ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸರ್ಕಾರಿ ಸೇವೆಯಿಂದ ವಯೋ ನಿವೃತ್ತಿಯಾದ ಹಿರಿಯ ಪಶುವೈದ್ಯ ಪರೀಕ್ಷಕ ಸಿದ್ದೇಶ್ವರ ಹಾಗೂ ಚಳ್ಳಕೆರೆ ನಗರಸಭೆ ಕಂದಾಯಾಧಿಕಾರಿ ಸಿ.ಎಸ್.ಸತೀಶ್ ಇವರುಗಳಿಗೆ ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ದಿ ಹಾಗೂ ಸಾಂಸ್ಕೃತಿಕ ಸಂಘದ ವತಿಯಿಂದ ಪ್ರವಾಸಿ ಮಂದಿರದಲ್ಲಿ ಸನ್ಮಾನಿಸಲಾಯಿತು.
ಸಂಘದ ಸಂಸ್ಥಾಪಕ ಅಧ್ಯಕ್ಷ ಸಿ.ಜಿ.ಶ್ರೀನಿವಾಸ್ ನಿವೃತ್ತಿಯಾದ ನೌಕರರನ್ನು ಸನ್ಮಾನಿಸಿ ಸರ್ಕಾರಿ ನೌಕರಿಯಲ್ಲಿ ವರ್ಗಾವಣೆ, ನಿವೃತ್ತಿಯನ್ನು ಅನುಭವಿಸಬೇಕು. ನಿವೃತ್ತಿ ಜೀವನ ನೆಮ್ಮದಿಯಾಗಿರಲೆಂದು ಹಾರೈಸಿದರು.
ಸಂಘದ ಜಿಲ್ಲಾಧ್ಯಕ್ಷ ಸದಾನಂದ್, ತಾಲ್ಲೂಕು ಅಧ್ಯಕ್ಷ ಕೆ.ನಾಗರಾಜ್, ಪ್ರಧಾನ ಕಾರ್ಯದರ್ಶಿ ಎಸ್.ಬಿ.ರವಿಶಂಕರ್, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ನಾಗೇಂದ್ರಬಾಬು, ಉಪಾಧ್ಯಕ್ಷ ಹರೀಶ್ಕುಮಾರ್, ಪದಾಧಿಕಾರಿಗಳಾದ ಧನಂಜಯ್, ಬಸವರಾಜ್, ಕುಮಾರ್ ಹಾಗೂ ಸನ್ಮಾನಿತರ ಕುಟುಂಬದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



