Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್ಟಿ ಮೀಸಲಾತಿ ಗುತ್ತಿಗೆ ಪಡೆದ ರೀತಿ ವರ್ತಿಸುತ್ತಿರುವ ವಾಲ್ಮೀಕಿ ಗುರು ಪೀಠ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಕಾಡುಗೊಲ್ಲ ಮತ್ತು ಕುರುಬ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವುದನ್ನು ನಾವುಗಳು ವಿರೋಧಿಸುತ್ತಿಲ್ಲ. ಇದನ್ನು ವಿರೋಧಿಸುವಂತೆ ಪ್ರಚೋಧಿಸಿ ಜಾತಿ ಮತ್ತು ಪಂಗಡಗಳ ನಡುವೆ ಸಂಘರ್ಷ ಉಂಟು ಮಾಡುತ್ತಿರುವವರ ವಿರುದ್ದ ಎಚ್ಚರಿಕೆಯಿಂದ ಇರುವಂತೆ ಮ್ಯಾಸ ಬೇಡ ಬುಡಕಟ್ಟು ಸಂಸ್ಕೃತಿ ಸಂರಕ್ಷಣಾ ಸಮಿತಿ ಅಧ್ಯಕ್ಷ ಡಾ.ಗೆರೆಗಲ್ ಪಾಪಯ್ಯ ಮನವಿ ಮಾಡಿದರು.


ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ತಿಂಗಳ 18 ಹರಿಹರ ವಾಲ್ಮೀಕಿ ಗುರುಪೀಠದಲ್ಲಿ ನಡೆದ ಸಭೆಯಲ್ಲಿ ವಾಲ್ಮೀಕಿ ನಾಯಕ ಜಾತಿಗೆ ಮೇಲ್ವರ್ಗದ ಜಾತಿಗಳನ್ನು ಸೇರ್ಪಡೆಗೊಳಿಸುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸುವಂತೆ ಮ್ಯಾಸ ನಾಯಕ ಬುಡಕಟ್ಟು ಜನರನ್ನು ಕುರುಬರ ವಿರುದ್ದ ಎತ್ತಿ ಕಟ್ಟುವ ಕುತಂತ್ರ ರೂಪಿಸಿ ಮ್ಯಾಸ ನಾಯಕ, ತಳವಾರ, ಪರಿವಾರ ಇವರುಗಳನ್ನು ಹೋರಾಟಕ್ಕೆ ಇಳಿಯುವಂತೆ ಗೊಂದಲ ಸೃಷ್ಠಿ ಮಾಡುತ್ತಿರುವುದಕ್ಕೆ ಕಿವಿಗೊಡಬಾರದೆಂದು ಮ್ಯಾಸ ನಾಯಕರನ್ನು ಎಚ್ಚರಿಸಿದರು.

ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ಕುರುಬ ಜನಾಂಗ ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಲು ಅರ್ಹತೆ ಹೊಂದಿದೆಯೆಂಬ ವರದಿ ನೀಡಿದೆ.

1976 ರಲ್ಲಿ ಮ್ಯಾಸ ನಾಯಕರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲಾಗಿದೆ. ಎಸ್.ಟಿ ಮೀಸಲಾತಿ ಯಾರ ಮನೆ/ಮಠದ ಸ್ವತ್ತಲ್ಲ. ವಾಲ್ಮೀಕಿ ಗುರು ಪೀಠದವರು ಎಸ್ಟಿ ಮೀಸಲಾತಿಯನ್ನು ಗುತ್ತಿಗೆ ಪಡೆದ ರೀತಿ ವರ್ತಿಸುವಂತಿದೆ.

ಸಂವಿಧಾನದಡಿ ಆಯಾ ವರ್ಗದ ಜಾತಿ ಜನಾಂಗದವರಿಗೆ ಅರ್ಹತೆ ಆಧಾರದ ಮೇಲೆ ಮೀಸಲಾತಿ ಪಡೆಯಲು ಸಮಾನ ಹಕ್ಕಿದೆ. ಪರಿಶಿಷ್ಟ ಪಂಗಡ ಪಟ್ಟಿಯಲ್ಲಿ ಕುರುಬರು ಸೇರ್ಪಡೆಯಾಗಲು ವಿಶಿಷ್ಟವಾದ ಬುಡಕಟ್ಟು ಲಕ್ಷಣಗಳಿದೆಯೋ ಇಲ್ಲವೋ ಎನ್ನುವುದನ್ನು ರಾಜ್ಯ ಸರ್ಕಾರಗಳು ವರದಿ ತಯಾರಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತದೆ. ಆಗ ಸಂಸತ್ನಲ್ಲಿ ಚರ್ಚಿಸಿ ಅಂತಹ ಜಾತಿಗಳನ್ನು ಪರಿಶಿಷ್ಟ ಪಂಗಕ್ಕೆ ಸೇರಿಸುತ್ತದೆನ್ನುವ ಸತ್ಯ ಗೊತ್ತಿದ್ದರೂ ವಿನಾ ಕಾರಣ ಗೊಂದಲ ಸೃಷ್ಟಿಸಿ ಜಾತಿ ಜಾತಿಗಳನ್ನು ಎತ್ತಿಕಟ್ಟುವ ಕೆಲಸಕ್ಕೆ ಕೈಹಾಕಬಾರದೆಂದರು.

ಮ್ಯಾಸ ಬೇಡ ಬುಡಕಟ್ಟು ಸಂಸ್ಕೃತಿ ಸಂರಕ್ಷಣಾ ಸಮಿತಿ ಉಪಾಧ್ಯಕ್ಷ ಸಿ.ಎಸ್.ಜೋಗೇಶ್, ಕಾರ್ಯದರ್ಶಿ ದೊಡ್ಡಮನಿ ಪ್ರಸಾದ್, ಮಲ್ಲೇಶ್ ಪಿ.ಜಾಲಿಕಟ್ಟೆ, ಎಂ.ಕೆ.ಬೋಸಪ್ಪ, ಚಂದ್ರಣ್ಣ, ಗಿರೀಶ್, ಕೆ.ಬಿ.ಓಬಣ್ಣ, ಮಂಜುನಾಥ, ಡಾ.ಅನ್ನಪೂರ್ಣ ಜೋಗೇಶ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ