Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ. ಬಿ. ಆರ್. ಅಂಬೇಡ್ಕರ್ ಪುತ್ಥಳಿ ಅನಾವರಣ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ನಗರದ
5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರು ಉದ್ಘಾಟನೆ ಮಾಡಿದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶಕ್ಕೆ ಶ್ರೇಷ್ಠ ಸಂವಿಧಾನ ತಂದುಕೊಟ್ಟ ಮಹಾನ ವ್ಯಕ್ತಿ ಡಾ.ಬಿ.ಆರ್ ಅಂಬೇಡ್ಕರ್, ಅವರ ಪುತ್ಥಳಿಯನ್ನು ಅನಾವರಣ ಮಾಡಿದ್ದು ತುಂಬಾ ಸಂತಸ ತಂದಿದೆ. ಎಲ್ಲರೂ ಶಿಕ್ಷಣವನ್ನು ಪಡೆಯಬೇಕು. ಉತ್ತಮ ಶಿಕ್ಷಣ ಪಡೆದು ದೇಶದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಿಂದ ನರೇಗಾ ಹೆಸರು ಬದಲಾವಣೆ ವಿಚಾರ ಕುರಿತು ಮಾತನಾಡಿದ ಅವರು, ಅದೊಂದು ದುರಂತ ವಿಚಾರ. ಈ ರಾಷ್ಟ್ರಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾನ್ ಚೇತನ ಮಹಾತ್ಮಗಾಂಧಿ, ರಾಮ ಯಾರೀಗೂ ಬೇಡ ಅಂತ ಹೇಳಲ್ಲ. ಮನೆಯಲ್ಲಿ ರಾಮನಿಗೂ ಆಂಜನೇಯನಿಗೂ ಪೂಜೆ ಮಾಡುತ್ತೇವೆ. ಸಮಾಜ ಸುಧಾರಣೆ, ಸಮಾನತೆ ಸಾರುವ ಉದ್ದೇಶದಿಂದ ಮಹಾತ್ಮ ಗಾಂಧಿ ಹೆಸರು ಇಟ್ಟಿದ್ದೆವು. ಮನಮೋಹನ್ ಸಿಂಗ್ ಸರಕಾರದಲ್ಲಿ ನಾನು ಸಚಿವನಿದ್ದಾಗ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಮಾಡಿದ್ದರು.

ಇದನ್ನ ಇಡೀ ದೇಶ ಒಪ್ಪಿತ್ತು, ಹೆಸರು ಬದಲಾವಣೆಯಿಂದ ಮೋದಿಗೆ ಗೌರವ ಕಡಿಮೆ ಆಯಿತು. ಒಬ್ಬ ರಾಷ್ಟ್ರಪಿತ, ಜಗತ್ ಒಪ್ಪಿರುವ ವ್ಯಕ್ತಿ ಹೆಸರು ಬದಲಾವಣೆ ಮಾಡಿ ನೀವು ಏನು ಕಿರೀಟ ಇಟುಕೊಳ್ಳುತ್ತಿರಿ. ಯಾರಿಗೆ ಗೊತ್ತಿಲ್ಲ ರಾಮ, ನೀವು ಎಷ್ಟು ಜನ ಬರೆಯುತ್ತೀರಾ ರಾಮ ಕೋಟಿ.

ನಾನು ನಿತ್ಯ ರಾಮ ಕೋಟಿ ಬರೆಯುತ್ತೇನೆ. ನೀವು ಓಟು ಪಡೆಯಲು ರಾಮನನ್ನು ಉಪಯೋಗಿಸಬೇಡಿ. ಆತ್ಮಶುದ್ದವಾಗಿ ರಾಮನನ್ನ ಪ್ರೀತಿ ಮಾಡಿ, ಪೂಜೆ ಮಾಡಿ. ಗಾಂಧಿಜಿ ಹೆಸರು ಬದಲಾಯಿಸಿದ್ದಕ್ಕೆ ನಮಗೆಲ್ಲಾ ನೋವಿದೆ. ಮುಂದಿನ ದಿನಗಳಲ್ಲಿ ನಾವು ಹೋರಾಟ ಮಾಡುತ್ತೇವೆ ಎಂದರು.

ಸಿದ್ದೇನಾಯಕನಹಳ್ಳಿಯಲ್ಲಿ ಸಮುದಾಯ ಭವನ ಕಟ್ಟಡ ನಿರ್ಮಾಣಕ್ಕಾಗಿ ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದ ಅಧ್ಯಕ್ಷ ನರೇಶ್ ಎಸ್ ಜಿ, ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ರಂಗಪ್ಪ, ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದ ಅಧ್ಯಕ್ಷ ನರೇಶ್ ಎಸ್ ಜಿ, ಸಂಘದ ಗೌರವ ಅಧ್ಯಕ್ಷ ಮುನಿಯಪ್ಪ, ಗೌರವ ಅಧ್ಯಕ್ಷ ಎಂ ಮುನಿರಾಜು, ಉಪಾಧ್ಯಕ್ಷ ರಘು ಎಸ್ ಎನ್, ಮುನಿರಾಜು ಆರ್, ಲೋಕೇಶ್ ಎಂಪ್ರಧಾನ ಕಾರ್ಯದರ್ಶಿ ಎಸ್ ಎನ್ ಸುಬ್ರಮಣಿ, ಸದಸ್ಯರು ಸೇರಿದಂತೆ ಇತರೆ ಗಣ್ಯರು ಇದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ