Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಬಹುಮುಖ ಪ್ರತಿಭೆಯ ಶಿಕ್ಷಣ ಶಿಲ್ಪಿ ವೊಡೇ ಪಿ ಕೃಷ್ಣ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶ್ರೀ ಡಾ. ವೂಡೇ ಪಿ ಕೃಷ್ಣ ರಾಜ್ಯಮಟ್ಟದ ಗಾಂಧಿ ಸ್ಮಾರಕ ನಿಧಿಯ ಅದ್ಯಕ್ಷರು, ಶಿಕ್ಷಣ ತಜ್ಞರು, ಬರಹಗಾರರು. ಇವರು ಬೆಂಗಳೂರಿನವರಾದರೂ ಇವರ ಪೂರ್ವಜರು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಡೆವೂಡೇ  ಗ್ರಾಮದವರು. ಇವರ ಪೂರ್ವಜರು ಸರಿಸುಮಾರು 200 ವರ್ಷಗಳ ಹಿಂದೆ ಬೆಂಗಳೂರಿಗೆ ಹೋಗಿ ನೆಲೆಸಿ ಆ ದಿನಮಾನಗಳಲ್ಲಿ ವ್ಯಾಪಾರ ನೀತಿಯಲ್ಲಿ ಜೀವನ ಕಟ್ಟಿಕೊಳ್ಳಲು ದೊಡ್ಡ ಪ್ರಮಾಣದಲ್ಲಿ ಸಫಲತೆ ಕಂಡಿದ್ದಾರೆ.

ವೊಡೇ ಕುಟುಂಬದ ಹೆಸರಿನಲ್ಲಿ ಸಾಮಾಜಿಕ ಕ್ಷೇತ್ರದಲ್ಲಿ ಗುರುತ್ತಿಸಿಕೊಂಡ ಇವರ ಪೂರ್ವಜರು ಸ್ವಾತಂತ್ರ ಸಂಗ್ರಾಮದಲ್ಲಿ ಪಾಲ್ಗೊಂಡಿದ್ದಾರೆ.

ವೊಡೇ ಪಿ ಕೃಷ್ಣ ಅವರ ಅಜ್ಜ  ಮೈಸೂರು ಸಂಸ್ಥಾನದ ಆಡಳಿತದಲ್ಲಿ  ಸಂವಿಧಾನದ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ನಾನು ತಿಳಿದಿದ್ದೇನೆ. ವೊಡೇ ಪಿ ಕೃಷ್ಣ ಅವರ ದೊಡ್ಡಪ್ಪ ಡಬ್ಲ್ಯುಎಚ್ ಹನುಮಂತಪ್ಪನವರು ಬೆಂಗಳೂರಿನ ಪ್ರಥಮ ಕಾರ್ಪೋರೇಶನ್ ಆಡಳಿತಕ್ಕೆ ಮೊದಲ ಮೇಯರ್ ಎಂಬ ವಿಚಾರ ಗೌರವಕ್ಕೆ ಪಾತ್ರವಾಗಿದೆ.

ಹಲವು ವರ್ಷಗಳ ಹಿಂದೆಯೇ ಬೆಂಗಳೂರಿನ ಗಾಂಧಿನಗರದ 5 ನೇ ಮುಖ್ಯ ರಸ್ತೆಗೆ ಡಬ್ಲ್ಯುಎಚ್ ಹನುಮಂತಪ್ಪ ಎಂಬ ಹೆಸರು ನಾಮಕರಣ ಮಾಡಲಾಗಿದೆ ಇದು ವೊಡೇ ಮನೆತನದ ಘನತೆಗೆ ಸಂಕೇತ. ವೊಡೇ ಪಿ ಕೃಷ್ಣ ಅವರು ಮೈಸೂರಿನಲ್ಲಿ ಶ್ರೀ ರಾಮಕೃಷ್ಣ ವಿದ್ಯಾಪೀಠದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಪಡೆದ ಇವರು ಎಂಜಿನಿಯರಿಂಗ್ ಹಾಗೂ ಕಾನೂನಿನಲ್ಲಿ ಸ್ನಾತಕೋತ್ತರ ಪದವಿಗಳನ್ನು ಪಡೆದಿದ್ದಾರೆ.

ವೊಡೇ ಪಿ ಕೃಷ್ಣ ಅವರು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಹಲವಾರು ಪ್ರಶಸ್ತಿ ಗೌರವಗಳಿಗೆ ಪಾತ್ರರಾಗಿದ್ದಾರೆ. ಅವುಗಳಲ್ಲಿ ಪ್ರಮುಖವಾದವು ಎಮಿನೆಂಟ್ ಮೆಕ್ಯಾನಿಕಲ್ ಇಂಜಿನಿಯರ್ ರಾಷ್ಟ್ರೀಯ ಪ್ರಶಸ್ತಿ, ರಾಜ್ಯ ಯುವ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ನಾಡೋಜ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ ಸೇರಿದಂತೆ ಇನ್ನು ಹಲವು ಪ್ರಶಸ್ತಿಗಳು ಲಭಿಸಿವೆ.

ವೊಡೇ ಪಿ ಕೃಷ್ಣ ಅವರು ಮಹಾತ್ಮ ಗಾಂಧಿ ಹಾಗೂ ಸ್ವಾಮಿ ವಿವೇಕಾನಂದರ ತತ್ವಗಳ ಅನುಯಾಯಿಗಳು. ವೊಡೇ ಪಿ ಕೃಷ್ಣ ಅವರು ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಗೆ ಗೌರವ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.

ಅವರಲ್ಲಿರುವ ಶಿಕ್ಷಣ ನೀತಿಯ ಜ್ಞಾನ ಹಾಗೂ ಸಾಮಾಜಿಕ ಕ್ಷೇತ್ರದ ಚಟುವಟಿಕೆಗಳನ್ನು ಸಾರ್ವಜನಿಕವಾಗಿ ಸದ್ಬಳಕೆ ಮಾಡಿಕೊಳ್ಳಲು ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರದ ಆಡಳಿತದಲ್ಲಿ ವೊಡೇ ಪಿ ಕೃಷ್ಣ ಅವರಿಗೆ ಮೇಲ್ಮನೆ ಸದಸ್ವತದ ರಾಜ್ಯದ ವಿಧಾನ ಪರಿಷತ್ತಿನ ಶಾಸಕ ಸ್ಥಾನ ಅಥವಾ ಕೇಂದ್ರದ ರಾಜ್ಯಸಭಾ ಸಂಸದ ಸ್ಥಾನ ನೀಡಲಿ ಎಂಬ ಮಹತ್ವದ ಮನವಿ ನಾಗರಿಕ ಸಮಾಜದಿಂದ ಕೇಳಿ ಬಂದಿದೆ. ಈ ವಿಚಾರದಲ್ಲಿ ಸಾಮಾಜಿಕ ಚಿಂತಕರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕಿದೆ.

 ಕಳೆದ ವರ್ಷ ಚಂದನ ಸುದ್ದಿವಾಹಿನಿ ವೊಡೇ ಪಿ ಕೃಷ್ಣ ಅವರನ್ನು ವಾರದ ಅತಿಥಿ ಸಂದರ್ಶನದ ಪೀಠಿಕೆಯಲ್ಲಿ ಅವರ ವಿಚಾರದ ಮೌಲ್ಯಗಳನ್ನು ಸಂದರ್ಶಿಸಿ ಪ್ರಸಾರ ಮಾಡಲಾಗಿದೆ ಮೇಲಿನ ವಿಡಿಯೋವನ್ನು ಸಂಪೂರ್ಣ ಗಮನಿಸಿ ಉತ್ತಮ ಸಮಾಜಕ್ಕೆ ಉತ್ತಮ ಸಂದೇಶವಾಗಿದೆ.
ಲೇಖನ-ರಘು ಗೌಡ 9916101265

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ