Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ.ಅಂಬೇಡ್ಕರ್ ರವರ ಪುತ್ಥಳಿ ಅನಾವರಣ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ತಾಲ್ಲೂಕಿನ ವಡ್ಡರಪಾಳ್ಯದಲ್ಲಿ ಸ್ಥಳೀಯ ಯುವಕರು ಹಾಗೂ ನಿವಾಸಿಗಳು ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ 134ನೇ ಜಯಂತಿಯ ಅಂಗವಾಗಿ ಪುತ್ಥಳಿ ಅನಾವರಣ  ಮಾಡುವ ಮೂಲಕ ವಿಶೇಷವಾಗಿ ಆಚರಿಸಿದರು.

 ಕಾರ್ಯಕ್ರಮಕ್ಕೆ ಆಗಮಿಸಿದ  ಕೆ ಆರ್ ಎಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ. ಶಿವಶಂಕರ್ , ದಲಿತ ಮುಖಂಡರಾದ ರಾಜಗೋಪಾಲ್,ರಾಜುಸಣ್ಣಕ್ಕಿ,ಸ್ಥಳೀಯ ಮುಖಂಡ ಮಹೇಶ್ ಸೇರಿದಂತೆ ಹಲವು ಗಣ್ಯರು  ನೂತನ ಪುತ್ಥಳಿಗೆ ಪುಷ್ಪ ನಮನ ಹಾಗೂ ಮಾಲಾರ್ಪಣೆ ಮಾಡುವ ಮೂಲಕ ಅನಾವರಣ ಮಾಡಿದರು.

  ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡ  ಮಹೇಶ್ ಮಾತನಾಡಿದ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತ ದೇಶಕ್ಕೆ ಸಂವಿಧಾನ ಕೊಟ್ಟಂತಹ ಮಹಾನ್ ವ್ಯಕ್ತಿ, ಅವರ ಜೀವನವೇ ನಮಗೆ ಆದರ್ಶ, ಹಲವು ಹೋರಾಟಗಳ ನಡುವೆಯೂ  ಅವರ ಸಾಧನೆ ಇಂದಿನ ಯುವ ಪೀಳಿಗೆಗೆ ಮಾರ್ಗದರ್ಶನವಾಗಿದೆ, ಅವರ ಆಶಯದಂತೆ  ವಿದ್ಯೆ ಸಂಘರ್ಷ ಸಮಾನತೆ ಸಾದಿಸುವ ನಿಟ್ಟಿನಲ್ಲಿ ಇಂದಿಗೂ ನಮ್ಮ ಹೋರಾಟ ನಿರಂತರವಾಗಿದೆ ಎಂದರು.

 ನಾವು ದೇವರ ಕುರಿತಂತೆ  ಹಲವಾರು ವಿಗ್ರಹಗಳನ್ನು ನೋಡಿದ್ದೇವೆ ಆದರೆ ನಮ್ಮ ಸಮಾನತೆಗಾಗಿ ಹೋರಾಡಿದ  ಬಾಬಾ ಸಾಹೇಬರೇ ನಮ್ಮ ದೇವರು , ಅವರ ಪ್ರತಿಬಿಂಬವನ್ನು ಮುಂದಿನ ಪೀಳಿಗೆಗೂ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು , ಈ ನಿಟ್ಟಿನಲ್ಲಿ  ನಮ್ಮ ವಡ್ಡರ ಪಾಳ್ಯದಲ್ಲಿ  ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪುತ್ಥಳಿ ಅನಾವರಣ ಮಾಡಲಾಗಿದೆ. ಇದು ಕೇವಲ  ಪುತ್ಥಳಿಯಲ್ಲ ವಿದ್ಯೆ ಸಂಘರ್ಷ ಹೋರಾಟ ಸಮಾನತೆಯ ಪ್ರತಿರೂಪವಾಗಿದೆ ಎಂದರು.

 ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರಾದ ಮಹೇಶ, ಕೇಶವ್, ಕಿರಣ, ಬಾಲಕೃಷ್ಣ, ಪ್ರಜ್ವಲ್, ಅಭಿ, ಕಿರಣ ಎಸ್, ಮಹೇಶ್, ಪ್ರದೀಪ್ ನವೀನ್ ಸುರೇಶ್, ಮುರಳಿ, ನರಸಿಂಹ ಮೂರ್ತಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ