LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಐಎಎಸ್ ಅಧಿಕಾರಿಗಳ ವರ್ಗಾವಣೆ: ಕೆಪಿಎಸ್‌ಸಿ ಪರೀಕ್ಷಾ ಜವಾಬ್ದಾರಿ ಕೆಇಎ 'ಎಚ್. ಪ್ರಸನ್ನ' ಹೆಗಲಿಗೆ!

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರವು
3 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಹಾಗೂ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಬುಧವಾರ (ಆಗಸ್ಟ್ 12) ಮಹತ್ವದ ಆದೇಶ ಹೊರಡಿಸಿದೆ. ಪ್ರಮುಖವಾಗಿ ಇತ್ತೀಚೆಗೆ ವಿವಾದಗಳ ಸುಳಿಯಲ್ಲಿದ್ದ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸುವ ಗುರುತರ ಜವಾಬ್ದಾರಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರಿಗೆ ವಹಿಸಲಾಗಿದ್ದು, ಇದು ಉದ್ಯೋಗಾಕಾಂಕ್ಷಿಗಳಲ್ಲಿ ಹೊಸ ಭರವಸೆ ಮೂಡಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೊರಡಿಸಿರುವ ಆದೇಶದಂತೆ KPSC, KEA ಹಾಗೂ ಪಂಚಾಯತ್ ರಾಜ್ ಇಲಾಖೆಗಳಲ್ಲಿ ಪ್ರಮುಖ ಹುದ್ದೆಗಳ ಬದಲಾವಣೆ ಮಾಡಲಾಗಿದೆ.

ಎಚ್. ಪ್ರಸನ್ನ ಅವರಿಗೆ KPSC ಪ್ರಭಾರ: KEA ಮೂಲಕ ಯಶಸ್ವಿಯಾಗಿ ಪರೀಕ್ಷೆಗಳನ್ನು ನಡೆಸಿ ಸೈ ಎನಿಸಿಕೊಂಡಿರುವ ಎಚ್. ಪ್ರಸನ್ನ ಅವರಿಗೆ KPSC ಪರೀಕ್ಷಾ ನಿಯಂತ್ರಕರ ಹೆಚ್ಚುವರಿ ಪ್ರಭಾರ ನೀಡಲಾಗಿದೆ.

ಲವಿಶ್ ಓರ್ಡಿಯಾ ವರ್ಗಾವಣೆ: ಯಾದಗಿರಿ ಜಿಲ್ಲಾ ಪಂಚಾಯತ್ ಸಿಇಒ ಆಗಿದ್ದ ಲವಿಶ್ ಓರ್ಡಿಯಾ ಅವರನ್ನು KPSCಯ ಜಂಟಿ ಪರೀಕ್ಷಾ ನಿಯಂತ್ರಕರನ್ನಾಗಿ ವರ್ಗಾಯಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.

ಡಾ. ಅರುಂಧತಿ ಚಂದ್ರಶೇಖರ್‌ಗೆ ಹೆಚ್ಚುವರಿ ಜವಾಬ್ದಾರಿ: ಪ್ರಸ್ತುತ ಪಂಚಾಯತ್ ರಾಜ್ ಆಯುಕ್ತರಾಗಿರುವ ಡಾ. ಅರುಂಧತಿ ಚಂದ್ರಶೇಖರ್ ಅವರಿಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.

ಉದ್ಯೋಗಾಕಾಂಕ್ಷಿಗಳಿಗೆ ಸಮಾಧಾನ:
ಕೆಪಿಎಸ್‌ಸಿಯಲ್ಲಿ ಇತ್ತೀಚೆಗೆ ನಡೆದ ನೇಮಕಾತಿ ಪರೀಕ್ಷೆಗಳಲ್ಲಿ ಸರಣಿ ಅಕ್ರಮ ಆರೋಪಗಳು ಕೇಳಿಬಂದಿದ್ದವು. ಆಯೋಗದ ಅಧ್ಯಕ್ಷರ ಮಗಳಿಗೆ ಹುದ್ದೆ ನೀಡಿದ ಪ್ರಕರಣ ಸೇರಿದಂತೆ ಹಲವು ವಿವಾದಗಳ ಕುರಿತು ಸರ್ಕಾರದ ಮಟ್ಟದಲ್ಲಿ ತನಿಖೆಯೂ ನಡೆಯುತ್ತಿದೆ. ಇದರಿಂದ ಅಭ್ಯರ್ಥಿಗಳು ಕೆಪಿಎಸ್‌ಸಿ ಮೇಲಿನ ನಂಬಿಕೆ ಕಳೆದುಕೊಂಡಿದ್ದರು. ಆದರೆ
, ಕೆಇಎನಲ್ಲಿ ಪಾರದರ್ಶಕ ಪರೀಕ್ಷಾ ಪದ್ಧತಿ ಜಾರಿಗೆ ತಂದ ಹೆಗ್ಗಳಿಕೆ ಹೊಂದಿರುವ ಎಚ್. ಪ್ರಸನ್ನ ಅವರಿಗೆ ಕೆಪಿಎಸ್‌ಸಿ ಪರೀಕ್ಷಾ ಜವಾಬ್ದಾರಿ ನೀಡಿದ್ದು, ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮರಳಬಹುದು ಎಂಬ ಸಮಾಧಾನ ಸ್ಪರ್ಧಾಕಾಂಕ್ಷಿಗಳಲ್ಲಿ ವ್ಯಕ್ತವಾಗಿದೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾವೇರಿ ಕಿಚ್ಚು: ಸುಪ್ರೀಂ ತೀರ್ಪು ನೋಡಿ ಮುಂದಿನ ನಿರ್ಧಾರ, ಹೆಚ್‌ಡಿಕೆಗೆ ಸಚಿವ ರಾಮಲಿಂಗಾರೆಡ್ಡಿ ಸವಾಲು!ಉಗ್ರರೂಪ ತಾಳಿದ ಕಾವೇರಿ ಕಿಚ್ಚು: ಹೆದ್ದಾರಿ ತಡೆದು ರೈತರ ಬೃಹತ್ ಪ್ರತಿಭಟನೆ!ಆಗಸ್ಟ್ 13ರ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ: ಸಾರಿಗೆ, ಶಾಲಾ-ಕಾಲೇಜು ಕಾರ್ಯನಿರ್ವಹಣೆ?ಪ್ರಜ್ವಲ್ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ: DIG ನೇತೃತ್ವದಲ್ಲಿ ಆಂತರಿಕ ತನಿಖೆ!ಐಎಎಸ್ ಅಧಿಕಾರಿಗಳ ವರ್ಗಾವಣೆ: ಕೆಪಿಎಸ್‌ಸಿ ಪರೀಕ್ಷಾ ಜವಾಬ್ದಾರಿ ಕೆಇಎ 'ಎಚ್. ಪ್ರಸನ್ನ' ಹೆಗಲಿಗೆ!ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಹಿರಿಯ ನಾಯಕರ ರಹಸ್ಯ ಸಭೆ: ಡಾ. ಯತೀಂದ್ರ ಸಮಾಧಾನದ ಯತ್ನ!ಜೈಲಿನ ಮೇಲೆ ಸಿಸಿಬಿ ದಾಳಿ ನನ್ನದೇ ಆದೇಶ: ಪ್ರಿಯಾಂಕ್ ಖರ್ಗೆ!ಜೈಲಿನ ಮೇಲೆ ಸಿಸಿಬಿ ಹಠಾತ್ ದಾಳಿ: ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್ ಡ್ರೈವ್ ಪತ್ತೆ- FIR ದಾಖಲು!ನೂತನ ಸಚಿವರಿಗೆ ಖಾತೆ ಹಂಚಿಕೆ: ರಾಮಲಿಂಗಾರೆಡ್ಡಿ, ಮುನಿಯಪ್ಪ ಖಾತೆ ಬದಲಾವಣೆ–ಯಾರಿಗೆ ಯಾವ ಇಲಾಖೆ?ಯುಎಪಿಎ ಪ್ರಕರಣಗಳ ಸುದೀರ್ಘ ವಿಳಂಬಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ