ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರನ್ನು ನವದೆಹಲಿಯಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ಭೇಟಿಯ ವೇಳೆ ಉಭಯ ನಾಯಕರು ಉತ್ತಮ ಆಡಳಿತ ಹಾಗೂ ಸಾರ್ವಜನಿಕ ಸೇವೆಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಪರಸ್ಪರ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.
ಸಾಂವಿಧಾನಿಕ ಮತ್ತು ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ಇನ್ನಷ್ಟು ಬಲಪಡಿಸುವುದು ಹಾಗೂ ದೇಶದ ಸಮಗ್ರ ಅಭಿವೃದ್ಧಿಯನ್ನು ಮುನ್ನಡೆಸುವಲ್ಲಿ ಪರಸ್ಪರ ಸಹಭಾಗಿತ್ವ ಮತ್ತು ಬದ್ಧತೆಯನ್ನು ಈ ಸಂದರ್ಭದಲ್ಲಿ ಪುನರುಚ್ಚರಿಸಲಾಯಿತು.



