Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮ ಪಂಚಾಯತಿ, ನಗರ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ, ರಾಜಕೀಯ ಪಕ್ಷಗಳ ಸಭೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರಸಭೆ ಹಾಗೂ ಚಿತ್ರದುರ್ಗ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಹಲವು ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು
, ಈ ಸಂಬಂದ ರಾಜಕೀಯ ಪಕ್ಷಗಳ ಸಭೆ ನಡೆಸಿ ಮಾಹಿತಿ ನೀಡಲಾಯಿತು.

ನಗರದ ತಹಶೀಲ್ದಾರ್ ಕಾರ್ಯಾಲಯದಲ್ಲಿ ತಹಶೀಲ್ದಾರ್ ಡಾ.ನಾಗವೇಣಿ ಹಾಗೂ ಪೌರಾಯಕ್ತೆ ಎಂ.ರೇಣುಕಾ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ರಾಜಕೀಯ ಪಕ್ಷಗಳ ಸಭೆ ನಡೆಸಿ, ಕರಡು ಮತದಾರರ ಪಟ್ಟಿ ಪ್ರಚುರ ಪಡಿಸಿ, ಚುನಾವಣಾ ವೇಳಾಪಟ್ಟಿಯನ್ನು ರಾಜಕೀಯ ಪಕ್ಷಗಳಿಗೆ ನೀಡಲಾಯಿತು.

ಚಿತ್ರದುರ್ಗ ತಾಲ್ಲೂಕಿನ ವ್ಯಾಪ್ತಿಯಲ್ಲಿ ಚಿಕ್ಕಗೊಂಡನಹಳ್ಳಿ ಗ್ರಾಮಪಂಚಾಯಿತಿ ಗೊಲ್ಲರಹಟ್ಟಿ ಕ್ಷೇತ್ರಕ್ಕೆ ಸಾಮಾನ್ಯ (ಮಹಿಳೆ), ಭರಮಸಾಗರ ಗ್ರಾಮಪಂಚಾಯಿತಿ ಭರಮಸಾಗರ-4 ಕ್ಷೇತ್ರಕ್ಕೆ ಸಾಮಾನ್ಯ (ಮಹಿಳೆ), ಹಿರೇಗುಂಟನೂರು ಗ್ರಾಮ ಪಂಚಾಯಿತಿ ಗೊಲ್ಲರಹಟ್ಟಿ ಕ್ಷೇತ್ರ ಸಾಮಾನ್ಯ, ಜಂಪಣ್ಣನಾಯಕನಕೋಟೆ ಗ್ರಾಮ ಪಂಚಾಯಿತಿಯ ಜಂಪಣ್ಣನಾಯಕನಕೋಟೆ-1 ಕ್ಷೇತ್ರಕ್ಕೆ ಸಾಮಾನ್ಯ(ಮಹಿಳೆ) ಹಾಗೂ ಚಿತ್ರದುರ್ಗ ನಗರಸಭೆ ವಾರ್ಡ್ ಸಂಖ್ಯೆ-15ರ ಕ್ಷೇತ್ರಕ್ಕೆ  ಹಿಂದುಳಿದ ವರ್ಗ (ಎ)  ಖಾಲಿ ಇರುವ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಿದ್ದು, ಈ ಸಂಬಂಧ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ  ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಇದ್ದರು.
ನಗರಸಭೆ ಚುನಾವಣೆ ನಾಮಪತ್ರ ಸಲ್ಲಿಕೆ: ಚುನಾವಣಾಧಿಕಾರಿಗಳ ಕಚೇರಿ ನಗರಸಭೆ ಕಾರ್ಯಾಲಯ, ಬಿ.ಡಿ.ರೋಡ್‌, ಚಿತ್ರದುರ್ಗ ನಗರ ಇಲ್ಲಿ  ಚುನಾವಣೆ ನಾಮ ಪತ್ರ ಸಲ್ಲಿಕೆ ನಡೆಯಲಿದ್ದು, 2024ರ ನವೆಂಬರ್ 04ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸುವರು.  ನ.11 ನಾಮ ಪತ್ರ ಸಲ್ಲಿಕೆ ಕೊನೆಯ ದಿನ, ನ.12ರಂದು  ನಾಮಪತ್ರಗಳನ್ನು ಪರಿಶೀಲನೆ, ನ.14 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನ. ನ.23ರಂದು ಚುನಾವಣೆ ಅವಶ್ಯಕತೆ ಇದ್ದರೆ ಚುನಾವಣೆ ನಡೆಯಲಿದೆ. ನ.26 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ.

ಗ್ರಾಮ ಪಂಚಾಯಿತಿ ನಾಮಪತ್ರ ಸಲ್ಲಿಕೆ: ಸಂಬಂದಪಟ್ಟ ಗ್ರಾಮ ಪಂಚಾಯಿತಿಗಳು  ಚುನಾವಣಾಧಿಕಾರಿಗಳ ಕಚೇರಿ ಆಗಿರುತ್ತವೆ. 2024 ರ ನ.06ರಂದು ಚುನಾವಣೆ ನಾಮ ಪತ್ರ ಸಲ್ಲಿಕೆ ನಡೆಯಲಿದೆ. ನ.12  ನಾಮ ಪತ್ರ ಸಲ್ಲಿಕೆ ಕೊನೆಯ ದಿನ. ನ.13 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.15  ಉಮೇದು ವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನ. ನ.23 ರಂದು ಚುನಾವಣೆ ಅವಶ್ಯಕತೆ ಇದ್ದರೆ ಚುನಾವಣೆ ನಡೆಯಲಿದೆ. ನ.26ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ