Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ವಿದ್ಯಾರ್ಥಿಗಳ ವಿಕಸನಕ್ಕೆ ಎನ್ಎಸ್ಎಸ್ ಸಹಕಾರಿ-ವಿಜಯ ಮಾರಹನುಮಯ್ಯ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಆಗುತ್ತವೆ ಎಂದು ಡಾ.ಅಂಬೇಡ್ಕರ್ ವಿದ್ಯಾಕೇಂದ್ರದ ಅಧ್ಯಕ್ಷೆ ವಿಜಯ ಮಾರ ಹನುಮಯ್ಯ ತಿಳಿಸಿದರು.
 

      ಅವರು ದೊಡ್ಡಬಳ್ಳಾಪುರ ಕಸಬಾ ವೀರಾಪುರ ಗ್ರಾಮದಲ್ಲಿ  ಮಾರಸಂದ್ರ ಪಿ ಕೆ ಬಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.   ಶಿಸ್ತುಬದ್ದ   ಜೀವನ ಶೈಲಿ‌ವಿದ್ಯಾರ್ಥಿಗಳಿಗೆ ಬಹುಮುಖ್ಯ.

 ದುರಾಭ್ಯಾಸಗಳು ವಿದ್ಯಾರ್ಥಿಗಳ ಭವಿಷ್ಯವನ್ನು  ಹಾಳು ಮಾಡುತ್ತವೆ.  ವಿದ್ಯಾರ್ಥಿಗಳು ಪಠ್ಯ ವಿಷಯಗಳಿಗೆ ಮಾತ್ರ ಸೀಮಿತ ಆಗಬಾರದು. ಪಠ್ಯೇತರ ಚಟುವಟಿಕೆಗಳಲ್ಲಿ  ತಮ್ಮ ಆಸಕ್ತಿಯನ್ನು ಹೊಂದಬೇಕು.   ಗ್ತಾಮೀಣ ಪ್ರದೇಶದ  ಸಮಕಾಲೀನ ಸಾಮಾಜಿಕ ಮತ್ತು ಸಾಂಸ್ಕೃತಿಕ  ಪರಿಸ್ಥಿತಿಯನ್ನು  ಅರಿಯಲು  ವಿಶೇಷ ಶಿಬಿರಗಳಿಂದ ಅನುಕೂಲವಾಗುತ್ತದೆ ಎಂದರು. 

      ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕ ಸಾದಿಕ್ ಪಾಷ ಮಾತನಾಡಿನಮ್ಮ ಸುತ್ತಮುತ್ತಲ ಪರಿಸರವನ್ನು  ಸ್ವಚ್ಛತೆಯಲ್ಲಿ ಇರುವಂತೆ ಮಾಡುವುದು  ಎಲ್ಲಾ  ನಾಗರಿಕರ ಜವಾಬ್ದಾರಿ. ಶುಚಿತ್ವದಿಂದ ಆರೋಗ್ಯ ವೃದ್ದಿಸುತ್ತದೆ.

ಸ್ವಚ್ಛತೆಯ ಮಹತ್ವ ಕುರಿತು  ಜನಜಾಗೃತಿ ಹೆಚ್ಚಿನ‌ಪ್ರಮಾಣದಲ್ಲಿ ಆಗಬೇಕಾಗಿದೆ.  ವಿಶೇಷ ಸೇವಾ ಶಿಬಿಗಳಲ್ಲಿ ಭಾಗವಹಿಸಿದ್ದ. ಹಲವಾರು  ವಿದ್ಯಾರ್ಥಿಗಳು  ತಮ್ಮ ಮನೆಗಳಲ್ಲಿ ಜೀವನ ಶೈಲಿ ಬದಲಿಸಿ ಕೊಂಡಿದ್ದಾರೆ ಎಂದರು.

       ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ  ರೇವತಿ  ಮಾತನಾಡಿವಿದ್ಯಾರ್ಥಿ ಜೀವನದ ಹಂತದಲ್ಲಿಯೇ   ಯುವಜನತೆಯು ವಿದ್ಯೆ, ಜ್ಞಾನ ಮತ್ತು ಕೌಶಲ್ಯದ ಮಹತ್ವವನ್ನು  ಸಕಾಲದಲ್ಲಿ ಅರ್ಥ ಮಾಡಿಕೊಳ್ಳಬೇಕು.‌ 

 ನಮ್ಮ ಸುತ್ತಲಿನ ಸಮಾಜದ ಒಳಿತಿಗಾಗಿ   ಬದುಕನ್ನು  ಸಾರ್ಥಕಗೊಳಿಸಬೇಕು. ಮಹಾತ್ಮ ಗಾಂಧೀಜಿಯವರ  ತತ್ತ್ವ  ಮತ್ತು ಆದರ್ಶ ಚಿಂತನೆಗಳ‌ಆಶಯದಂತೆ  ರಾಷ್ಟ್ರೀಯ ಸೇವಾ ಯೋಜನೆ ಅಸ್ತಿತ್ವಕ್ಕೆ ಬಂದಿದೆ.  ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯನ್ನು  ಬದುಕಿನಲ್ಲಿ ಅಳವಡಿಸಿಕೊಂಡರೆ  ಮಹಾತ್ಮ ಗಾಂಧೀಜಿ ಅವರ  ಕನಸು ನನಸಾಗುತ್ತದೆ ಎಂದರು. 

    ಸಮಾರಂಭದಲ್ಲಿ ಡಾ.ಅಂಬೇಡ್ಕರ್ ವಿದ್ಯಾಕೇಂದ್ರದ ಅಧ್ಯಕ್ಷೆ ವಿಜಯ ಮಾರ ಹನುಮಯ್ಯಆಡಳಿತಾಧಿಕಾರಿ ಟಿ.ಎಂ.ಕರಗಯ್ಯ, ಪಿಕೆಬಿ ಪದವಿ ಪೂರ್ವ ಕಾಲೇಜಿನ‌ಪ್ರಾಂಶುಪಾಲ ಎಂ.ಆನಂದರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಎ.ಆರ್.ಗಂಗಾಧರೇಶ್ವರ‌ಶಿಬಿರಾಧಿಕಾರಿ ಕೆ.ಆರ್.ಪ್ರಸನ್ನಕುಮಾರ್, ಮಜರಾ ಹೊಸಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ, ಉಪಾಧ್ಯಕ್ಷೆ ಮೀನಾಸದಸ್ಯರುಗಳಾದ ವಿಮಲಪಿಳ್ಳಾಂಜಪ್ಪ, ವಿ.ಎಂ.ವಿಜಯಕುಮಾರ್, ಲೀಲಮ್ಮ ಪಿಳ್ಳೇಗೌಡ, ವಿ.ಎಂ.ಶಿವಕುಮಾರ್ವೀರಾಪುರ ಗ್ರಾಮದ  ಮುಖಂಡರುಗಳಾದ ಪಿ.ಮುನಿಯಪ್ಪ, ಲಕ್ಷ್ಮೀನಾರಾಯಣ್, ಪಿಳ್ಳೇಗೌಡ, ಬಸವರಾಜು, ಹನುಮಂತಪ್ಪಮುನೇಗೌಡ, ಗಂಗಸಿದ್ದಪ್ಪ, ಸತ್ಯನಾರಾಯಣ್, ಪಿಕೆಬಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು, ಬೋಧಕೇತರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅಜ್ಜ-ಅಜ್ಜಿಯರ ದಿನಾಚರಣೆ: ಹಿರಿಯ ಜೀವಗಳೊಂದಿಗೆ ಮಗುವಾದ ಸಂಭ್ರಮ!ಆತ್ರೇಯ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳ ಅತಂತ್ರ ಭವಿಷ್ಯ: ಸರ್ಕಾರದ ತುರ್ತು ಮಧ್ಯಪ್ರವೇಶಕ್ಕೆ ಬಿ.ಎಸ್.ಚಂದ್ರಶೇಖರ್ ಆಗ್ರಹಸತೀಶ್ ಜಾರಕಿಹೊಳಿ ಮೇಲಿನ ಇ.ಡಿ ದಾಳಿ ರಾಜಕೀಯ ಪ್ರೇರಿತ: ಕಾಂಗ್ರೆಸ್ ಮುಖಂಡರ ತೀವ್ರ ಆಕ್ರೋಶತನ್ನ ಪತ್ನಿಯನ್ನು ಆಕೆಯ ಇಚ್ಛೆಯಂತೆ ಪ್ರಿಯಕರನೊಡನೆ ಮದುವೆ ಮಾಡಿಸಿದ ವಿಶಾಲ ಹೃದಯದ ಪತಿ!ಪತ್ರಕರ್ತ ಜಿ. ಮಹಂತೇಶ್‌ಗೆ ಜೀವ ಬೆದರಿಕೆ ಪ್ರಕರಣ: ವಿಪಕ್ಷಗಳ ತೀವ್ರ ಆಕ್ರೋಶದ ಬೆನ್ನಲ್ಲೇ ಎಫ್‌ಐಆರ್ ದಾಖಲಿಸಿದ ನಂದಿನಿ ಲೇಔಟ್ ಪೊಲೀಸರುಜೈಲಿನಲ್ಲೂ ಮುಂದುವರಿದ ಪ್ರಜ್ವಲ್ ರೇವಣ್ಣ ವಿಕೃತಿ: ಸೆಲ್‌ನಲ್ಲೇ ಪೆನ್ ಡ್ರೈವ್ ಬಳಸಿ ಅಶ್ಲೀಲ ವೀಡಿಯೋ ವೀಕ್ಷಣೆ!ಮಸೀದಿ ಮುಂದೆ ಗಣೇಶ ಮೆರವಣಿಗೆ ನಿಷೇಧ: ವಿವಾದಾತ್ಮಕ ಹೇಳಿಕೆಗೆ ತೀವ್ರ ಆಕ್ರೋಶಭಾರತ-ಚೀನಾ ಸಂಬಂಧಕ್ಕೆ ಹೊಸ ಚೈತನ್ಯ: ಭಾರತ ಭೇಟಿಗಾಗಿ ದೆಹಲಿಗೆ ಆಗಮಿಸಿದ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ಇಂಟರ್ನೆಟ್ ಇಲ್ಲದೆಯೂ ಯುಪಿಐ ಪಾವತಿ: ‘ಟ್ಯಾಪ್‌ಆ್ಯಂಡ್‌ಪೇ’ ಹಾಗೂ ‘ಮೈಯುಪಿಐ’ ಹೊಸ ಫೀಚರ್‌ಪರಿಚಯಿಸಿದ ಆರ್‌ಬಿಐನಮಗೆ ಹಾಕಿರುವ ಬೇಡಿ ಬಿಚ್ಚಿದರೆ ಕರ್ನಾಟಕವನ್ನೇ ಸ್ವಚ್ಛ ಮಾಡುತ್ತೇವೆ: ನ್ಯಾ. ಬಿ. ವೀರಪ್ಪ