Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಟ್ಟಣ ಪಂಚಾಯ್ತಿ ಆಯವ್ಯಯ ಪೂರ್ವಭಾವಿ ಸಭೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ವಿಶ್ವ ಮಟ್ಟದಲ್ಲಿ
  ಕೈಗಾರಿಕಾ ಪ್ರದೇಶವಾಗಿ ಮಾರ್ಪಟ್ಟಿರುವ  ಬಾಶೆಟ್ಟಿಹಳ್ಳಿ ವೃತ್ತದಲ್ಲಿ ಬಸ್ ನಿಲ್ದಾಣಗಳ ಶೆಲ್ಟರ್ ನಿರ್ಮಾಣ ಅತ್ಯಗತ್ಯವಾಗಿದೆ.

ಜನ ಸಂಖ್ಯೆ ದಿನೆ ದಿನೆ ಹೆಚ್ಚುತ್ತಿದ್ದು ಸ್ಮಶಾನಗಳ ಅಭಿವೃದ್ಧಿಗೆ ಒತ್ತು ನೀಡಬೇಕು. ವಿವಿಧ ಸಮುದಾಯಗಳ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಹಣ ಸಾಲದು, ಮತ್ತಷ್ಟು ಹೆಚ್ಚಿಸಬೇಕು ಎಂದು ಅಂಬರೀಶ್ ಆಗ್ರಹಿಸಿದರು.

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ 2025-26ನೇ ಸಾಲಿನ ಆಯ-ವ್ಯಯಕ್ಕೆ ಸಂಬಂಧಿಸಿ ಸಾರ್ವಜನಿಕರ ಪೂರ್ವಭಾವಿ ಸಭೆ ಮಂಗಳವಾರ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಳೆಗಾಲಕ್ಕೂ ಮುನ್ನವೇ ಈ ಬಾರಿಯ ಬೇಸಿಗೆಯಲ್ಲಿ ರಾಜಕಾಲುವೆಗಳ ಒತ್ತುವರಿ ತೆರವು ಮತ್ತು ಸ್ವಚ್ಚತೆಯನ್ನು ಕಾಪಾಡಬೇಕು ಎಂದು ಒತ್ತಾಯಿಸಿದರು.

ದಿನೇ ದಿನೇ ಪಟ್ಟಣ ಪಂಚಾಯತಿ ಬೆಳೆಯುತ್ತಿರುವುದರಿಂದ ನಗರಕ್ಕೆ ಯುಜಿಡಿ ಅನುಷ್ಠಾನ ಅಗತ್ಯ ಇದೆ. ಹೀಗಾಗಿ ಯುಜಿಡಿ ಯೋಜನೆಗೆ ಹಣ ಮೀಸಲಿಟ್ಟು ಜಾರಿಗೊಳಿಸಬೇಕು ಎಂದು ಬೇಡಿಕೆ ಇಟ್ಟರು.

ಬಾಶೆಟ್ಟಿಹಳ್ಳಿ ವಿ ಎಸ್‌ಎಸ್ಎನ್‌ಅಧ್ಯಕ್ಷ ಸಿ. ನಾರಾಯಣಸ್ವಾಮಿ ಮಾತನಾಡಿ ಬಾಶೆಟ್ಟಿಹಳ್ಳಿ ಪಂ.ಪ ವ್ಯಾಪ್ತಿಯಲ್ಲಿ ಬೆರಳೆಣಿಕೆಯಷ್ಟು ಕೆರೆಗಳು ಮಾತ್ರ ಉಳಿದಿವೆ. ಉಳಿದಿರುವ ಕೆರೆಗಳಿಗೂ ಕೈಗಾರಿಕೆಗಳ ತ್ಯಾಜ್ಯ ನೀರು ಹರಿಯುತ್ತಿವೆ. ಇದರಿಂದ ಕೆರೆಗಳಲ್ಲಿ ಮೀನುಗಳು ಸಾವನ್ನಪ್ಪಿ ಕೆರೆಗಳೇ ಇಲ್ಲದಂತಾಗುತ್ತದೆ. ಕೆರೆಗಳು ಮತ್ತು ರಾಜಕಾಲುವೆಗಳು ಸೇರಿದಂತೆ ಪಟ್ಟದ ಮುಖ್ಯರಸ್ತೆಗಳಲ್ಲಿ ಒತ್ತುವರಿ ಮಾಡಿಕೊಂಡಿರುವವರ ವಿರುದ್ದ ಕ್ರಮ ತೆಗೆದುಕೊಂಡು ತೆರವು ಕಾರ್ಯಾಚರಣೆಯನ್ನ ಆರಂಭಿಸಬೇಕು ಎಂದರು. ಇದಕ್ಕೆ ಉತ್ತರಿಸಿದ ಪ.ಪಂ ಮುಖ್ಯಾಧಿಕಾರಿ ಪಿ.ನರಸಿಂಹಮೂರ್ತಿ ಕೆರೆಯಸುತ್ತಮುತ್ತಲಿನ ಎಲ್ಲಾ ಕಂಪನಿ, ಕಾರ್ಖಾನೆ, ಫ್ಯಾಕ್ಟರಿಗಳಿಗೆ ನೋಟಿಸ್‌ನೀಡಿ ಶೀಘ್ರವಾಗಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ರಸ್ತೆಗಳ ಪಕ್ಕದಲ್ಲಿ ಒತ್ತುವರಿ ತೆರವಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದರು.

ಬ್ಯಾಂಕ್ ಸರ್ಕಲ್ ನಲ್ಲಿನ ಪುಟ್ ಪಾತ್ ನಲ್ಲಿ ಗ್ರಿಲ್ಸ್ ಅಳವಡಿಸುವುದು. ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಹಾದುಹೋಗಿರುವ ಬೆಂಗಳೂರು-ಹಿಂದೂಪುರ ಹೆದ್ದಾರಿ ರಸ್ತೆಯಲ್ಲಿ ಪಂಚಾಯತಿ ವತಿಯಿಂದ ಸ್ವಾಗತ ಮತ್ತು ಧನ್ಯವಾದ ಕಮಾನುಗಳ ನಿರ್ಮಾಣ. ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿನ ಸ್ಮಶಾನಗಳಿಗೆ ಕಾಂಪೌಂಡ್ ನಿರ್ಮಾಣ. ನೂತನವಾಗಿ ವಾಣಿಜ್ಯ ಮಳಿಗೆಗಳ ನಿರ್ಮಾಣ.

ಬಾಶೆಟ್ಟಿಹಳ್ಳಿ ಕೆರೆಯನ್ನ ಅಭಿವೃದ್ಧಿಪಡಿಸಿ, ವಾಕಿಂಗ್ ಟ್ರ್ಯಾಕ್ ಮತ್ತು ವಿಶ್ರಾಂತಿ ಚೇರ್ ಗಳನ್ನ ಹಾಕುವುದು. ಅರಣೀಕರಣ ಮಾಡಿ ಮರಗಳನ್ನ ಹಾಕುವುದು.

ರಸ್ತೆ ಬದಿಗಳಲ್ಲಿನ ಒತ್ತುವರಿ ತೆರವು ಕಾರ್ಯ ಮಾಡಿ ಕಠಿಣ ಕ್ರಮಗಳನ್ನ ತೆಗೆದುಕೊಳ್ಳಬೇಕು. ಬೀದಿ ಬದಿ ವ್ಯಾಪಾರಿಗಳ ಗಣತಿ ಮಾಡಿ ಸುಂಕ ವಸೂಲಿ ಕ್ರಮ ಜರುಗಿಸಬೇಕು. ಕೆರೆಗಳಿಗೆ ಕಲ್ಲು ಕಂಬಹಾಕಿ ಮುಳ್ಳುತಂತಿ  ಹಾಕುವುದು ಶಾಲಾ ವಿದ್ಯಾರ್ಥಿಗಳಿಗೆ ಮೈದಾನ ನಿರ್ಮಾಣ. ಪ್ರತಿ ಗ್ರಾಮಗಳಿಗೂ ಚರಂಡಿ, ರಸ್ತೆ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಬೇಕು. ಹಾಗೂ ಇತರೆ ಅಭಿವೃದ್ಧಿ

ಲಾರಿಗಳು ರಸ್ತೆಯಲ್ಲಿ ಪಾರ್ಕ್‌ಮಾಡಲಾಗುತ್ತಿದೆ. ಇದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಲಾರಿಗಳ ತೆರವಿಗೆ ಕಂಪನಿಗಳ ವಿರುದ್ಧ ಕ್ರಮಕ್ಕೆ ನೀತಿ

ಈ ಸಂದರ್ಭದಲ್ಲಿ ಲೆಕ್ಕಾಧಿಕಾರಿ ಪಾಂಶುಶಿಂಧೆ, ಎಫ್‌ಡಿಎ ಮೇಘನಾ, ಉಮಾಶಂಕರ್, ಮುಖಂಡರಾದ ಕೃಷ್ಣಪ್ಪ, ಪ್ರೇಮಕುಮಾರ್, ಸಿ.ನಾರಾಯಣಸ್ವಾಮಿ, ಕೃಷ್ಣಮೂರ್ತಿ ಮುನಿಚಂದ್ರ, ಮುನಿರಾಜು, ಅಂಬರೀಶ್  ಮತ್ತಿತರರು ಹಾಜರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ