಂಡಾಗ ಇವರು ನೆನಪಾಗುತ್ತಾರೆ. ಶಾಲೆಯಲ್ಲಿ ಮಕ್ಕಳ ವಿದ್ಯಾಭ್ಯಾಸ ಮತ್ತು ಅದರ ಖರ್ಚು ನೆನಪಾದಾಗ ಇವರೇ ಕಾಡುತ್ತಾರೆ.

 ಬಸ್ ರೈಲು ನಿಲ್ದಾಣದ ಆ ಕೆಟ್ಟ ದೃಶ್ಯಗಳನ್ನು ನೋಡಿದಾಗಲೂ ಇವರೇ ನೆನಪಾಗುತ್ತಾರೆ. ರಸ್ತೆಯ ಆ ಧೂಳು ಆ ವಾಹನ ಭರಾಟೆಗಳನ್ನು ಕಂಡಾಗ ನೆನಪಾಗುವುದೇ ಇವರು.

 ಆಹಾರದಲ್ಲಿ ಕಲಬೆರಕೆ ವಾಸನೆ ಮೂಡಿದಾಗಲೂ ಇವರೇ ನೆನಪಾಗುತ್ತಾರೆ. ಪ್ರಕೃತಿಯ ವಿಕೋಪದ ಅನಾಹುತಗಳಲ್ಲಿಯೂ ಇವರದೇ ನೆನಪು. ವಿದ್ಯುತ್ - ನೀರಿನ ಸಮಸ್ಯೆಗಳು ತಲೆದೋರಿದಾಗಲೂ ಇವರೇ ಕಾಡುತ್ತಾರೆ.

ನಮ್ಮ ಮಕ್ಕಳ ಭವಿಷ್ಯ ನೆನಪಾದಾಗಲೂ ಇವರೇ ಕಾಡುತ್ತಾರೆ. ಒಟ್ಟಿನಲ್ಲಿ ನಮ್ಮ ಇಡೀ ಬದುಕನ್ನು ನಿಯಂತ್ರಿಸುವುದೇ ಇವರು.

 ಈ ಜನ ಪ್ರತಿನಿಧಿಗಳ ಗುಣಮಟ್ಟದ ಮೇಲೆಯೇ ನಮ್ಮ ಜೀವನಮಟ್ಟ ಅವಲಂಬಿಸಿದೆ. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು ಎಂಬುದು ಒಂದು ಭ್ರಮೆ ಅಷ್ಟೆ. ನಿಜವಾದ ಮಾಲಿಕರು ಇವರೇ.

 ಚುನಾವಣಾ ಸಂಧರ್ಭದಲ್ಲಿ ಜನಪ್ರಿಯ ವ್ಯಕ್ತಿಗಳು ಮಹಾ ಮೇಧಾವಿಗಳಂತೆ " ಮತದಾನ ಒಂದು ಪವಿತ್ರ ಕರ್ತವ್ಯ. ನಿಮ್ಮ ಮತ ಚಲಾಯಿಸಿ ಪ್ರಜಾಪ್ರಭುತ್ವ ಉಳಿಸಿ " ಎಂದು ಹೇಳುವವರನ್ನು ಜೈಲಿಗೆ ಕಳಿಸಬೇಕು ಎಂಬಷ್ಟು ಕೋಪ ಬರುತ್ತದೆ.

 ಏಕೆಂದರೆ ಈ ಜನ ಪ್ರತಿನಿಧಿಗಳ ಹುಚ್ಚಾಟಕ್ಕೆ ಅವರೂ ಪರೋಕ್ಷವಾಗಿ ಬೆಂಬಲ ನೀಡಿದಂತೆ ಆಗುತ್ತಿದೆ‌. ಪ್ರಜಾಪ್ರಭುತ್ವದ ನಿಜ ಯಶಸ್ಸು ಅಡಗಿರುವುದೇ ಜನರ ಜಾಗೃತಿಯ, ಜ್ಞಾನದ ಮಟ್ಟದಲ್ಲಿ ಏರಿಕೆಯಾದಾಗ ಮಾತ್ರ ಸಾಧ್ಯ.

 ಅಲ್ಲಿಯವರೆಗೂ ಇದನ್ನು ಸಹಿಸುವ ಅನಿವಾರ್ಯ ನಮ್ಮೆಲ್ಲರದು........ಬದಲಾಗಬೇಕಿದೆ ವ್ಯವಸ್ಥೆ.....
ಲೇಖನ-ವಿವೇಕಾನಂದ. ಎಚ್. ಕೆ. 9844013068.........

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ