ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಸರ್ಕಾರದ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ಜುಲೈ 5ರಂದು ಭಾನುವಾರ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಆಗಮಿಸುವ ಅವರು ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿನ ‘ಭದ್ರಾ ಮೇಲ್ದಂಡೆ ಯೋಜನೆ'ಯ ವಿವಿಧ ಪ್ಯಾಕೇಜ್ಗಳ ಕಾಮಗಾರಿಗಳನ್ನು ವೀಕ್ಷಿಸಿಸುವರು.
ಮಧ್ಯಾಹ್ನ 2.30 ಕ್ಕೆ ಅಜ್ಜಂಪುರಕ್ಕೆ ಆಗಮಿಸುವ ಅವರು ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯ ವೈ- ಜಂಕ್ಷನ್ ಮತ್ತು ಚಿತ್ರದುರ್ಗ ಶಾಖಾ ಕಾಲುವೆ ಪ್ಯಾಕೇಜ್-4ರ ಬಾಟಲ್ನೆಕ್ಸ್ ಕಾಮಗಾರಿ ಪರಿಶೀಲನೆ ನಡೆಸುವರು.
ಸಂಜೆ 4.30ಕ್ಕೆ ಗೋನೂರು ಅಕ್ಷೆಡಕ್ಟ್ಗೆ ಆಗಮಿಸಿ, ಚಿತ್ರದುರ್ಗ ಶಾಖಾ ಕಾಲುವೆಯ ಪ್ಯಾಕೇಜ್-11 ರ ಕಾಮಗಾರಿಗಳ ವೀಕ್ಷಣೆ ನಡೆಸುವರು. ನಂತರ ಸಂಜೆ 5.30ಕ್ಕೆ ಚಿತ್ರದುರ್ಗದ ಭದ್ರಾ ಮೇಲ್ದಂಡೆ ಯೋಜನೆ ವಲಯ ಕಛೇರಿ ಸಭಾಂಗಣದಲ್ಲಿ ಉನ್ನತಾಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಸಭೆಯ ಬಳಿಕ ಸಚಿವರು ಚಿತ್ರದುರ್ಗದಿಂದ ರಸ್ತೆ ಮಾರ್ಗವಾಗಿ ಮರಳಿ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.



