LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್‌ಶಾಸಕರ ಅಸಮಾಧಾನ ಶಮನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಮಾಸ್ಟರ್ ಪ್ಲಾನ್

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 
ಸಚಿವ ಸಂಪುಟದಲ್ಲಿ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕರನ್ನು ಶಮನಗೊಳಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಅವರು ಹೊಸ ತಂತ್ರ ರೂಪಿಸಿದ್ದಾರೆ. ಪಕ್ಷದೊಳಗಿನ ಭಿನ್ನಮತ ಶಮನಗೊಳಿಸುವ ಉದ್ದೇಶದಿಂದ ಪ್ರತಿ ಜಿಲ್ಲೆಯ ಶಾಸಕರೊಂದಿಗೆ ನಿಯಮಿತವಾಗಿ
ಉಪಾಹಾರ ಸಭೆನಡೆಸಿ, ಅವರ ಕುಂದುಕೊರತೆಗಳನ್ನು ಆಲಿಸಲು ಸಿಎಂ ಮುಂದಾಗಿದ್ದಾರೆ.

ಸಚಿವ ಸ್ಥಾನದಿಂದ ವಂಚಿತರಾದ ನಾಯಕರಿಗೆ ನಿಗಮ-ಮಂಡಳಿಗಳಲ್ಲಿ ಸೂಕ್ತ ಸ್ಥಾನಮಾನ ನೀಡುವುದು ಹಾಗೂ ಅವರ ಕ್ಷೇತ್ರಗಳಿಗೆ ಅಭಿವೃದ್ಧಿ ಅನುದಾನವನ್ನು ಸಮರ್ಪಕವಾಗಿ ಹಂಚಿಕೆ ಮಾಡುವ ಮಹತ್ವದ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ ಎನ್ನಲಾಗಿದೆ.

ಕೋಲಾರ-ಚಿಕ್ಕಬಳ್ಳಾಪುರ ಶಾಸಕರೊಂದಿಗೆ ಸಭೆ:
ಸೋಮವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಕಾಂಗ್ರೆಸ್ ಶಾಸಕರ ನಿಯೋಗದೊಂದಿಗೆ ಮುಖ್ಯಮಂತ್ರಿಗಳು ಸಭೆ ನಡೆಸಿದರು. ಈ ವೇಳೆ ಕ್ಷೇತ್ರದ ಅಭಿವೃದ್ಧಿ ಹಾಗೂ
'ಎತ್ತಿನಹೊಳೆ ಯೋಜನೆ'ಯ ಕುರಿತು ಸುದೀರ್ಘ ಚರ್ಚೆ ನಡೆಯಿತು.

ಕೆಎಂಎಫ್ ಅಧ್ಯಕ್ಷ ಗಾದಿಗೆ ತೀವ್ರ ಪೈಪೋಟಿ: ಸಭೆಯಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷ ಕೆ.ವೈ. ನಂಜೇಗೌಡ ಅವರು, ಈ ಹಿಂದೆ ತಮಗೆ ನೀಡಿದ್ದ ಭರವಸೆಯಂತೆ ಕೆಎಂಎಫ್ ಅಧ್ಯಕ್ಷ ಸ್ಥಾನ ನೀಡಬೇಕೆಂದು ಸಿಎಂ ಅವರನ್ನು ಒತ್ತಾಯಿಸಿದರು. ಆದರೆ, ಈ ಹುದ್ದೆಯ ಮೇಲೆ ಸಿಎಂ ಅವರ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್‌ಮತ್ತು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್‌ಕೂಡ ಕಣ್ಣಿಟ್ಟಿರುವುದು ತೀವ್ರ ಕುತೂಹಲ ಮೂಡಿಸಿದೆ.

ಈ ಮಹತ್ವದ ಸಭೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ, ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್‌, ಶಾಸಕರಾದ ಕೆ.ವೈ. ನಂಜೇಗೌಡ, ಎಸ್.ಎನ್. ನಾರಾಯಣಸ್ವಾಮಿ, ಕೊತ್ತನೂರು ಮಂಜುನಾಥ್‌, ಪ್ರದೀಪ್‌ಈಶ್ವರ್‌, ಎಸ್.ಎನ್. ಸುಬ್ಬಾರೆಡ್ಡಿ, ಪುಟ್ಟಸ್ವಾಮಿ ಗೌಡ ಹಾಗೂ ವಿಧಾನ ಪರಿಷತ್‌ಸದಸ್ಯ ಅನಿಲ್‌ಕುಮಾರ್‌ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಪಟ್ಟು, ಪರಿಷತ್‌ನಲ್ಲಿ, ಬಳ್ಳಾರಿಯಲ್ಲಿ ಅಹೋರಾತ್ರಿ ಧರಣಿ!ಪ್ರಿಯಕರನ ಜೊತೆ ಸೇರಿ ಪುತ್ರ, ಪತಿಯನ್ನೇ ಕೊಂದ ಪತ್ನಿ ಬಂಧನ!"ನೀವು ವೇದಾಂತಿ ಆಗಿ, ಸಿಎಂ ಸ್ಥಾನ ಸೆಟ್ ಆಗ್ತಿಲ್ಲ": ಡಿಕೆಶಿಗೆ ಸುನೀಲ್ ಕುಮಾರ್ ಸಲಹೆ, ಸದನದಲ್ಲಿ ನಗೆಯ ಅಲೆ!ಕಾಂಗ್ರೆಸ್‌ಶಾಸಕರ ಅಸಮಾಧಾನ ಶಮನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಮಾಸ್ಟರ್ ಪ್ಲಾನ್KPSC ನೇಮಕಾತಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮನೆ, ಕಚೇರಿ ಸೇರಿ 21 ಕಡೆ ಇಡಿ ದಾಳಿ‘ನಮ್ಮ ರಾಜ್ಯ ರಕ್ಷಣೆ ನಮಗೆ ಗೊತ್ತು, ಹಸ್ತಕ್ಷೇಪ ಬೇಡ’: ತಮಿಳುನಾಡು ನಾಯಕರಿಗೆ ಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆವಿದ್ಯಾರ್ಥಿ ಪ್ರತಿಭಟನೆ ಮೇಲಿನ ಪೊಲೀಸ್ ದೌರ್ಜನ್ಯ: ಉನ್ನತಾಧಿಕಾರ ಸಮಿತಿ ರಚನೆಗೆ ಸುಪ್ರೀಂ ಕೋರ್ಟ್ ನಿರ್ಧಾರ‘ವಂದೇ ಮಾತರಂ’ ವಿವಾದ: ಸೋನಿಯಾ-ರಾಹುಲ್ ವಿರುದ್ಧ ದೂರು, ಖರ್ಗೆ ವಾಗ್ದಾಳಿKPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ಆದೇಶ ವಜಾ: ಮರುನೇಮಕಕ್ಕೆ ಹೈಕೋರ್ಟ್ ನಿರ್ದೇಶನ ‘ಫ್ರೀಡಂ ಪಾರ್ಕ್‌ನಲ್ಲಿ ಬಹಿರಂಗ ಚರ್ಚೆಗೆ ಬನ್ನಿ’: ಕಾಂಗ್ರೆಸ್‌ನಾಯಕರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇರ ಸವಾಲು!