Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಮೆರಿಕದಲ್ಲೂ ಬಸವಣ್ಣನ ಕಹಳೆಯೂದಿದ ವೀರಶೈವರು

Advertisement
ಚಂದ್ರವಳ್ಳಿ ನ್ಯೂಸ್, ಅಮೆರಿಕ:
ವೀರಶೈವ ಸಮಾಜ ಆಫ್ ನಾರ್ಥ ಅಮೆರಿಕ (
VSNA) ವತಿಯಿಂದ ಮಿಚಿಗನ್ ರಾಜ್ಯದ ಡೆಟ್ರ್ಯಾಟ್ ಶಹರದಲ್ಲಿ ಆರಂಭಗೊಂಡ 47ನೇಯ ಶರಣ ಸಂಗಮ‌ ಕಾರ್ಯಕ್ರಮ ಅಮೋಘವಾಗಿ ನಡೆಯುತ್ತಿದೆ.

ಮಹೇಶ ಪಾಟೀಲರ ಅಧ್ಯಕ್ಷತೆ ಹಾಗೂ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳ ಉಪಸ್ಥಿತಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ, ಪ್ರಭಾಕರ ಕೋರೆ, ಮಾಜಿ ಸಚಿವರುಗಳಾದ ಶಂಕರ ಪಾಟೀಲಮುನೇನಕೊಪ್ಪ, ಮುರಗೇಶ ನಿರಾಣಿ, ಎಂಎಲ್ಸಿಗಳಾದ ಪ್ರದೀಪ ಶೆಟ್ಟರ್, ನವೀನ, ಸಮಾಜದ ದಯಾನಂದ, ದೊಡ್ಡಮನಿ ಭಾಗವಹಿಸಿದ್ದಾರೆ.

"ಇವನಾರವ ಇವನಾರವ ಇವನಾರವ ನೆಂದಿನಸದಿರಯ್ಯಾ, ಇವ ನಮ್ಮವ ಇವ ನಮ್ಮವ ಇವ ನಮ್ಮವ ನೆಂದಿನಸಯ್ಯಾ, ಕೂಡಲಸಂಗಮದೇವಾ ನಿಮ್ಮ ಮಹಾಮನೆಯ ಮಗನೆಂದೆನಿಸಯ್ಯ" ಎಂಬ ಮಾತಿನಂತೆ ಭಾರತದ ಅದರಲ್ಲೂ ವಿಶೇಷವಾಗಿ ಕರ್ನಾಟಕದ ಪ್ರಮುಖರು ಅಮೆರಿಕದಲ್ಲಿ ಎಲ್ಲರನ್ನೂ ಒಗ್ಗಟ್ಟಾಗಿಸುವುದಕ್ಕೆ ಮುಂದಾಗಿರುವುದು ಹೆಮ್ಮೆಯ ವಿಷಯವಾಗಿದೆ.

ಸರಕಾರದ ಯಾವುದೆ ಸಹಾಯವಿಲ್ಲದೇ 47ನೇಯ ಶರಣ ಸಂಗಮ ಕಾರ್ಯಕ್ರಮವನ್ನ ಯಶಸ್ವಿಯಾಗಿ ನಡೆಸಿಕೊಂಡು ಬಂದಿರುವುದು ಶ್ಲಾಘನೀಯವಾಗಿದೆ. ಅಮೆರಿಕದ ವೀರಶೈವ ಲಿಂಗಾಯತ ಸಮಾಜದವರು, ಸಮಾಜಕ್ಕಾಗಿ 8 ಕೋಟಿ ರೂಪಾಯಿ ಸೇರಿಸಿದ್ದು ಸ್ಮರಣೀಯ.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಪ್ರಭಾಕರ ಕೋರೆಯವರು ಶರಣ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಸವಣ್ಣನವರು ತಮ್ಮ ವಚನಗಳ ಮೂಲಕ ಕಾಯಕವೇ ಕೈಲಾಸ, ದಯವೇ ಧರ್ಮದ ಮೂಲ ಎಂಬಂತಹ ಸಾಮಾಜಿಕ ಮತ್ತು ಧಾರ್ಮಿಕ ತತ್ವಗಳನ್ನು ಸಾರಿದ್ದಾರೆ. "ಒಂದಾಗುವ" ಎಂಬ ಆಶಯವು ಅವರ ವಚನಗಳಲ್ಲಿ ಅಂತರ್ಗತವಾಗಿ ಕಂಡುಬರುತ್ತದೆ, ಇದು ಭಕ್ತನು ದೇವರೊಂದಿಗೆ ಐಕ್ಯವಾಗುವ ಅಥವಾ ಶರಣರ ಸಮುದಾಯದಲ್ಲಿ ಬೆರೆಯುವ ಆಶಯವನ್ನು ಸೂಚಿಸುತ್ತದೆ ಎಂಬುದನ್ನು ನಾವೂ ಅರಿತುಕೊಳ್ಳಬೇಕೆಂದು ಹೇಳಿದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ