Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಿಎಂ ಧನ ಧಾನ್ಯ ಕೃಷಿ ಯೋಜನೆಗೆ ತುಮಕೂರು ಜಿಲ್ಲೆ ಸೇರ್ಪಡೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇಶದ ರೈತರನ್ನು ಸ್ವಾವಲಂಬನೆಗೊಳಿಸಲು ಆರಂಭಿಸಿರುವ ಪಿಎಂ ಧನ ಧಾನ್ಯ ಕೃಷಿ ಯೋಜನೆ ಹಾಗೂ ದ್ವಿದಳ ಧಾನ್ಯಗಳ ರಾಷ್ಟ್ರೀಯ ಯೋಜನೆಯಡಿ ದೇಶದ 100 ಜಿಲ್ಲೆಗಳೊಂದಿಗೆ ತುಮಕೂರು ಜಿಲ್ಲೆಯನ್ನೂ ಆಯ್ಕೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್‌ಸಿಂಗ್‌ಚೌಹಾಣ್‌ಅವರಿಗೆ ತುಮಕೂರು ಜಿಲ್ಲೆಯ ರೈತರ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಮಹತ್ವಾಕಾಂಕ್ಷಿ ಪಿಎಂ ಧನ ಧಾನ್ಯ ಕೃಷಿ ಯೋಜನೆಗೆ ಇದೇ ಅಕ್ಟೋಬರ್ 11ರ ಶನಿವಾರದಂದು ದೆಹಲಿಯಲ್ಲಿ ಜರುಗುವ ಕಾರ್ಯಕ್ರಮದ ಮೂಲಕ ಪ್ರಧಾನಿ  ನರೇಂದ್ರ ಮೋದಿಯವರು ಚಾಲನೆ ನೀಡಲಿದ್ದಾರೆ.
ತಿಪಟೂರಿನಲ್ಲಿ ಜರುಗುವ ಈ ಕಾರ್ಯಕ್ರಮದ ನೇರ ಪ್ರಸಾರದಲ್ಲಿ ತುಮಕೂರು ಜಿಲ್ಲೆಯ ಸಮಸ್ತ ರೈತ ಬಾಂಧವರು
, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಪಾಲ್ಗೊಳ್ಳಬೇಕೆಂದು ಕೇಂದ್ರ ಸಚಿವರು ಕೋರಿದ್ದಾರೆ.

ಈ ಮಹತ್ವಾಕಾಂಕ್ಷಿ ಯೋಜನೆಗಳ ಮೂಲಕ ಜಿಲ್ಲೆಯ ರೈತರ ಆದಾಯ ದ್ವಿಗುಣಗೊಳಿಸಲು, ಕೃಷಿ ಬೀಜಗಳು, ರಸಗೊಬ್ಬರ, ಕೃಷಿ ಪರಿಕರಗಳು ಹಾಗೂ ಧಾನ್ಯಗಳ ಸಂಗ್ರಹ, ಮಾರುಕಟ್ಟೆಗೆ ಸಂಬಂಧಿಸಿದಂತೆ ಇನ್ನಿತರೆ ವಿಷಯಗಳಲ್ಲಿ ಅವರ ಬೆಂಬಲಕ್ಕೆ ನಿಲ್ಲಲು ಹಲವು ಕಾರ್ಯಕ್ರಮಗಳನ್ನು ನಮ್ಮ ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿದೆ. ಅಲ್ಲದೇ, ಬೇಳೆ ಕಾಳುಗಳ ಬೆಳೆಯಲ್ಲಿ ಆತ್ಮನಿರ್ಭರ ಭಾರತ ಸೃಷ್ಠಿಸಬೇಕೆನ್ನುವ ದೃಷ್ಠಿಯಿಂದ ದ್ವಿದಳ ಧಾನ್ಯಗಳ ರಾಷ್ಟ್ರೀಯ ಯೋಜನೆಯನ್ನೂ ಜಾರಿಗೊಳಿಸಲಾಗುತ್ತಿದೆ ಎಂದು ವಿ ಸೋಮಣ್ಣ ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ