LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಾಣಿ ವಿಲಾಸ ಸಾಗರ ಹಾಗೂ ಗಾಯತ್ರಿ ಜಲಾಶಯಗಳಿಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿರ್ಬಂಧ

Advertisement
Advertisement

ಚಂದ್ರವಳ್ಳಿ ನ್ಯೂಸ್ ಹಿರಿಯೂರು:             ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ (VJNL) ವ್ಯಾಪ್ತಿಗೆ ಒಳಪಡುವ ಐತಿಹಾಸಿಕ ವಾಣಿ ವಿಲಾಸ ಸಾಗರ (ವಿ.ವಿ. ಸಾಗರ) ಹಾಗೂ ಗಾಯತ್ರಿ ಜಲಾಶಯಗಳಿಗೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
​ಅಣೆಕಟ್ಟುಗಳ ಸುರಕ್ಷತಾ ಕಾಯ್ದೆ-2021ರ (Dam Safety Act-2021) ನಿಯಮಾವಳಿಗಳ ಪ್ರಕಾರ, ಈ ಎರಡೂ ಜಲಾಶಯಗಳ ಸಮಗ್ರ ಅಣೆಕಟ್ಟು ಸುರಕ್ಷತಾ ಮೌಲ್ಯಮಾಪನ (Comprehensive Dam Safety Evaluation - CDSE) ಕೈಗೊಳ್ಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಸ್ವತಂತ್ರ ತಜ್ಞರ ಸಮಿತಿ (Independent Panel of Experts - IPoE) ದಿನಾಂಕ 12.08.2026 ರಿಂದ 16.08.2026 ರವರೆಗೆ ಜಲಾಶಯಗಳಿಗೆ ಭೇಟಿ ನೀಡಿ ಸ್ಥಳದಲ್ಲೇ ಸಮಗ್ರ ಪರಿಶೀಲನೆ ನಡೆಸಲಿದೆ.

ತಜ್ಞರ ತಂಡದ ಪರಿಶೀಲನೆ ಕಾರ್ಯದ ಜೊತೆಗೆ ಕೆಲವು ಅತ್ಯಂತ ತುರ್ತು ಅಣೆಕಟ್ಟು ಸುರಕ್ಷತಾ ಕಾಮಗಾರಿಗಳನ್ನೂ ಕೈಗೊಳ್ಳಲಾಗುತ್ತಿದೆ.

ಆದ್ದರಿಂದ ಸುರಕ್ಷತೆಯ ಹಿತದೃಷ್ಟಿಯಿಂದ ಆಗಸ್ಟ್ 12 ರಿಂದ ಆಗಸ್ಟ್ 16 ರವರೆಗೆ (5 ದಿನಗಳು) ಸಾರ್ವಜನಿಕರು ಮತ್ತು ವೀಕ್ಷಕರಿಗೆ ಜಲಾಶಯ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಈ ಅವಧಿಯಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಕಾರ್ಯಪಾಲಕ ಇಂಜಿನಿಯರ್, ವಿ.ಜ.ನಿ.ನಿ., ಭದ್ರಾ ಮೇಲ್ದಂಡೆ ಯೋಜನೆ, ವಿಭಾಗ ನಂ.07, ಹಿರಿಯೂರು ಇವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಣಿ ವಿಲಾಸ ಸಾಗರ ಹಾಗೂ ಗಾಯತ್ರಿ ಜಲಾಶಯಗಳಿಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿರ್ಬಂಧಆಗಸ್ಟ್ 12ಕ್ಕೆ 'ಶತಮಾನದ ಖಗ್ರಾಸ ಸೂರ್ಯಗ್ರಹಣ': ಭಾರತದಲ್ಲಿ ಗೋಚರವಿಲ್ಲ, ಯಾವುದೇ ಆಚರಣೆ ಅಗತ್ಯವಿಲ್ಲರಾಣಿ ಎಲಿಜಬೆತ್ ಹೊಗಳಿದ್ದ ನಮ್ಮ ವಿಧಾನಸೌಧವೇ ನನಗೆ ಸ್ಫೂರ್ತಿ-ಟಿ.ಬಿ ಜಯಚಂದ್ರಕೆಪಿಸಿಸಿ ಅಧ್ಯಕ್ಷರ ಆಶೀರ್ವಾದ ಸಿಕ್ಕಿದೆ- ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ ಯುವ ಜನತೆಗೆ ಯೋಗ, ವ್ಯಾಯಾಮ ಅತ್ಯಂತ ಅವಶ್ಯ:ದಿವ್ಯ ಜ್ಞಾನಾನಂದ ಶ್ರೀಎಸ್. ನಾಗೇನಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆಅಪಘಾತದಲ್ಲಿ ಮೃತಪಟ್ಟ ಕೋಳಿಗಳು 'ಜೀವಸಂಪತ್ತು': ವಿಮಾ ಪರಿಹಾರ ಎತ್ತಿಹಿಡಿದ ಹೈಕೋರ್ಟ್ಸವರ್ಣೀಯ ಮುಖಂಡರಿಂದ ದಲಿತ ಅಧಿಕಾರಿಗಳಿಗೆ ಕಿರುಕುಳ-ಮಾರಸಂದ್ರ ಮುನಿಯಪ್ಪಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆಮೈಸೂರಲ್ಲಿ  'ಜೋಡೆತ್ತು' ಚಿತ್ರದ ಅದ್ದೂರಿ ಕ್ಲೈಮ್ಯಾಕ್ಸ್