Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಕೋಟೆ ನಾಡಿನಲ್ಲಿ ಬರೋಬ್ಬರಿ 5 ಸಾವಿರ ಹುದ್ದೆಗಳ ಭರ್ತಿ: ಜಿಲ್ಲಾಧಿಕಾರಿ ವೆಂಕಟೇಶ್

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬರುವ ಮಾರ್ಚ್ 01 ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಬೃಹತ್ ಉದ್ಯೋಗ ಆಯೋಜಿಸಲಾಗಿದ್ದು, 50 ಕ್ಕೂ ಹೆಚ್ಚು ಕಂಪನಿಗಳು 5 ಸಾವಿರಕ್ಕೂ ಹೆಚ್ಚು ಉದ್ಯೋಗ ನೀಡಲು ಆಗಮಿಸುತ್ತಿದ್ದು, ಉದ್ಯೋಗ ಮೇಳವನ್ನು ಶಿಸ್ತುಬದ್ಧವಾಗಿ ಆಯೋಜಿಸಲು ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.  
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಕೌಶಲ್ಯ ಮಿಷನ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೃಹತ್ ಉದ್ಯೋಗ ಮೇಳದಲ್ಲಿ ಸುಮಾರು 50ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ಜಿಲ್ಲೆಯು ಯುವ ಜನತೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲೆಯ ಹೆಚ್ಚು ಅಭ್ಯರ್ಥಿಗಳಿಗೆ ಉದ್ಯೋಗ ಸೃಜಿಸಲು ಕ್ರಮವಹಿಸಬೇಕು ಎಂದು ಹೇಳಿದರು.

ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಮೊದಲು ಆನ್ಲೈನ್ ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಆನ್ಲೈನ್ನಲ್ಲಿ ನೊಂದಣಿ ಮಾಡಿಕೊಂಡವರಿಗೆ ಸಂದರ್ಶನಕ್ಕೆ ಮೊದಲ ಆದ್ಯತೆ ಕೊಟ್ಟು, ಆನ್ಲೈನ್ನಲ್ಲಿ ನೊಂದಣಿ ಮಾಡಿಕೊಳ್ಳದವರ ನೋಂದಣಿಗೆ ಹೆಚ್ಚಿನ ಮೈದಾನದಲ್ಲಿ ಹೆಚ್ಚಿನ ಕೌಂಟರ್ಗಳನ್ನು ಸ್ಥಾಪಿಸಿ, ತ್ವರಿತವಾಗಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ, ನೋಂದಣಿ ಸಂಖ್ಯೆ, ಟೋಕನ್ಗಳನ್ನು ನೀಡಬೇಕು.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪನಿಗಳು, ಲಭ್ಯವಿರುವ ಹುದ್ದೆಗಳು ಸೇರಿದಂತೆ ಕಂಪನಿಗಳ ಆಯ್ಕೆ ಕುರಿತು ಪ್ರದರ್ಶನ ಫಲಕಗಳಲ್ಲಿ ಮಾಹಿತಿ ಪ್ರದರ್ಶಿಸಬೇಕು. ಇದರಿಂದ ಉದ್ಯೋಗ ಮೇಳದಲ್ಲಿ ಆಗುವ ಅನಗತ್ಯ ಗೊಂದಲ ತಪ್ಪಿಸಬೇಕು ಎಂದು ಹೇಳಿದರು.
ಉದ್ಯೋಗ ಮೇಳವನ್ನು ಪರಿಣಾಮಕಾರಿಯಾಗಿ ಆಯೋಜಿಸಲು ಈಗಾಗಲೇ 7 ಉಪಸಮಿತಿಗಳನ್ನು ರಚಿಸಲಾಗಿದೆ. ಉಪಸಮಿತಿಗಳು ತಮ್ಮ ಹಂತದಲ್ಲಿಯೇ ಪ್ರತ್ಯೇಕ ಸಭೆ ನಡೆಸಿ, ಸಮಿತಿಗಳು ತಮಗೆ ವಹಿಸುವ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಉಪ ಸಮಿತಿಯ ಮುಖ್ಯಸ್ಥರು ಬಗ್ಗೆ ನಿರ್ದೇಶನ ನೀಡಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಕ್ರಮವಹಿಸಬೇಕು.  ಯಾವುದೇ ತರಹದ ವ್ಯತ್ಯಾಸ ಆಗದಂತೆ ನೋಡಿಕೊಳ್ಳಬೇಕು. ಭಾಗವಹಿಸುವ ಪ್ರತಿಷ್ಠಿತ ಕಂಪನಿಗಳಿಗೆ, ಕಂಪನಿಗಳ ಪ್ರತಿನಿಧಿಗಳಿಗೆ ಅಗತ್ಯ ಮೂಲ ಸೌಕರ್ಯ ಹಾಗೂ ಉದ್ಯೋಗ ಆಕಾಂಕ್ಷಿಗಳಿಗೆ ಕುಡಿಯುವ ನೀರು ಹಾಗೂ ನೆರಳಿನ ವ್ಯವಸ್ಥೆ ಮಾಡಬೇಕು.

ಅಭ್ಯರ್ಥಿಗಳಿಗೆ ಯಾವ ಸಂಖ್ಯೆಯ ಮಳಿಗೆಯಲ್ಲಿ ಯಾವ ಕಂಪನಿ, ಹುದ್ದೆಗಳು ಲಭ್ಯವಿದೆ ಎಂಬುದರ ಬಗ್ಗೆ ಧ್ವನಿವರ್ಧಕ ಮೂಲಕ ಮಾಹಿತಿ ನೀಡುವ ವ್ಯವಸ್ಥೆ ಆಗಬೇಕು.  ಅಭ್ಯರ್ಥಿಗಳು ಅನಗತ್ಯವಾಗಿ ಗುಂಪು ಗುಂಪಾಗಿ ಓಡಾಡಲು ಅವಕಾಶ ಮಾಡಿಕೊಡದೆ, ಶಿಸ್ತುಬದ್ಧವಾಗಿ ಸಂದರ್ಶನಕ್ಕೆ ಭಾಗಿಯಾಗಲು, ತಂಡಗಳನ್ನು ರೂಪಿಸಿ, ಅಭ್ಯರ್ಥಿಗಳಿಗೆ ಮಾಹಿತಿ ದೊರಕುವ ರೀತಿ ಕೆಲಸ ಮಾಡಬೇಕು.

 ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ವೇಮಣ್ಣ ಮಾತನಾಡಿ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗವು 2022-23ನೇ ಸಾಲಿನಲ್ಲಿ ಸಿಎಂಕೆಕೆವೈ ಯೋಜನೆಯಡಿ ಸ್ವಯಂ ಉದ್ಯೋಗ ಟೈಲರ್ ಜಾಬ್ರೂಲ್ನಲ್ಲಿ ತರಬೇತಿ ಪಡೆದ 149 ಫಲಾನುಭವಿಗಳಿಗೆ 149 ಹೊಲಿಗೆ ಯಂತ್ರ ಹಾಗೂ ಟೂಲ್ಕಿಟ್ಗಳನ್ನು ಸಂಕಲ್ಪ ಯೋಜನೆಯಡಿ ತರಬೇತಿ ಪಡೆದ ಫಲಾನುಭವಿಗಳಿಗೆ ವಿತರಿಸಲು ಈಗಾಗಲೇ ಸರಬರಾಜು ಮಾಡಲಾಗಿದೆ. ವಿಶ್ವಕರ್ಮ ಯೋಜನೆಯಲ್ಲಿ ತರಬೇತಿ ಪಡೆದ ಫಲಾನುಭವಿಗಳನ್ನು ಹೊರತುಪಡಿಸಿದ ಫಲಾನುಭವಿಗಳಿಗೆ ವಿತರಿಸಲು ಸೂಚಿಸಲಾಗಿದೆ. ತರಬೇತಿ ಸಂಸ್ಥೆಗೆ ತರಬೇತಿ ಪಡೆದ ಫಲಾನುಭವಿಗಳ ದಾಖಲಾತಿ ಸಲ್ಲಿಸಿದ ನಂತರ ವಿತರಿಸಲು ಕ್ರಮವಹಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.

 ವಿಶ್ವಕರ್ಮ ಯೋಜನೆಯಡಿ ಮೂರನೇ ಹಂತದಲ್ಲಿ ಪರಿಶೀಲಿಸಲಾದ 39,625 ಫಲಾನುಭವಿಗಳಲ್ಲಿ 34,234 ಫಲಾನುಭವಿಗಳಿಗೆ ತರಬೇತಿ ನೀಡಲಾಗಿರುತ್ತದೆ. ಪ್ರಸ್ತುತ ದರ್ಜಿ, ಬಡಿಗಿ ಮತ್ತು ಮೆಷನ್ನಗಳಲ್ಲಿ ನೋಂದಣಿ ಕಾರ್ಯ ಸ್ಥಗಿತಗೊಂಡಿರುವ ಬಗ್ಗೆ ದಿಶಾ ಸಭೆಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಮಾಹಿತಿ ನೀಡಿರುತ್ತಾರೆ. ಮತ್ತು ಪ್ರಸ್ತುತ 376 ಫಲಾನುಭವಿಗಳಿಗೆ ತರಬೇತಿ ನೀಡಬೇಕಾಗಿದ್ದು.

ನೋಂದಣಿ ಕಾರ್ಯ ಜಿಲ್ಲೆಯಲ್ಲಿ ಕಡಿಮೆ ಇರುತ್ತದೆ. ಪ್ರಸ್ತುತ ವಿಶ್ವಕರ್ಮ ಯೋಜನೆಯ ನಿರ್ವಹಣೆಗೆ ಜಿಲ್ಲಾ ಸಂಯೋಜಕರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ಡೇ-ನಲ್ಮ್ ಯೋಜನೆ, ಪಿಎಂ ಸ್ವ-ನಿಧಿ ಮತ್ತು ಸ್ವ-ನಿಧಿ ಸೇ ಸಮೃದ್ಧಿ ಯೋಜನೆಯ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಉದ್ಯೋಗ ಮೇಳದ ಪೋಸ್ಟರ್ಗಳನ್ನು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಬಿಡುಗಡೆಗೊಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಡಾ.ವೆಂಕಟೇಶ್ ನಾಯ್ಕ್, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ಗಾಯತ್ರಿ, ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಆನಂದ್, ಜಂಟಿ ಕೃಷಿನಿರ್ದೇಶಕ ಮಂಜುನಾಥ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂದನ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ